ಭಜಂತ್ರಿ ಸಮಾಜ ಏಳ್ಗೆಗೆ ಶ್ರಮಿಸುವೆ: ಮನಗೂಳಿ


Team Udayavani, Oct 26, 2018, 11:06 AM IST

ray-3.jpg

ಸಿಂದಗಿ: ಭಜಂತ್ರಿ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತೋಟಗಾರಿಕೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ ಹೇಳಿದರು.

ಗುರುವಾರ ವಿದ್ಯಾನಗರದ 4ನೇ ಕ್ರಾಸ್‌ ನಲ್ಲಿರುವ ಭಜಂತ್ರಿ ಲೇಔಟ್‌ನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ರಾಂಪುರ ಪಿ.ಎ., ಎಸ್‌ ಸಿಪಿ ಯೋಜನೆ ಅಡಿಯಲ್ಲಿ ನಿರ್ಮಿಸಲಾಗುವ ಭಜಂತ್ರಿ (ಕೊರಮ) ಸಮಾಜದ ಗುರು ಶರಣ ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಭಜಂತ್ರಿ ಸಮಾಜ ಕಾಯಕ ಜೀವಿಗಳು. ಎಲ್ಲ ಶುಭ ಕಾರ್ಯಕ್ರಮಗಳಿಗೆ ಭಜಂತ್ರಿ ಸಮುದಾಯ ಪ್ರಮುಖರಾಗಿರುತ್ತಾರೆ. 

ಎಲ್ಲ ಸಮುದಾಯದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸುವ ಸಮುದಾಯವಾಗಿದೆ. ಈ ಸಮುದಾಯಕ್ಕೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡ ಗುಣಮಟ್ಟದಿಂದ ಮತ್ತು ಶೀಘ್ರದಲ್ಲಿ ಪೂರ್ಣಗೊಳ್ಳಬೇಕು. ಸರಕಾರದಿಂದ ಈಗಾಗಲೇ 50 ಲಕ್ಷ ಅನುದಾನ ನೀಡಲಾಗಿದ್ದು, ಇನ್ನೂ ಹೆಚ್ಚಿಗೆ ಬೇಕಾದಲ್ಲಿ ಅನುದಾನ ಬಿಡುಗಡೆ ಮಾಡುತ್ತೇನೆ ಎಂದರು.

ನೀವು ನನಗೆ ಮತ ನೀಡಿದ ಫಲವಾಗಿ ನಾನು ಮಂತ್ರಿಯಾಗಿದ್ದೇನೆ. ಈ ಮಂತ್ರಿ ಸ್ಥಾನ ನನ್ನ ಮನೆತನಕ್ಕೆ ಮತ್ತು ಮಕ್ಕಳಿಗಲ್ಲ. ಏನೇ ಇದ್ದರು ಜನರ ಸೇವೆಗಾಗಿ. ಆನರ ಅಭಿವೃದ್ಧಿಗಾಗಿದೆ. ಆದ್ದರಿಂದ ಸಮುದಾಯದ ಅಭಿವೃದ್ಧಿಗಾಗಿ ಹೇಳಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಸಮಾಜದ ಹಿರಿಯ ಎಸ್‌.ಬಿ. ಭಜಂತ್ರಿ ಮಾತನಾಡಿ, ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡದ ಸರಕಾರ ನೀಡಿದ ಅನುದಾನ ಸಾಲದು, ಹೆಚ್ಚಿನ ಅನುದಾನ ನೀಡಬೇಕು. ಪರಿಶಿಷ್ಟ ಜಾತಿಯಲ್ಲಿ ಬರುವ ನಮ್ಮ ಸಮುದಾಯ ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ. ಆದ್ದರಿಂದ ಸರಕಾರಿ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ನಮ್ಮ ಸಮುದಾಯಕ್ಕೂ ಪ್ರಾಧಾನ್ಯತೆ ನೀಡಬೇಕು ಎಂದರು.

ಇದೇ ಸಂದರ್ಬಧಲ್ಲಿ ಭಜಂತ್ರಿ (ಕೊರಮ) ಸಮಾಜದ ಅಭಿವೃದ್ಧಿಗೆ ಬೇಕಾದ ಬೇಡಿಕೆಗಳ ಈಡೇರಿಕೆಗೆ ಸಮುದಾಯದ ಮುಖಂಡರು ತೋಟಗಾರಿಕೆ ಸಚಿವರಿಗೆ ಮನವಿ ಸಲ್ಲಿಸಿದರು. ಭೂಸೇನಾ ಅಭಿಯಂತರ ಗಂಗಾಧರ ಮಾತನಾಡಿ, ನೂಲಿ ಚಂದಯ್ಯನವರ ಸಮುದಾಯ ಭವನ ಕಟ್ಟಡದ ನಿರ್ಮಾಣ ಮಾಡುವಲ್ಲಿ ಸಮುದಾಯದ ಜನರ ಸಹಕಾರ ಅಗತ್ಯ ಎಂದರು. ಶಿವಮೂರ್ತಯ್ಯ ಮಠಪತಿ, ಭೀಮಣ್ಣ ಇಂಚಗೇರಿ, ಮೋಹನದಾಸ ಭಜಂತ್ರಿ, ಅಧ್ಯಕ್ಷತೆ ವಹಿಸಿದ ಸಮಾಜದ ಅಧ್ಯಕ್ಷ ನರಸಪ್ಪ ಭಜಂತ್ರಿ ಇತರರು ಇದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.