BJP ಮನೆಯೊಂದು ಮೂರು ಬಾಗಿಲಾಗಿದ್ದು 20 ವರ್ಷ ವಿಪಕ್ಷದಲ್ಲಿರಲಿದೆ: ಸವದಿ
ಯಾವ ಪಕ್ಷವನ್ನು ಯಾರು ತೊರೆಯಲಿದ್ದಾರೆ ಎಂದು ಕಾದುನೋಡಿ
Team Udayavani, Nov 20, 2023, 3:11 PM IST
ವಿಜಯಪುರ: ಮನೆಯೊಂದು ಮೂರು ಬಾಗಿಲಾಗಿರುವ ಹಾಗೂ ರಾಜಕೀಯ ಭವಿಷ್ಯವಿಲ್ಲದ ಬಿಜೆಪಿ ಬರುವ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರಲಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದರು.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ತತ್ವ, ಸಿದ್ಧಾಂತ ಗಾಳಿಗೆ ತೋರಲಾಗಿದೆ ಎಂದು ಕಾಂಗ್ರೆಸ್ ಶಾಸಕನಾಗಿ ನಾನು ಹೇಳಿದ್ದಲ್ಲ, ಅದೇ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೇ ಹೇಳಿರುವುದು ಎಂದು ಕುಟುಕಿದರು.
ರಾಮಕೃಷ್ಣ ಹೆಗಡೆ ಅವರ ಅಪ್ಪಟ ಬೆಂಬಲಿಗರಾಗಿದ್ದ ನಾವು, ಅವರು ಇರುವ ವರೆಗೆ ಜತೆಯಲ್ಲಿದ್ದೆವು. ತಮ್ಮ ಅನಾರೋಗ್ಯದ ಪರಿಸ್ಥಿತಿ ಸಂದರ್ಭದಲ್ಲಿ ಲಾಲಕೃಷ್ಣ ಅಡ್ವಾಣಿ ಅವರು ನಮ್ಮನ್ನು ಸಂಪರ್ಕಿಸಿ ಬಿಜೆಪಿ ಸೇರ್ಪಡೆ ಮಾಡಿಸಿದ್ದರು. ಆಗ ಬಿಜೆಪಿ ಪಕ್ಷದಲ್ಲಿ ಅನಂತಕುಮಾರರ್ ಅವರಂಥಹ ನಾಯಕರಿದ್ದರು. ಈಗ ಬಿಜೆಪಿ ಪಕ್ಷದಲ್ಲಿ ಅಂಥ ನಾಯಕರಿಲ್ಲ. ಕುಟುಂಬ ರಾಜಕೀಯ ಮತ್ತು ಆಂತರಿಕ ಸಂಘರ್ಷದಿಂದ ಬಿಜೆಪಿ ತತ್ತರಿಸಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 135 ಶಾಸಕ ಬಲದೊಂದಿಗೆ ಸಿದ್ದರಾಮಯ್ಯ ಸರ್ಕಾರ ಸುಭದ್ರವಾಗಿದೆ. ಹೀಗಾಗಿ ಯಾವ ಪಕ್ಷವನ್ನು ಯಾರು ತೊರೆಯಲಿದ್ದಾರೆ ಎಂದು ಕಾದು ನೋಡಿ.ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಾದ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೃಪ್ತರಾಗಿದ್ದಾರೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್