ಸೇವೆಗೆ ಬೃಹತ್‌ ಬಸ್‌ ನಿಲ್ದಾಣ?


Team Udayavani, Jul 19, 2022, 3:30 PM IST

19bus

ನಾಲತವಾಡ: ಮಳೆಗಾಲದಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಕರು ಸಂಚರಿಸುತ್ತಿದ್ದರೆ, ಮತ್ತೂಂದೆಡೆ ಬಸ್‌ಗಳು ತಗ್ಗು ದಿನ್ನೆಗಳಲ್ಲಿ ಜೋಲಿ ಹೊಡೆಯುತ್ತಿದ್ದವು. ಸುಮಾರು ವರ್ಷಗಳಿಂದಲೂ ಹದಗೆಟ್ಟಿದ್ದ ಬಸ್‌ ನಿಲ್ದಾಣ ಸದ್ಯ ಹೊರ ರೂಪ ಪಡೆದಿದ್ದು ಪಟ್ಟಣದ ಸೌಂದರ್ಯ ಹೆಚ್ಚಿಸಿದೆ.

ಪಟ್ಟಣದ ಬೃಹತ್‌ ಬಸ್‌ ನಿಲ್ದಾಣ ಕಾಮಗಾರಿ ಸದ್ಯ ಭರದಿಂದ ಸಾಗಿದ್ದು, ಬರುವ ಆಗಸ್ಟ್‌ ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ. ಸುಮಾರು ವರ್ಷಗಳಿಂದಲೂ ಕೆಸರು ಗದ್ದೆಯಂತಾಗಿದ್ದ ಬಸ್‌ ನಿಲ್ದಾಣದ ಸ್ಥಿತಿ ಕಂಡ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ಸುಮಾರು 3 ಕೋಟಿ ರೂ.ವೆಚ್ಚದ ಅನುದಾನ ಒದಗಿಸಿ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಭೂಮಿಪೂಜೆ ನಡೆಸಿದ್ದರು. ಕಳೆದ 8 ತಿಂಗಳ ಹಿಂದೆ ಆರಂಭಗೊಂಡ ಬಸ್‌ ನಿಲ್ದಾಣದ ಕಾಮಗಾರಿ ಯಾವುದೇ ಅಡೆತಡೆ ಇಲ್ಲದೇ ಪೂರ್ಣ ಹಂತ ತಲುಪಿದೆ.

ಗುಣಮಟ್ಟದ ಕಾಮಗಾರಿ: ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬಸ್‌ ನಿಲ್ದಾಣ ಕಾಮಗಾರಿ ಎಲ್ಲರ ಗಮನ ಸೆಳೆಯುತ್ತಿದೆ. ಸದ್ಯ ನಿಲ್ದಾಣದ ಪ್ಲಾಟ್‌ ಫಾರಂನಲ್ಲಿ ಬಸ್‌ಗಳ ಓಡಾಟಕ್ಕೆ ಸುಮಾರು 2 ಅಡಿಗೂ ಹೆಚ್ಚು ಎತ್ತರದಲ್ಲಿ ಫ್ಲೋರಿಂಗ್‌ ನಿರ್ಮಿಸಲಾಗಿದೆ. 6 ಪ್ಲಾಟ್‌ಫಾರಂಗಳು, 22 ಸುಸಜ್ಜಿತ ವಾಣಿಜ್ಯ ಮಳಿಗೆಗಳು, ಮಹಿಳಾ ವಿಶ್ರಾಂತಿ ಕೊಠಡಿಗಳ ನಿರ್ಮಾಣ ಪೂರ್ಣಗೊಂಡಿದ್ದು ಶೌಚಾಲಯಗಳ ಕಾಮಗಾರಿ ಭರದಿಂದ ಸಾಗಿದೆ.

ಮಳೆ ನೀರು ನಿಲ್ಲದಂತೆ ಎದುರಲ್ಲೇ ಬೃಹತ್‌ ಚರಂಡಿಗಳನ್ನು ನಿರ್ಮಿಸಲಾಗುತ್ತಿದ್ದು, ಆಗಮನ- ನಿರ್ಗಮನದ ಗೇಟ್‌ಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ವಾಣಿಜ್ಯ ಮಳಿಗೆಗಳಲ್ಲಿ ಟೈಲ್ಸ್‌ ಫ್ಲೋರಿಂಗ್‌ ಜತೆಗೆ ಸುಣ್ಣ ಬಣ್ಣದ ಕೆಲಸವೂ ಭರ್ಜರಿಯಾಗಿ ನಡೆದಿದೆ. ಸುಮಾರು ವರ್ಷಗಳಿಂದ ಕೆಸರು ಗದ್ದೆಯಂತಾಗಿದ್ದ ಬಸ್‌ ನಿಲ್ದಾಣ ಸದ್ಯ ಸುಂದರ ಕಟ್ಟಡವಾಗಿ ಗೋಚರಿಸುತ್ತಿದೆ. ಸಾರ್ವಜನಿಕರ, ಪ್ರಯಾಣಿಕರ ಗಮನ ಸೆಳೆಯುತ್ತಿದೆ.

ಪಟ್ಟಣದ ಬಸ್‌ ನಿಲ್ದಾಣ ನನ್ನ ಕನಸಿನ ಕೂಸು ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಕೊರೊನಾ ಹಾಗೂ ಮಳೆಗಾಲಹಿನ್ನೆಲೆಯಲ್ಲಿ ಎಂದೋ ಮುಗಿಯಬೇಕಿದ್ದ ಬಸ್‌ ನಿಲ್ದಾಣ ಕಾಮಗಾರಿ ಈಗಾಗಲೇ ಶೇ.95 ಮುಗಿದಿದೆ. ಪಟ್ಟಣದ ಅಭಿವೃದ್ಧಿಯಲ್ಲಿ ಇದೂ ಒಂದು ಪ್ರಮುಖ ಬೇಡಿಕೆಯಾಗಿದ್ದು ನಿಲ್ದಾಣ ಕಾಮಗಾರಿ ತೃಪ್ತಿ ತಂದಿದೆ. ಕೆಲ ತಿಂಗಳಲ್ಲಿ ಲೋಕಾರ್ಪಣೆಗೊಳ್ಳುತ್ತದೆ. -ಎ.ಎಸ್‌.ಪಾಟೀಲ ನಡಹಳ್ಳಿ, ಶಾಸಕರು, ಮುದ್ದೇಬಿಹಾಳ

ಕಾಮಗಾರಿ ಈಗಾಗಲೇ ಮುಕ್ತಾಯ ಹಂತದಲ್ಲಿದೆ. ಸುಣ್ಣ ಬಣ್ಣದ ಕೆಲಸವೂ ನಡೆದಿದೆ. ಶಾಸಕರೊಂದಿಗೆ ಸಂಪರ್ಕಿಸಿ ಲೋಕಾರ್ಪಣೆಯ ಮಹೂರ್ತ ನಿಗದಿ ಮಾಡಲಾಗುತ್ತದೆ. -ಜೋಗಣ್ಣನವರ, ಎಇಇ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ವಿಜಯಪುರ.

-ಕಾಶೀನಾಥ ಬಿರಾದಾರ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.