ಕೆರೂರು ಘಟನೆಯಲ್ಲಿ ಭಟ್ಕಳ ಭಯೋತ್ಪಾದಕರ ಕೈವಾಡ : ಮುತಾಲಿಕ್ ಕಿಡಿ

ಹಿಂದೂಗಳ ರಕ್ಷಣೆ ವಿಷಯದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲ

Team Udayavani, Jul 22, 2022, 2:51 PM IST

1-ss–dsads

ವಿಜಯಪುರ : ಭಾರತದಲ್ಲಿ ತಲ್ವಾರ್ ಸಂಸ್ಕೃತಿ ಬಿಡಲಾಗದವರು ಭಾರತ ಬಿಟ್ಟು ತೊಲಗಬೇಕಾಗುತ್ತದೆ. ಭಾರತೀಯ ಸಂವಿಧಾನ ಆಶಯದಂತೆ ಸಮಾಜದಲ್ಲಿ ಭೀತಿ ಹುಟ್ಟಿಸುವ, ರಕ್ತಪಿಪಾಸು ವ್ಯವಸ್ಥೆಯನ್ನು ಪೋಷಿಸುವ ತಲ್ವಾರ್ ಸಂಸ್ಕೃತಿ ಬಿಡಲಾಗದವದು ದೇಶಬಿಟ್ಟು ಜಾಗ ಖಾಲಿ ಮಾಡಬೇಕು. ನಿಮ್ಮಂಥವರಿಗಾಗಿ ಹಲವು ದೇಶಗಳಿದ್ದು, ಅಲ್ಲಿಗೆ ಹೋಗಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.

ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗ್ರಹಕ್ಕೆ ಭೇಟಿ ನೀಡಿ ಕೆರೂರ ಘಟನೆಯಲ್ಲಿ ಬಂಧಿತರಾದ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಕೆರೂರು ಹಿಂದೂ ಯುವಕರ ಮೇಲಿನ ದಾಳಿಯಲ್ಲಿ ಮುಸ್ಲಿಂ ಪುಂಡಾಟಿಕೆ ವಿಜೃಂಭಿಸಿದೆ ಎಂದರು.

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಉಗ್ರಗಾಮಿಗಳು ಸಕ್ರೀಯವಾಗಿರುವ ನೆಲೆಯಿಂದಲೇ ಬಂದವರು ಕೆರೂರು ಘಟನೆಯಲ್ಲಿ ಭಾಗಿಯಾಗಿದ್ದಾರೆ. ಮತಾಂಧತೆ ಹರಡುತ್ತಿರುವ ಭಟ್ಕಳ ಇಸ್ಲಾಂ ಸಂಸ್ಕೃತಿ ಕೆರೂರ ಘಟನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೈವಾಡ ತೋರಿದೆ. ಮುಸ್ಲಿಮರು ಹಿಂದೂ ಹುಡುಗಿಯರನ್ನು ಚುಡಾಯಿಸಿದರೆ ಹಿಂದೂ ಯುವಕರು ನೋಡಿಕೊಂಡು ಸುಮ್ಮನಿರಬೇಕೆ. ಇದೀಗ ಹಿಂದೂ ಸಮಾಜ ಜಾಗೃತವಾಗಿದೆ, ಹಿಂದೂ ಯುವಕರು ಕೆಚ್ಚಿನಿಂದ ಎದ್ದರೆ ನಿಮಗೆ ಉಳಿಗಾಲವಿಲ್ಲ, ಹೀಗಾಗಿ ಮುಸ್ಲಿಮರು ಇನ್ನು ತೆಪ್ಪಗಿರಲೇಬೇಕು ಎಂದು ಎಚ್ಚರಿಸಿದರು.

