ಪುಟಗೋಸಿ ಪ್ರಿಯಾಂಕಾ ಗಾಂಧಿಗೆ ಬಿಜೆಪಿ ಹೆದರಲ್ಲ: ಈಶ್ವರಪ್ಪ


Team Udayavani, Jan 28, 2019, 11:05 AM IST

vij-2.jpg

ಬಸವನಬಾಗೇವಾಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಜವಾಗಿಯೂ ಹಿಂದುಳಿದ ವರ್ಗದ ನಾಯಕರಾಗಿದ್ದರೆ ಸಮ್ಮಿಶ್ರ ಸರಕಾರದ ಮೇಲೆ ಒತ್ತಡ ಹೇರಿ ಕಾಂತರಾಜ್‌ ಅವರ ಜಾತಿ, ಜನಗಣತಿ ವರದಿ ಬಹಿರಂಗಪಡಿಸಲಿ ಎಂದು ಮಾಜಿ ಸಚಿವ ಬಿಜೆಪಿ ಹಿರಿಯ ಮುಖಂಡ ಕೆ. ಈಶ್ವರಪ್ಪ ಹೇಳಿದರು.

ರವಿವಾರ ಪಟ್ಟಣದ ಯಲ್ಲಾಲಿಂಗ ಮಠದಲ್ಲಿ ನಡೆದ ಹಿಂದುಳಿದ ಮೋರ್ಚಾ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ನಾನೇ ಒಬ್ಬ ಸತ್ಯ ಹರಿಶ್ಚಂದ್ರ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇವರೊಬ್ಬರು ಮಹಾ ಮೋಸಗಾರ ಮತ್ತು ಸುಳ್ಳುಗಾರ. ಇವರಿಗೆ ಹಿಂದುಳಿದ ವರ್ಗದ ಜನರ ಮೇಲೆ ಪ್ರೀತಿ ವಿಶ್ವಾಸವಿದ್ದರೆ ಅವರ ಹಿಂದಿನ ಸರಕಾರದಲ್ಲಿ ಜಾತಿ, ಜನ ಗಣತಿ ಮಾಡುತ್ತೇನೆ ಎಂದು ಸರಕಾರದ 120 ಕೋಟಿ ಹಣವನ್ನು ಹಾಳು ಮಾಡಿದ್ದಾರೆ ಎಂದರು.

ಸಿದ್ದರಾಮಯ್ಯನವರಿಗೆ ಜಾತಿ ಜಾತಿ ಮಧ್ಯ, ಧರ್ಮ ಧರ್ಮಗಳ ಮಧ್ಯ ಜಗಳ ಹಚ್ಚುವುದೆ ನಿತ್ಯ ಕಾಯಕವಾಗಿದೆ. ಈ ಹಿಂದೆ ವೀರಶೈವ ಮತ್ತು ಲಿಂಗಾಯತರು ಒಂದಾಗಿದ್ದರು. ಅವರ ಮಧ್ಯ ಜಗಳ ಹಚ್ಚಿದವರು ಯಾರು? ಸುಮ್ಮ ಸುಮ್ಮನೆ ಬಿಜೆಪಿ ಮೇಲೆ ಕೋಮುವಾದಿ ಜಾತಿವಾದಿ ಎಂದು ಹೇಳುತ್ತಾರೆ.

