ಪೊಲೀಸರ ಖಡಕ್ ಎಚ್ಚರಿಕೆ: ಭೀಮಾತೀರದ ಮಹಿಳೆ ಸೇರಿ ಇಬ್ಬರು ನಟೋರಿಯಸ್ ನ್ಯಾಯಾಲಯಕ್ಕೆ ಶರಣು


Team Udayavani, Aug 2, 2022, 7:07 PM IST

ಪೊಲೀಸರ ಖಡಕ್ ಎಚ್ಚರಿಕೆ: ಭೀಮಾತೀರದ ಮಹಿಳೆ ಸೇರಿ ಇಬ್ಬರು ನಟೋರಿಯಸ್ ನ್ಯಾಯಾಲಯಕ್ಕೆ ಶರಣು

ವಿಜಯಪುರ: ಪೊಲೀಸರ ಖಡಕ್ ಎಚ್ಚರಿಕೆ ಬೆನ್ನಲ್ಲೇ ಭೀಮಾ ತೀರ ಎಂಬ ಕುಖ್ಯಾತಿಗೆ ಕಾರಣವಾಗಿರುವ ಜಿಲ್ಲೆಯ ನಟೋರಿಯಸ್ ಗ್ಯಾಂಗ್ ನ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

2020 ನವೆಂಬರ್ 2 ರಂದು ನಡೆದಿದ್ದ ಭೀಮಾ ತೀರದ ಇನ್ನೋರ್ವ ನಟೋರಿಯಸ್ ರೌಡಿಶೀಟರ್ ಮಹಾದೇವ ಭೈರಗೊಂಡ ಮೇಲೆ ನಡೆದಿದ್ದ ಶಸ್ತ್ರಾಸ್ತ್ರ ದಾಳಿ ಪ್ರಕರಣದ ಪ್ರಮುಖ ಆರೋಪಿ ವಿಮಲಾಬಾಯಿ ಚಡಚಣ ಹಾಗೂ ಸಹಚರ ಸೋನ್ಯಾ ರಾಠೋಡ ನ್ಯಾಯಾಲಯಕ್ಕೆ ಶರಣಾದ ಆರೋಪಿಗಳು.

ವಿಮಲಾಬಾಯಿ ಚಡಚಣ ಭೀಮಾತೀರದ ನಟೋರಿಯಸ್ ಹಂತಕ ಮಲ್ಲಿಕಾರ್ಜುನ ಚಡಚಣ ಧರ್ಮಪತ್ನಿ.

ಪೊಲೀಸ್ ನಕಲಿ ಎನ್ ಕೌಂಟರ್ ಗೆ ಬಲಿಯಾದ ಧರ್ಮರಾಯ ಚಡಚಣ ಹಾಗೂ ಮಹಾದೇವ ಭೈರಗೊಂಡನಿಂದ ಹತ್ಯೆಯಾಗಿದ್ದ ಗಂಗಾಧರ ಚಡಚಣ ತಾಯಿಯೇ ಈ ವಿಮಲಾಬಾಯಿ.

ತನ್ನ ಇಬ್ಬರು ಮಕ್ಕಳ ಹತ್ಯಾಕಾಂಡಕ್ಕೆ ಪ್ರತಿಕಾರವಾಗಿ ವಿಮಲಾಬಾಯಿ 2020 ನವೆಂಬರ್ 2 ರಂದು ತನ್ನ ಮಕ್ಕಳ ಸಹಚರರಿಂದ ಮಾರಕಾಸ್ರ್ತಗಳ ಮೂಲಕ ಮಹಾದೇವ ಭೈರಗೊಂಡ ಪಯಣಿಸುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದಾಳೆ.

ಇದನ್ನೂ ಓದಿ:  ಲಾನ್‌ ಬೌಲ್ಸ್‌: ದ. ಆಫ್ರಿಕಾ ವಿರುದ್ಧ ವನಿತಾ ತಂಡದ ಚಿನ್ನದ ಬೇಟೆ

ವಿಜಯಪುರ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಭೈರಗೊಂಡ ಮೇಲಿನ ದಾಳಿ ಪ್ರಕರಣದಲ್ಲಿ ವಿಮಲಾಬಾಯಿ ಎರಡನೇ ಆರೋಪಿಯಾಗಿದ್ದು, ಘಟನೆ ಬಳಿಕ 39ನೇ ಆರೋಪಿ ಸೋನ್ಯಾ ರಾಠೋಡ ಸೇರಿ ಇತರೆ ಆರೋಪಿಗಳೊಂದಿಗೆ ಪರಾರಿಯಾಗಿ, ತಲೆ ಮರೆಸಿಕೊಂಡಿದ್ದಳು.

ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಾವು ನಡೆಸಿದ ಶಾಂತಿಸಭೆಯಲ್ಲಿ ಚಡಚಣ ದಂಪತಿ ಶರಣಾಗತಿಗೆ ತಾಕೀತು ಮಾಡಿದ್ದರು.

ಇದರ ಬೆನ್ನಲ್ಲೇ ಸಾರ್ವಜನಿಕವಾಗಿ ಪ್ರಕಟಣೆ ಹೊರಡಿಸಿದ್ದ ಎಸ್ಪಿ ಆನಂದಕುಮಾರ, ತುರ್ತಾಗಿ ಶರಣಾಗದಿದ್ದರೆ ಚಡಚಣ ಕುಟುಂಬದ ವಿಮಲಾಬಾಯಿ ಹಾಗೂ ಮಲ್ಲಿಕಾರ್ಜುನ ದಂಪತಿಗೆ ಸೇರಿದ ಆಸ್ತಿ‌ ಮುಟ್ಟುಗೋಲು ಹಾಕಿಕೊಳ್ಳುವ ಎಚ್ಚರಿಕೆ ನೀಡಿದ್ದರು.

ಎಸ್ಪಿ ಅವರ ಎಚ್ಚರಿಕೆ ಬೆನ್ನಲ್ಲೇ ಸಹಚರ ಸೋನ್ಯಾ ರಾಠೋಡ ಜೊತೆ ವಿಮಲಾಬಾಯಿ ಮಂಗಳವಾರ ವಿಜಯಪುರ ಜಿಲ್ಲಾ 4ನೇ ಜೆಎಂಎಫ್‌ಸಿ ಕೋರ್ಟ್‌ಗೆ ಶರಣಾಗಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.