ಭಾರತೀಯ ಸಂವಿಧಾನದಂತೆ ತಲವಾರ್ ಇಲ್ಲದೇ ಭಾರತದಲ್ಲಿ ಬದುಕಬೇಕು, ಇಲ್ಲವಾದಲ್ಲಿ ನಿಮಗಿಲ್ಲ ನೆಲೆ ಇಲ್ಲ. ತಲ್ವಾರ ಸಂಸ್ಕೃತಿಯಲ್ಲೇ ಬದುಕುವವರಿಗೆ ಭಾರತದಲ್ಲಿ ಇರುವುದು ಬೇಡವೇ ಬೇಡ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಹಿಂದೂಗಳ ರಕ್ಷಣೆ ವಿಷಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಿವಮೊಗ್ಗದ ಹರ್ಷನ ಹತ್ಯೆ ಬಳಿಕ ಬಂಧಿತರು ಜೈಲಿನಿಲ್ಲಿ ಮೋಜಿನ ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ ರಾಜ್ಯದಲ್ಲಿ ಹಲವೆಡೆ ಹಿಂದೂ ಯುವಕರ ಹಲ್ಲೆ ಮುಂದುವರೆದಿದೆ. ಬಿಜೆಪಿಗೆ ಅಧಿಕಾರ ಮುಖ್ಯ ಹೊರತು ಹಿಂದೂಗಳ ಸುರಕ್ಷತೆ ಅಲ್ಲ. ಹಿಂದುತ್ವಕ್ಕಾಗಿ ಬದುಕನ್ನು ಧಾರೆ ಎರೆದ ಆತನ ಕುಟುಂಬ ಎಂಥ ನೋವಿನಲ್ಲಿದೆ ಎಂಬ ಅರಿವು ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿದರು.

ಮತ್ತೊಂದೆಡೆ ರಾಜ್ಯದಲ್ಲಿ ಎಸ್ ಡಿಪಿಐ, ಪಿ.ಎಫ್.ಐ. ಗಳಂಥ ಸಂಘಟನೆಗಳು ಸಮಾಜದಲ್ಲಿ ಕ್ಯಾನ್ಸರ್ ನಂತೆ ಶಾಂತಿ ಕದಡುವ ಕೆಲಸ ಮಾಡುತ್ತಿವೆ. ಈ ಸಂಘಟನೆಗಳು ಇದೀಗ ಬಿಜೆಪಿ ಬಿ ಟೀಂ ರೀತಿಯಲ್ಲಿ ಕೆಲಸ ಮಾಡುತ್ತಿವೆ. ಇಂಥ ಸಂಸ್ಥೆಗಳ ಬಲವರ್ಧನೆಗೆ ಅವಕಾಶ ನೀಡಿ, ಮುಸ್ಲಿಂ ವೋಟ್ ಬ್ಯಾಂಕ್ ಒಡೆದು ಅಧಿಕಾರ ಗಿಟ್ಟಿಸಿಕೊಳ್ಳುವುದು ಬಿಜೆಪಿ ಕುತಂತ್ರ ಎಂದು ಕಿಡಿ ಕಾರಿದರು. ಹೀಗಾಗಿ ದೇಶದ್ರೋಹದ ಕೃತ್ಯದಲ್ಲಿ ತೊಡಗಿರುವ ಇಂಥ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ನಮ್ಮ ಸಂಘಟನೆಯಿಂದ ಅಭಿಯಾನ ಆರಂಭಿಸಲಿದೆ ಎಂದರು.

ಮುಸ್ಲಿಂ ಭಯೋತ್ಪಾದಕರನ್ನು ಕಾಂಗ್ರೆಸ್ ಎಂಬ ಮುಸ್ಲಿಂ ತುಷ್ಟೀಕರಣದ ಪಕ್ಷ ದೇಶಭಕ್ತರಂತೆ ಬಿಂಬಿಸುತ್ತಿದೆ. ಅದರಿಂದಾಗಿ ಇದೀಗ ಕಾಂಗ್ರೆಸ್ ಪಕ್ಷಕ್ಕೂ ಮುಸ್ಲೀಮರು ಮುಳುಗು ನೀರು ತಂದಿದ್ದಾರೆ. ಮೊನ್ನೆ ಸಿದ್ಧರಮಯ್ಯ ಅವರ ಮೇಲೆ ಮುಸ್ಲಿಂ ಮಹಿಳೆ ನೋಟಿನ ಬಂಡಲ್ ಎಸೆದ ಘಟನೆ ಜೀವಂತ ನಿದರ್ಶನ ಎಂದರು.

ಬಳಿಕ ಕೆರೂರ ಘಟನೆಯಿಂದಾಗಿ ಬಂಧಿತರಾಗಿ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಹಿಂದೂ ಕಾರ್ಯಕರ್ತರನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಶ್ರೀರಾಮ ಸೇನೆಯ ನೀಲಕಂಠ ಕಂದಗಲ್ ಇತರರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.