ರಾಜ್ಯದಲ್ಲಿ ಗುಂಡಾಗಳು ಸೇರಿ ಸರಕಾರ ರಚಿಸಿದ್ದಾರೆ. ಇತ್ತೀಚೆಗೆ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕರಿಂದ ಕಾಂಗ್ರೆಸ್‌ ಶಾಸಕನ ಮೇಲೆ ಕೊಲೆ ಕೇಸು ದಾಖಲಾಗಿದೆ. ಇನ್ನೂ ಮುಂದೆ ಯಾವೊಬ್ಬ ಕಾಂಗ್ರೆಸ್‌ ಶಾಸಕನು ಕೂಡಾ ರೆಸಾರ್ಟ್‌ನತ್ತ ಮುಖ ಮಾಡಿ ಮಲಗಲ್ಲ. ಏಕೆಂದರೆ ಕಾಂಗ್ರೆಸ್‌ ಶಾಸಕರು ಹೊರಗಡೆ ಹೊರಟರೆ ಅವರ ಪತ್ನಿಯರು ಎಲ್ಲಿಗೆ ಹೊರಟಿರಿ ಅಪ್ಪಿ ತಪ್ಪಿ ರೆಸಾರ್ಟ್‌ಗೆ ಹೋಗಿರಿ ಎಂದು ಪ್ರಶ್ನೆ ಮಾಡುವಂತ ಸ್ಥಿತಿ ಬಂದೊದಗಿದೆ ಕಾಂಗ್ರೆಸ್‌ ಪಕ್ಷಕ್ಕೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಿಯಾಂಕಾ ಗಾಂಧಿ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದ ಕ್ಷಣ ಬಿಜೆಪಿಗೆ ನಡಕು ಹುಟ್ಟಿದೆ ಎಂದು ಹೇಳಿತ್ತಾರೆ. ನೆಹರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಅಂತವರಿಗೆ ಅಂಜಿಲ್ಲ, ಇನ್ನೂ ನಿನ್ನೆ ಮೊನ್ನೆ ಕಣ್ಣು ಬಿಟ್ಟಿರುವ ಪುಟಗೋಸಿಗೆ ಹೇದರುತ್ತೇವಾ ಎಂದು ಪ್ರಶ್ನಿಸಿದ ಅವರು, ದೇಶದಲ್ಲಿ ಮತ್ತೆ ನರೇಂದ್ರ ಮೋದಿ ಸರಕಾರವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಅಥವಾ ಸಮ್ಮಿಶ್ರ ಸರಕಾರದ ಸಚಿವರು ಬರ ವೀಕ್ಷಣೆಗೆ ಯಾವುದಾದರು ಜಿಲ್ಲೆಗೆ ಭೇಟಿ ಕೊಟ್ಟಿದ್ದಾರಾ ಅಥವಾ ಆಯಾ ಜಿಲ್ಲೆಯ ಮುಂಗಾರು, ಹಿಂಗಾರಿನ ಬೆಳೆಹಾನಿ ವರದಿ ಬಗ್ಗೆ ಸಮಗ್ರ ಮಾಹಿತಿಯನ್ನೂ ತೆಗೆದುಕೊಂಡಿಲ್ಲ. ಇನ್ನೂ ಇವರು ಕೇಂದ್ರಕ್ಕೆ ವರದಿ ಸಲ್ಲಿದ ಬಳಿಕ ಅವರು ಬರ ಪರಿಹಾರ ನೀಡುವದಾದರು ಯಾವಾಗ ಎಂಬ ಪ್ರಶ್ನೆ ಪ್ರತಿಯೊಬ್ಬರನ್ನು ಕಾಡುತ್ತಿದೆ ಎಂದು ಹೇಳಿದರು.

ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಶಾಸಕರಾದ ಎ.ಎಸ್‌. ಪಾಟೀಲ (ನಡಹಳ್ಳಿ), ಸೋಮನಗೌಡ ಪಾಟೀಲ, ಬಿಜೆಪಿ ಮುಖಂಡರಾದ ಸಂಗರಾಜ ದೇಸಾಯಿ, ರವಿಕಾಂತ ಬಗಲಿ, ವಿವೇಕ್‌ ಡಬ್ಬಿ, ಕೊಟ್ರೇಶ, ಕೆ.ಪುಟ್ಟಸ್ವಾಮಿ, ಸಾಬು ಮಾಶ್ಯಾಳ, ಶಿಲ್ಪಾ ಕುಂದಗೊಡ, ಬಿ.ಕೆ. ಕಲ್ಲೂರ, ಜಗದೀಶ ಕೊಟ್ರಶೆಟ್ಟಿ, ರವಿ ಪಟ್ಟಣಶೆಟ್ಟಿ, ಜಯಸಿಂಗ್‌ ನಾಯಕ, ಸಾವಿತ್ರಿ ಕಲ್ಯಾಣಶೆಟ್ಟಿ ಇದ್ದರು. ರಾಜು ಬಿರಾದಾರ ಸ್ವಾಗತಿಸಿದರು. ಶಿವಶಂಕರ ಬಡಿಗೇರ ನಿರೂಪಿಸಿದರು. ಮೌನೇಶ ಪತ್ತಾರ ವಂದಿಸಿದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.