ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ


Team Udayavani, Aug 3, 2017, 10:09 AM IST

03-BJP-8.jpg

ವಿಜಯಪುರ: ರಾಜ್ಯದ 1,500 ಕರೆಗಳನ್ನು ಡಿ-ನೋಟಿಫಿಕೇಶನ್‌ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕೂಡಲೇ ಇಂಥ ನಿರ್ಧಾರದಿಂದ ಹಿಂದೆ ಸರಿಯಬೇಕು. ಜಿಲ್ಲೆಯ ಎಲ್ಲ ಕೆರೆಗಳನ್ನು ಪುನರುಜ್ಜೀವನ ಮಾಡಿ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬುಧವಾರ ನಗರದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೆರೆ ಉಳಿಸಿ, ಕರೆಗಳಿಗೆ ನೀರು ತುಂಬಿಸಿ ಎಂದು ಮನವಿ ಸಲ್ಲಿಸಿದರು. ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ ಮಾಡನಾಡಿ, ಕಳೆದ 4 ವರ್ಷದಲ್ಲಿ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಅಂತರ್ಜಲ ಸಂಪೂರ್ಣ ಬತ್ತಿ ಕೆರೆಗಳೆಲ್ಲ ಬತ್ತಿ ಬರಿದಾಗಿವೆ. ನೀರಿಲ್ಲದೇ ಜನ-ಜಾನುವಾರುಗಳ, ಪಶು-ಪಕ್ಷಿಗಳು ನೀರಿಗಾಗಿ ಹಾಹಾಕರಿಸಬಹುದು. ಜಿಲ್ಲೆಯ ಜಲಾಶಯದ ಅಚ್ಚುಕಟ್ಟು, ಕಂದಾಯ ವ್ಯಾಪ್ತಿ, ಪಂಚಾಯತ್‌,
ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಆ. 30ರೊಳಗೆ ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ರಾಜ್ಯದ 1,500 ಕೆರೆಗಳನ್ನು ರಾಜ್ಯ ಸರಕಾರ ಡಿ ನೋಟಿಫೈ ಮಾಡುವ ಮೂಲಕ ಭೂ ಅಕ್ರಮಕ್ಕೆ ಕೈ ಹಾಕಿರುವ ಗುಮಾನಿ ಇದೆ. ಸರಕಾರ ಕ್ರಮದಿಂದ ತಕ್ಷಣ ಹಿಂದೆ ಸರಿಯಬೇಕು. ಕೆರೆಗಳ ಕಬಳಿಕೆ ಪರಿಣಾಮ ರಾಜ್ಯದಲ್ಲಿ ಅಂತರ್ಜಲ ಹಿಂದಿಗಿಂತ ಅಧಿಕ ಪ್ರಮಾಣದಲ್ಲಿ ಕುಸಿಯಲು ಕಾರಣವಾಗಿದೆ. ಕೃಷಿ ಬೆಳೆಯ ಮಾತಿರಲಿ ತೋಟಗಾರಿಕೆ ಬೆಳೆಗಳೂ ನಾಶವಾಗಿದೆ. ಇಂತಹ ಸ್ಥಿತಿಯಲ್ಲಿ ಅಂತರ್ಜಲ ಹೆಚ್ಚಳಕ್ಕಾಗಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಬದಲಾಗಿ ಕೆರೆಗಳನ್ನೇ ಮಾರಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡನಾರ್ಹ ಎಂದು ಕಿಡಿಕಾರಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಿಲ ಜಮಾದಾರ, ಜಿಲ್ಲಾಧ್ಯಕ್ಷ ವಿಠಲ ಕಟಕದೊಂಡ, ರಾಜ್ಯ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ ಕವಟಗಿ ಮಾತನಾಡಿದರು. ಸುರೇಶ ಬಿರಾದರ, ಶ್ರೀಶೈಲಗೌಡ ಬಿರಾದರ, ರಾಮು ಹೊಸಪೇಟ, ರವಿಕಾಂತ ಬಗಲಿ, ಬಸವರಾಜ ಬೈಚಬಾಳ, ವಿವೇಕ್‌ ಡಬ್ಬಿ, ಸಂಗರಾಜ ದೇಸಾಯಿ, ಗೋಪಾಲ ಕಾರಜೋಳ, ಪ್ರಭು ದೇಸಾಯಿ, ನಾಗೇಂದ್ರ ಮಾಯವಂಶಿ, ರಾಮು ಜಾಧವ, ಮಂಜುನಾಥ ವಂದಾಲ, ಅಪ್ಪುಗೌಡ ಪಾಟೀಲ (ಡೋಣೂರ), ಸಿದ್ದಪ್ಪ ಅವಟಿ, ರಾಜು ಶಾಹಪೇಟ, ಹನುಮಂತ ಬಿರಾದರ, ರಾಜುಗೌಡ ಪಾಟೀಲ (ಮಹಲ್‌), ರವಿ ಬಿಸನಾಳ, ಪದ್ಮಾವತಿ ಗುಡಿ, ರೇಖಾ ಪಾಟೀಲ, ಗೀತಾ ಕುಗನೂರ, ಪ್ರಕಾಶ ಅಕ್ಕಲಕೋಟ, ಬಸವರಾಜ ಹೂಗಾರ, ರಾಮಸಿಂಗ್‌ ಕನ್ನೊಳ್ಳಿ, ವಿಕ್ರಮ ಗಾಯಕವಾಡ, ಭರತ ಕೊಳಿ, ಅಲ್ತಾಫ್‌ ಇಟಗಿ, ಗೋಪಾಲ ಘಟಕಾಂಬಳೆ, ಕೃಷ್ಣಾ ಗುನ್ಹಾಳಕರ, ಮಳುಗೌಡ ಪಾಟೀಲ, ಶ್ರೀಕಾಂತ ರಾಥೋಡ, ಪಾಪು ಕಿತ್ತಳಿ, ಜಿ.ಬಿ. ಬಂಕೂರ, ರಾಜು ಜಾಧವ, ಪ್ರಕಾಶ ಚವ್ಹಾಣ, ಸಿದ್ದು ಬುಳ್ಳಾ , ರಾಜು ಜಾಧವ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

