ಬಿಜೆಪಿ ವರಿಷ್ಠರ ನಡೆ ಬಂಡಾಯಕ್ಕೆಡೆ?


Team Udayavani, Mar 25, 2019, 5:10 PM IST

ray-1

ರಾಯಚೂರು: ಹಾಲಿ ಸಂಸದ ಬಿ.ವಿ.ನಾಯಕ ಗೆಲುವಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತಮ ಅಭ್ಯರ್ಥಿ ಶೋಧದಲ್ಲಿರುವ ಬಿಜೆಪಿ ವರಿಷ್ಠರ ನಡೆ ಪಕ್ಷದಲ್ಲಿ ಬಂಡಾಯಕ್ಕೆಡೆ ಮಾಡುವ ಸಾಧ್ಯತೆ ಇದೆ. ಪಕ್ಷದ ಮಾಜಿ ಶಾಸಕ ತಿಪ್ಪರಾಜ್‌ ಹವಾಲ್ದಾರ್‌ ಪ್ರಬಲ ಪ್ರಯತ್ನ ನಡೆಸುತ್ತಿದ್ದರೂ, ವಲಸಿಗ ರಾಜಾ ಅಮರೇಶ್ವರ ನಾಯಕ ಹೆಸರು ಕೇಳಿ ಬಂದಿರುವುದು ಇಂಥ ಅನುಮಾನಕ್ಕೆ ಪುಷ್ಟಿ ನೀಡಿದೆ.

ತಿಪ್ಪರಾಜ್‌ ಹವಾಲ್ದಾರ್‌ ಪರ ಪಕ್ಷದ ಕೆಲ ಮುಖಂಡರು ಲಾಬಿ ನಡೆಸಿದರೆ, ಅದೇ ಪಕ್ಷದ ಕೆಲ ನಾಯಕರು ವಿರೋಧಿ ಸಿದ್ದಾರೆ. ರಾಜಾ ಅಮರೇಶ್ವರ ನಾಯಕ ಕಾಂಗ್ರೆಸ್‌ನಿಂದ ವಲಸೆ ಬಂದರೂ ಅವರ ಪರ ಕೆಲಸ ಮಾಡಲು ನಾವು ಸಿದ್ಧ ಎನ್ನುತ್ತಿದ್ದಾರೆ ಕೆಲ ನಾಯಕರು. ಮುಖಂಡರ ಈ ನಡೆ ಮುಂದೆ ಬಂಡಾಯಕ್ಕೆ ನಾಂದಿ ಹಾಡಿದರೂ ಅಚ್ಚರಿ ಪಡಬೇಕಿಲ್ಲ. ರಾಜಾ ಅಮರೇಶ್ವರ ನಾಯಕ ಈ ಹಿಂದೆ ಎರಡು ಬಾರಿ ಸಚಿವರಾಗಿ ಕ್ಷೇತ್ರದ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದಾರೆ.

ಅವರ ಸ್ಪರ್ಧೆಯಿಂದ ಹಾಲಿ ಸಂಸದ ಬಿ.ವಿ.ನಾಯಕ ಅವರು ಗೆಲುವಿಗಾಗಿ ತುಸು ಪ್ರಯಾಸಪಡಬೇಕಾಗುತ್ತದೆ. ಆದರೆ, ಟಿಕೆಟ್‌ ಕೈ ತಪ್ಪಿದ ಬೇಸರದಲ್ಲಿಯೋ ಅಥವಾ ಮಾತಿಗೆ ಮನ್ನಣೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಬಿಜೆಪಿಯ ಕೆಲ ಮುಖಂಡರು ಪಕ್ಷ ಸಂಘಟನೆಯಿಂದ ದೂರ ಉಳಿಯಬಹುದು. ಆದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಹಸ ತೋರಲಿಕ್ಕಿಲ್ಲ. ಬದಲಿಗೆ ಪರೋಕ್ಷವಾಗಿ ಪಕ್ಷದ ಅಭ್ಯರ್ಥಿಗೇ ಬೆಂಬಲಿಸದೆ ದೂರ ಉಳಿಯುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

