ಬಸರಕೋಡದಲ್ಲಿ ಬಸವೇಶ್ವರ ರಥೋತ್ಸವ
Team Udayavani, Apr 3, 2018, 1:12 PM IST
ಮುದ್ದೇಬಿಹಾಳ: ತಾಲೂಕಿನ ಬಸರಕೋಡದಲ್ಲಿ ಸೋಮವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ಪವಾಡ
ಬಸವೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ರಥೋತ್ಸವಕ್ಕೂ ಮೊದಲು ಮಧ್ಯಾಹ್ನ ನಿಡಗುಂದಿ ಪಟ್ಟಣದಿಂದ ತೇರಿನ ಕಳಸ, ಬೆಳ್ಳಿಯ ಛತ್ರಿ, ಕಾಶಿನಕುಂಟಿ ಗ್ರಾಮದಿಂದ ಪಲ್ಲಕ್ಕಿ , ರೂಢಗಿ ಗ್ರಾಮದಿಂದ ತೇರಿನ ಮಿಣಿ ಮೆರವಣಿಗೆ ಸಮೇತ ಆಗಮಿಸಿದ್ದರು. ಮೂರುಲಿಂಗನ ದೇವಸ್ಥಾನದಿಂದ ಪವಾಡ ಬಸವೇಶ್ವರ ದೇವಸ್ಥಾನದವರೆಗೆ ಕಳಸದ ಮೆರವಣಿಗೆ ನಡೆಯಿತು. ಸಂಜೆ ಕಳಸವನ್ನು ರಥದ ಶಿಖರಕ್ಕೇರಿಸಿದ ಮೇಲೆ ವಿಶೇಷ ಪೂಜೆ ಸಲ್ಲಿಸಿ ನೂರಾರು ಶರಣರು, ಸಾವಿರಾರು ಭಕ್ತರು ಹಷೋದ್ಘಾರದೊಂದಿಗೆ ಮಹಾರಥೋತ್ಸವ ನೆರವೇರಿತು.
ದೇವರಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಮಹಾದೇವಿ ಪಾಟೀಲ, ನಮ್ಮ ಕಾಂಗ್ರೆಸ್ನ ಮುದ್ದೇಬಿಹಾಳ ಮತಕ್ಷೇತ್ರದ ಅಭ್ಯರ್ಥಿ ರಕ್ಷಿತ್ ವರ್ತೂರು, ಪವಾಡ ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಕೆ.ವೈ. ಬಿರಾದಾರ, ಪದಾಧಿಕಾರಿಗಳಾದ ಎಸ್.ಬಿ. ನಾಡಗೌಡರ, ಎಂ.ಆರ್. ನಾಡಗೌಡರ, ಜಾತ್ರಾ ಕಮೀಟಿ ಅಧ್ಯಕ್ಷ ಶ್ರೀಶೈಲ ಸೂಳಿಭಾವಿ, ಶ್ರೀಶೈಲ ಮೇಟಿ, ಅಪ್ಪುಧಣಿ ನಾಡಗೌಡ,
ಸಂಗನಗೌಡ ಬಿರಾದಾರ, ಅರವಿಂದ ಕೊಪ್ಪ ಇದ್ದರು.
ಮಹಾರಥೋತ್ಸವ ಹಿನ್ನೆಲೆ ದೇವಸ್ಥಾನದ ತೋಟದಲ್ಲಿ ಬೀಡು ಬಿಟ್ಟಿದ್ದ ನೂರಾರು ಶರಣ, ಶರಣೆಯರಿಗೆ ಭಕ್ತರು ಪಾದಪೂಜೆ ಸಲ್ಲಿಸಿ, ತಮ್ಮ ಮನೆಗಳಿಂದ ತಂದಿದ್ದ ಸಜ್ಜಕ, ಮಾದಲಿ ನೈವೇದ್ಯ ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