ನೊಂದವರ ಧ್ವನಿಯಾಗಲಿ ಸಂಘಟನೆ


Team Udayavani, Jan 16, 2022, 2:56 PM IST

16voice

ದೇವರಹಿಪ್ಪರಗಿ: ಪ್ರತಿಯೊಂದು ಸಂಘಟನೆ ಗಳು ನೊಂದವರ ಧ್ವನಿಯಾಗಿ, ಸಮಾಜ ಪರವಾಗಿ ಕಾರ್ಯನಿರ್ವಹಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಸಮಿತಿಯ ಜಿಲ್ಲಾ ಸಂಚಾಲಕ ಚಂದ್ರಕಾಂತ ಸಿಂಗೆ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೊಂದವರಿಗೆ ನೆರವಾಗಲು ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯ ಮಾಡಲಿ. ಸಮಾಜದಲ್ಲಿ ಶೋಷಿತ ವರ್ಗವನ್ನು ಮೇಲೆತ್ತುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ಸಂಘಟನೆಗೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲಾ ಸಂಘಟನಾ ಸಂಚಾಲಕ ಹೂಯೋಗಿ ತಳ್ಳೊಳಿ ಪ್ರಾಸ್ತಾವಿಕ ಮಾತನಾಡಿ, ಸಮಿತಿ ಸಮಾಜದ ಎಲ್ಲ ವರ್ಗಗಳ ನೊಂದವರ ಧ್ವನಿಯಾಗಿ ನ್ಯಾಯ ಕೊಡಿಸುವಲ್ಲಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದೇವೆ. ಇದು ಕೇವಲ ದಲಿತರಿಗೆ ಸೀಮಿತವಾಗಿಲ್ಲ. ಎಲ್ಲ ವರ್ಗಗಳ ನೊಂದವರ ಧ್ವನಿಯಾಗಿ ಕೆಲಸ ಮಾಡುತ್ತ ಬಂದಿರುವ ತನ್ನದೇ ಆದ ಇತಿಹಾಸ ಹೊಂದಿದೆ. ಆ ನಿಟ್ಟಿನಲ್ಲಿ ಡಾ| ಬಾಬಾಸಾಹೇಬರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಅವರ ಆಶಯದಂತೆ ಸಮಾಜ ಸುಧಾರಿಸುವಲ್ಲಿ ಶ್ರಮ ವಹಿಸುತ್ತೇವೆ ಎಂದರು.

ಎಇ ಎಂ.ಎನ್‌. ಪಾಟೀಲ, ವಿಭಾಗೀಯ ಸಂಘಟನಾ ಸಂಚಾಲಕ ರಾವುತ್‌ ತಳಕೇರಿ, ದೇವೆಂದ್ರ ಹಾದಿಮನಿ, ಜಿಲ್ಲಾ ಸಂಘಟನಾ ಸಂಚಾಲಕ ಗುರುರಾಜ ಗುಡಿಮನಿ, ಚಿನ್ನು ಕಟ್ಟಿಮನಿ, ಸಿದ್ದು ಮೇಲಿನಮನಿ, ವಿದ್ಯಾರ್ಥಿ ಒಕ್ಕೂಟದ ನಾಗೇಶ ಕಟ್ಟಿಮನಿ, ಕಾಶೀನಾಥ ತಳಕೇರಿ ಮಾತನಾಡಿದರು. ಪಪಂ ನೂತನ ಸದಸ್ಯರಾದ ಬಶೀರಶೇಠ ಬೇಪಾರಿ, ಉಮೇಶ ರೂಗಿ, ಪ್ರಕಾಶ ಮಲ್ಹಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಈಶ್ವರ ಚಲವಾದಿ, ಈಶ್ವರ ಬಡಿಗೇರ, ರಮೇಶ ಮ್ಯಾಕೇರಿ ಸೇರಿದಂತೆ ಮತ್ತಿತರರು ಇದ್ದರು.

ದೇವರಹಿಪ್ಪರಗಿ ತಾಲೂಕು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬಸವರಾಜ ತಳಕೇರಿ ತಾಲೂಕು ಸಂಚಾಲಕರಾಗಿ ನೇಮಕವಾಗಿದ್ದಾರೆ. ಅದರಂತೆ ಸಂಘಟನಾ ಸಂಚಾಲಕರಾಗಿ ಶಿವಾನಂದ ವಾಲೀಕಾರ, ಶಿವಾನಂದ ಇಂಗಳಗಿ, ಸಾಹೆಬಣ್ಣ ದಳಪತಿ, ಖಜಾಂಚಿಯಾಗಿ ಪ್ರಕಾಶ ಖಾದ್ರಿ, ಪ್ರಕಾಶ ರೊಟ್ಟಿ ಹಾಗೂ ಸಿದ್ದಾರ್ಥ ತಳಕೇರಿ ಕಾರ್ಯ ನಿರ್ವಾಹಕ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.