ಹೊಸಬರಿಗೆ ಹೇಗೆ ಕೊಡ್ತೀರಿ?: ರಾಜಾ ಅಮರೇಶ್ವರ ನಾಯಕ ಅವರು ಈಗಾಗಲೇ ಎಲ್ಲ ಪಕ್ಷಗಳಲ್ಲೂ ಒಂದು ಸುತ್ತು ಹಾಕಿದ್ದಾರೆ. ಬಿಜೆಪಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೂರು ಪಕ್ಷಗಳಲ್ಲೂ ಅವರ ಹೆಜ್ಜೆ ಗುರುತುಗಳಿವೆ. 2009ರ ಲೋಕಸಭೆ ಚುನಾವಣೆ ವೇಳೆಯೂ ಬಿಜೆಪಿ ಅವರಿಗೆ ಬಿ ಫಾರಂ ನೀಡಿತ್ತು ಎನ್ನಲಾಗುತ್ತಿದೆ. ಆದರೆ, ಗಣಿ ಧಣಿಗಳ ಹಣ ದರ್ಪದಿಂದ ಅವರು ಕಣದಿಂದ ಹಿಂದೆ ಸರಿದರು ಎನ್ನುತ್ತವೆ ಮೂಲಗಳು. ಆದರೆ, ಈಗ ಮತ್ತದೇ ಬಿಜೆಪಿ ಅವರಿಗೆ ರತ್ನಗಂಬಳಿ ಹಾಕಿರುವುದು ಪಕ್ಷದ ಮುಖಂಡರ ಮುನಿಸಿಗೆ ಕಾರಣವಾಗಿದೆ. ನಾವು ಪಕ್ಷಕ್ಕಾಗಿ ವರ್ಷಾನುಗಟ್ಟಲೇ ದುಡಿದಿದ್ದೇವೆ. ನಮ್ಮನ್ನು ಬಿಟ್ಟು ಹೊಸಬರಿಗೆ ಕರೆದು ಟಿಕೆಟ್‌ ನೀಡುವುದು ಎಷ್ಟು ಸರಿ ಎಂದು ವಾದಿಸುತ್ತಿದ್ದಾರೆ.

ಸಿದ್ಧಾಂತಕ್ಕಿಂತ ಸಂಖ್ಯೆ ಮುಖ್ಯ: ಬಿಜೆಪಿಗೆ ಈಗ ಪಕ್ಷ ಸಿದ್ಧಾಂತಗಳಿಗಿಂತ ಗೆಲುವು ಮುಖ್ಯ ಎನ್ನುವಂತಾಗಿದೆ. ಜೆಡಿಎಸ್‌ ಕಾಂಗ್ರೆಸ್‌ ದೋಸ್ತಿ ವಿರುದ್ಧ ರಾಜ್ಯದ ವಿವಿಧೆಡೆ ಪ್ರಯೋಗಿಸಿದ ಅಸ್ತ್ರ ಇಲ್ಲಿಯೂ ಪ್ರಯೋಗಿಸಲು ಮುಂದಾಗಿದೆ. ಕಾಂಗ್ರೆಸ್‌ ವಲಸಿಗರಿಗೆ ಟಿಕೆಟ್‌ ಕೊಟ್ಟಲ್ಲಿ ಮತ ವಿಭಜನೆಗೊಂಡು ಬಿಜೆಪಿಗೆ ವರವಾಗಲಿದೆ ಎನ್ನುವ ಲೆಕ್ಕಾಚಾರವಿದೆ.

ರಾಜಾ ಅಮರೇಶ್ವರ ನಾಯಕ ಕಲ್ಮಲ ಕ್ಷೇತ್ರ, ಲಿಂಗಸುಗೂರು ಕ್ಷೇತ್ರದಿಂದ ಶಾಸಕರಾದವರು. ಸುರಪುರ, ಶಹಾಪುರ ಭಾಗದಲ್ಲಿ ಜನರೊಂದಿಗೆ ಒಡನಾಟ ಹೊಂದಿದ್ದಾರೆ. ಆದರೆ, ಕಳೆದ ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು ಎನ್ನುವುದು ಅವರಿಗೆ ಹಿನ್ನಡೆ ಉಂಟು ಮಾಡಬಹುದು. ಒಟ್ಟಾರೆ ಬಿಜೆಪಿಗೂ ಬಂಡಾಯ ಸವಾಲು ಎದುರಾಗುವ ಲಕ್ಷಣಗಳಂತೂ ಇವೆ. ಆದರೆ, ಅದನ್ನು ವರಿಷ್ಠರು ಹೇಗೆ ಶಮನಗೊಳಿಸುವರೋ ಕಾದು ನೋಡಬೇಕು.

„ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.