97 ಕೆರೆಗಳಿಗೆ ಶೀಘ್ರ ನೀರು ಪೂರೈಕೆ
Team Udayavani, Apr 19, 2020, 4:57 PM IST
ಬಸವನಬಾಗೇವಾಡಿ: ಕೂಡಗಿ ಗ್ರಾಮದ ಬಳಿ ರೈಲ್ವೆ ಕ್ರಾಸಿಂಗ್ ಕಾಮಗಾರಿಯನ್ನು ಶಾಸಕ ಶಿವಾನಂದ ಪಾಟೀಲ ಪರಿಶೀಲಿಸಿದರು.
ಬಸವನಬಾಗೇವಾಡಿ: ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳ ಮೂಲಕ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಿಸುವ ಕಾರ್ಯ ಏ. 20 ಅಥವಾ 21ರಂದು ನಡೆಯಲಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.
ಶನಿವಾರ ಕೂಡಗಿ ಗ್ರಾಮದ ಬಳಿ ರೈಲ್ವೆ ಕ್ರಾಸಿಂಗ್ ಕಾಮಗಾರಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿವ ನೀರಿನ ತೊಂದರೆ ನೀಗಿಸಲು ಉಪ ಮುಖ್ಯಮಂತ್ರಿ ಗೊವಿಂದ ಕಾರಜೋಳ ಅವರು 2 ಟಿಎಂಸಿ ಅಡಿ ನೀರು ಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.
ಈ ಯೋಜನೆಯಡಿ ಬರುವ ಎಲ್ಲ ಸಾರ್ವಜನಿಕರು, ರೈತರು ನೀರನ್ನು ಮಿತವಾಗಿ ಬಳಸಬೇಕು. ಬೇಸಿಗೆ ಇನ್ನೂ ಎರಡು ತಿಂಗಳಿದ್ದು ಈ ನೀರನ್ನು ಕುಡಿಯಲು ಮಾತ್ರ ಬಳಸಬೇಕು ಎಂದು ಹೇಳಿದರು. ಕೆಬಿಜೆಎನ್ನೆಲ್ ಅಧಿಕಾರಿ ಆರ್. ಕೆ. ಕುಲಕರ್ಣಿ ಮಾತನಾಡಿ, ಕೂಡಗಿ ಗ್ರಾಮದ ಬಳಿ ರೈಲ್ವೆ ಕ್ರಾಸಿಂಗ್ ಕಾಮಗಾರಿ ಶೇ. 90 ಪೂರ್ಣಗೊಂಡಿದ್ದು ನೀರು ಹರಿಸಲು ತೊಂದರೆಯಿಲ್ಲ ಎಂದರು.
ಜಿಲ್ಲೆಯ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳ ಮೂಲಕ ಜಿಲ್ಲೆಯ 97 ಕೆರೆಗಳಿಗೆ ನೀರನ್ನು ತುಂಬಲಾಗುವುದು. ಜಿಲ್ಲೆಯ ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಎಲ್ಲ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.
ವಿಜಯಕುಮಾರ ಡಿ.ಕೆ, ಡಿ.ಬಸವರಾಜ, ವಿಜಯಕುಮಾರ, ಗ್ರಾಪಂ ಅಧ್ಯಕ್ಷ ಹುಸೇನಸಾಬ ಕೊಲ್ಹಾರ, ಡಿ.ಹೇಮಂತಕುಮಾರ, ಮುಖಂಡರಾದ ಪಿಂಟು ಪಾಟೀಲ, ಎಸ್.ಎಸ್. ಹರಸಂಗಿ, ಕೃಷ್ಣಪ್ಪ ಬೊಮ್ಮರೆಡ್ಡಿ, ಅಜೀಜ್ ಬಾಗವಾನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್