ಪರಿಸರ ಸಂರಕ್ಷಿಸಲು ಡಿಸಿಗೆ ಜಲ ಬಿರಾದರಿ ಸಂಘಟನೆ ಮನವಿ


Team Udayavani, Apr 24, 2022, 5:16 PM IST

19appeal

ವಿಜಯಪುರ:ಅರಣ್ಯ ನಾಶ ತಡೆ, ಅಕ್ರಮ ಗಣಿಗಾರಿಕೆ ತಡೆಗಟ್ಟುವುದು ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವಂತೆ ಜಲ ಬಿರಾದರಿ ಸಂಘಟನೆ ಪದಾಧಿಕಾರಿಗಳು ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘಟನೆ ಸಂಚಾಲಕ ಪೀಟರ್‌ ಅಲೆಕ್ಸಾಂಡರ್‌ ಮಾತನಾಡಿ, ಜಾಗತಿಕ ತಾಪಮಾನದ ಏರಿಕೆ, ಹವಾಮಾನ ಏರುಪೇರು ಭವಿಷ್ಯದ ಭೂಮಿಯ ಜೀವ ಸಂಕುಲದ ಅಳಿವಿಗೆ ಕಾರಣವಾಗಬಹುದು ಎಂಬ ಭಯ ಹವಾಮಾನ ತಜ್ಞರನ್ನು ಕಾಡುತ್ತಿದೆ. ಈ ತಾಪಮಾನದ ಏರಿಕೆಗೆ ಭೂಮಿ ಕುದಿಯುತ್ತದೆ ಎಂಬ ಸಂದೇಶ ಹರಿಬಿಟ್ಟದ್ದಾರೆ. ಇದರಿಂದ ಎಲ್ಲ ಜೀವ ಸಂಕುಲವೇ ನಾಶದ ಅಂಚಿಗೆ ತಳ್ಳಲ್ಪಡುತ್ತದೆ. ಎನ್ನುವ ಗಂಟೆ ಬಾರಿಸುತ್ತಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗ ರುಜಿನಗಳು ಇಂದು ಬೆಳೆಯುತ್ತಿರುವ ವಿಜ್ಞಾನಕ್ಕೆ ಸವಾಲಾಗಿ ನಿಂತಿವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಭೂಮಿಯ ಆರೋಗ್ಯಕ್ಕಾಗಿ ಮನುಷ್ಯರೆಲ್ಲರೂ ಪರಿಸರ ರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ. ವಾತಾವರಣವೆಲ್ಲ ಹಾಳಾಗಲು ಮನುಕುಲವೇ ಕಾರಣವಾಗಿದೆ. ಪಂಚಮಹಾ ಬೂತಗಳಾದ ಗಾಳಿ, ನೀರು, ಆಕಾಶ, ಬೆಂಕಿ, ಮಣ್ಣು ಇವುಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.

ಅವಿಭಜಿತ ಜಿಲ್ಲೆಯಲ್ಲಿರುವ ಕೃಷ್ಣಾ, ಭೀಮಾ, ಮಲಪ್ರಭಾ, ಘಟಪ್ರಭಾ, ಡೋಣಿ ಪಂಚ ನದಿಗಳಿದ್ದರೂ ವರ್ಷವಿಡಿ ಹರಿಯುತ್ತಿಲ್ಲ ಕೆಲ ಕಾಲ ಬತ್ತಿ ಹೋಗುತ್ತಿವೆ. ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದೆ. ಹಾಗಾಗಿ ಅವೆಲ್ಲ ಸರ್ವಋತು ಜೀವಂತವಾಗಿಟ್ಟು ನಮ್ಮ ನಾಡು ಹಸಿರಾಗಿಸಬೇಕಿದೆ. ಈಗಿನ ವಾತಾವರಣ ನೋಡಿದರೆ ನಮ್ಮ ತಾಯಿ ಭೂಮಿಯನ್ನು ಕಾಪಾಡಿಕೊಳ್ಳಬೇಕಿದೆ ಎಂದರು.

ಅದಕ್ಕಾಗಿ ಸರಕಾರ ಮತ್ತು ಜಿಲ್ಲಾಡಳಿತ ಜಿಲ್ಲೆಯಲ್ಲಿ ಎಲ್ಲ ರೀತಿಯ ಗಣಿಕಾರಿಕೆ ನಿಯಂತ್ರಿಸಿಬೇಕಿದೆ. ಅರಣ್ಯ ನಾಶ ವಾಯು ಮಾಲಿನ್ಯ, ಜಲ ಮಾಲಿನ್ಯ ದಿಂದಾಗಿ ಪರಿಸರ ನಾಶವಾಗುದನ್ನು ರಕ್ಷಿಸಬೇಕಿದೆ.ಈ ರೀತಿ ಎಲ್ಲ ವಿಪತ್ತುಗಳನ್ನು ಹೊರಬರಲು ರಾಷ್ಟ್ರೀಯ ವಿಪತ್ತು ನಿಯಂತ್ರಣ ಯೋಜನೆಯಲ್ಲಿ ಸರಕಾರ ಕಾರ್ಯೋನುಖವಾಗಬೇಕಿದೆ ಎಂದು ಜಿಲ್ಲಾಡಳಿತದ ಮುಖಾಂತರ ಭಾರತ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆರ್‌.ಕೆ.ಎಸ್‌ ರೈತ ಸಂಘಟನೆ ಮುಖಂಡ ಬಾಳು ಜೇವೂರ, ಸಂಸ್ಥಾಪಕ ಆಬೀದ್‌ ಸಂಗಮ್‌, ನಾರಿಕಾ ಯೂಥ್‌ ಸಂಸ್ಥೆ ಅಮೀನ್‌ ಹುಲ್ಲೂರ, ಮುನ್ನಾ ಭಕ್ಷಿ, ರಿಜಾ ಸಂಗಮ್‌, ರಿಹಾನ್‌ ಸಂಗಮ, ಮುಬಾರಕ್‌ ವಾಲೀಕಾರ, ಮಹಾದೇವ ಲಿಗಾಡೆ ಇದ್ದರು.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.