ಸಾಲದ ಋಣ ಭಾರದಲ್ಲಿದೆ ಭೀಮಾಶಂಕರ ಸಕ್ಕರೆ ಕಾರ್ಖಾನೆ


Team Udayavani, Dec 27, 2021, 4:58 PM IST

26sugar

ಇಂಡಿ: ಭೀಮಾಶಂಕರ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಲು ಸಾಕಷ್ಟು ಕಷ್ಟ, ಕಾರ್ಪಣ್ಯಗಳನ್ನು ಅನುಭವಿಸಿದ್ದೇನೆ. ಈಗ ಸಕ್ಕರೆ ಉದ್ದಿಮೆ ಹಿಂದಿನಂತೆ ಲಾಭಾಂಶದಲ್ಲಿ ಇಲ್ಲ. ಹೀಗಾಗಿ ಸಕ್ಕರೆ ಕಾರ್ಖಾನೆ ಸಾಲದ ಋಣ ಭಾರದಲ್ಲಿದೆ ಎಂದು ಕಾರ್ಖಾನೆ ಅಧ್ಯಕ್ಷ, ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ ಹೇಳಿದರು.

ತಾಲೂಕಿನಮರಗೂರ ಗ್ರಾಮದ ಸಮೀಪವಿರುವಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ 2020-21ನೇ ಸಾಲಿನ 3ನೇ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ನಮ್ಮ ಪೂರ್ವಜರ ಕನಸಾಗಿತ್ತು. ಕಳೆದ ನಾಲ್ಕು ದಶಕಗಳಿಂದ ನನೆಗುದಿಗೆ ಬಿದ್ದ ಕಾರ್ಖಾನೆಗೆ ನಾನು ಶಾಸಕನಾದ ಮೇಲೆ ಹೆಚ್ಚಿನ ಕಾಳಜಿವಹಿಸಿ ಸಿಂದಗಿ, ಇಂಡಿ ಭಾಗದ ರೈತರ ಆಸ್ತಿಯನ್ನಾಗಿ ಮಾಡಿರುವೆ ಎಂದರು.

ಇಂದು ಸಹಕಾರಿ ಸಕ್ಕರೆ ಕಾರ್ಖಾನೆ ಸಾಕಷ್ಟು ಸಾಲದ ಋಣ ಭಾರದಲ್ಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಕ್ಕರೆ ಉದ್ದಿಮೆ ಹಿಂದಿನಂತೆ ಇಂದು ಲಾಭಾಂಶದಲ್ಲಿ ಇಲ್ಲ. ನಂದಿ ಸಕ್ಕರೆಕಾರ್ಖಾನೆ ಸಾಕಷ್ಟು ಪ್ರಗತಿ ಸಾಧಿಸಿದೆ. ಅದರ ಪರಿಕಲ್ಪನೆಯಿಂದ ಭೀಮಾ ದಡದ ಭಾಗದಲ್ಲಿ ಇದು ಕೂಡಾ ರೈತರಿಗೆ ಮುಕುಟ ಪ್ರಾಯವಾಗಿ ಬೆಳೆಯಲಿ. ಪೂರ್ವಜರ ಕನಸು ಸಹಕಾರಗೊಳ್ಳಲಿ ಎಂಬ ಸದಾಶಯದಿಂದ ಕಾರ್ಯಾರಂಭ ಮಾಡಲಾಗಿದೆ ಎಂದರು.

ಸಾಲದ ಸುಳಿಯಲ್ಲಿದ್ದರೂ ಸಹಕಾರಿ ಸಕ್ಕರೆ ಕಾರ್ಖಾನೆ ಈ ಭಾಗದ ಜನರ ಆಶೋತ್ತರ ಈಡೇರಿಸುವಲ್ಲಿ ಶ್ರಮಿಸುತ್ತಿದೆ. ರೈತರು ಸಾಕಷ್ಟು ಕಷ್ಟ ನಷ್ಟಗಳ ಮಧ್ಯ ಶ್ರಮದಿಂದ ಕಬ್ಬು ಬೆಳೆಯುತ್ತಾರೆ. ತೂಕದಲ್ಲಿ ಮೋಸ ಮಾಡಿದರೆ ತಂದೆ-ತಾಯಿಗಳಿಗೆ ಮೋಸ ಮಾಡಿದಂತಾಗುತ್ತದೆ. ನಮ್ಮಕಾರ್ಖಾನೆಯಲ್ಲಿ ತೂಕದಲ್ಲಿ ಮೋಸವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಖಾನೆ ಮೇಲೆ ಈಗ300 ಕೋಟಿರೂ. ಸಾಲ ಇದೆ. ಪ್ರತಿ ಮಾರ್ಚ್‌ನಲ್ಲಿ 65 ರಿಂದ70 ಲಕ್ಷ ರೂ. ಕಂತು ಬಡ್ಡಿ ಸಮೇತ ಕಟ್ಟಲಾಗುತ್ತಿದೆ. ತಾಲೂಕಿನ ಹಿರೇಬೇವನೂರ ಗ್ರಾಮದ ಶಿವುಕುಮಾರ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿದೆ. ಇದಕ್ಕೆ ಕಾರಣ ಸರಕಾರ ನಿರ್ಧರಿಸಿರುವ ಎಫ್‌ಆರ್‌ಪಿ, ಎಸ್‌ಎಪಿ ಕೇಂದ್ರ ಸರಕಾರ ಸಕ್ಕರೆ ಕಾರ್ಖಾನೆಗಳಿಗೆ ಒಂದೇ ನಿಯಮ ಮಾಡಿರುವುದರಿಂದ ಸಕ್ಕರೆ ಕಾರ್ಖಾನೆಗಳು ಸಾಲದಲ್ಲಿ ಸಿಲುಕಿಕೊಂಡಿವೆ. ಇಂತಹ ಅವೈಜ್ಞಾನಿಕ ನೀತಿ ಕೈ ಬೀಡಬೇಕು ಎಂದು ಕೇಂದ್ರ ಸಹಕಾರಿ ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದರು.

ಕೇಂದ್ರ ಸರಕಾರ ಯಥೇನಾಲ್‌, ಡಿಸ್‌ಲೇರಿ ದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡಿದೆ. ರೈತರ ಪರವಾಗಿ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಉಪಾಧ್ಯಕ್ಷ ವಿಶ್ವನಾಥ ಬಿರಾದಾರ, ನಿರ್ದೇಶಕರಾದ ಎಂ.ಆರ್‌. ಪಾಟೀಲ, ದಾನಮ್ಮಗೌಡತಿ ಬಿರಾದಾರ, ಜೆಟ್ಟೆಪ್ಪ ರವಳಿ, ಬಿ.ಎಂ. ಕೋರೆ, ಅಶೋಕ ಗಜಾಕೋಶ, ಸುರೇಶಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಮಹಾದೇವ ನಾಗರೆ, ಲಲಿತಾ ನಡಗೇರಿ, ಅರ್ಜುನ ನಾಯ್ದೊಡಿ, ಉಪನಿಬಂಧಕ ಚಿದಾನಂದ ನಿಂಬಾಳ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.