ಸಿದ್ಧೇಶ್ವರನಿಲ್ಲದ ಬಸವನಾಡು ಸ್ತಬ್ಧ: ಸ್ವಯಂ ಪ್ರೇರಿತ ಬಂದ್
Team Udayavani, Jan 3, 2023, 4:14 PM IST
ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಗಲಿಕೆ ಹಿನ್ನೆಲೆಯಲ್ಲಿ ಇಡೀ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಎಲ್ಲ ವ್ಯಾಪಾರ, ವಹಿವಾಟು ಕೂಡ ಸ್ಥಗಿತಗೊಳಿಸಿ, ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಶ್ರೀಗಳಿಗೆ ಗೌರವ ಸಲ್ಲಿಸಿದ್ದಾರೆ.
ಸೋಮವಾರ ರಾತ್ರಿ ಸಿದ್ಧೇಶ್ವರ ಶ್ರೀಗಳು ನಿಧನರಾದ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಲೇ ಜಿಲ್ಲೆಯ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿ, ವ್ಯಾಪಾರ, ವಹಿವಾಟು ಬಂದ್ ಮಾಡಿ ಮನೆಗೆ ತೆರಳಿದರು.
ಮಂಗಳವಾರ ಬೆಳಿಗ್ಗೆಯೂ ಅಂಗಡಿಗಳನ್ನು ತೆರೆಯದೇ ಶ್ರೀಗಳ ಗೌರವಾರ್ಥ ಜಿಲ್ಲೆಯ ಎಲ್ಲ ವ್ಯಾಪಾರಿಗಳು ವ್ಯಾಪಾರ ಬಂದ್ ಮಾಡಿದ್ದರು. ವಿಜಯಪುರ ನಗರ ಮಾತ್ರವಲ್ಲ ಮುದ್ದೇಬಿಹಾಳ, ಬಸವನಬಾಗೇವಾಡಿ, ಸಿಂದಗಿ, ಚಡಚಣ, ತಾಳಿಕೋಟೆ, ಬಬಲೇಶ್ವರ, ತಿಕೋಟಾ, ದೇವರಹಿಪ್ಪರಗಿ, ಕೊಲ್ಹಾರ, ಇಂಡಿ, ಹೂವಿನಹಿಪ್ಪರಗಿ, ನಿಡಗುಂದಿ, ಆಲಮಟ್ಟಿ ಸೇರಿದಂತೆ ಜಿಲ್ಲೆಯ ಬಹುತೇಕ ಎಲ್ಲ ಕಡೆಗಳಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿತ್ತು.
ಸದಾ ಜನರಿಂದ ತುಂಬಿರುತ್ತಿದ್ದ ನಗರದ ಪ್ರಮುಖ ವಾಣಿಜ್ಯ ಕೇಂದ್ರ ಲಾಲ್ ಬಹಾದ್ದೂರ ಶಾಸ್ತ್ರೀ ಮಾರುಕಟ್ಟೆ, ನೆಹರು ಮಾರುಕಟ್ಟೆ, ಸರಾಫ್ ಬಜಾರ, ಜವಳಿ ಮಾರುಕಟ್ಟೆ, ಸಗಟು ಕಿರಾಣಿ ಮಾರುಕಟ್ಟೆ, ಎಪಿಎಂಸಿ, ಶ್ರೀಸಿದ್ಧೇಶ್ವರ ರಸ್ತೆ, ಮಹಾತ್ಮಾ ಗಾಂಧೀಜಿ ರಸ್ತೆ, ರಾಮ ಮಂದಿರ ರಸ್ತೆ, ಲಿಂಗದಗುಡಿ ರಸ್ತೆ, ರೈಲ್ವೇ ಸ್ಟೇಶನ್ ರಸ್ತೆ, ಜಲನಗರ, ಗಣೇಶನಗರ, ಸೋಲಾಪುರ ರೋಡ, ಆಶ್ರಮ ರಸ್ತೆ ಹೀಗೆ ಇಡೀದ ನಗರದ ಎಲ್ಲ ವ್ಯಾಪಾರ ವಹಿವಾಟೂ ಸಂಪೂರ್ಣವಾಗಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಗೌರವ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