203 ಕೆರೆ ತುಂಬಲು ಕ್ರಮ: ಪಾಟೀಲ
ವಿಜಯಪುರ:
ವಿಜಯಪುರ ಜಿಲ್ಲೆಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಲ ಸಂಪನ್ಮೂಲ ಇಲಾಖೆಯಿಂದ 203 ಕೆರೆ ತುಂಬಿಸಲಾಗುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಸವನಬಾಗೇವಾಡಿ,
ಇಂಡಿ, ಸಿಂದಗಿ, ನಾಗಠಾಣ, ಮುದ್ದೇಬಿಹಾಳ,  ವರಹಿಪ್ಪರಗಿ, ಬಬಲೇಶ್ವರ ಹಾಗೂ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ
ಎಲ್ಲಾ ವಿಧಾನಸಭೆ ಕ್ಷೇತ್ರಗಳ 203 ಕೆರೆಗಳಲ್ಲಿ, ಈಗಾಗಲೇ ವಿವಿಧ ಯೋಜನೆಗಳಲ್ಲಿ 60 ಕೆರೆ ತುಂಬಿಸಲು ಕ್ರಮ ಕೈಗೊಂಡಿದ್ದು, ಸದ್ಯ 33 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿವೆ ಎಂದು ವಿವರಿಸಿದ್ದಾರೆ.  ಇದಲ್ಲದೇ ಹೊಸದಾಗಿ ಮಂಜೂರಾತಿ ನೀಡಿದ
ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ 26 ಕೆರೆ, ಇಂಡಿ ವಿಧಾನಸಭಾ ಕ್ಷೇತ್ರ 23 ಕೆರೆ, ಸಿಂದಗಿ ವಿಧಾನಸಭಾ ಕ್ಷೇತ್ರ 11 ಕೆರೆ, ನಾಗಠಾಣ ವಿಧಾನಸಭಾ ಕ್ಷೇತ್ರ 37 ಕೆರೆ, ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ 32 ಕೆರೆ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ 24 ಕೆರೆ, ಬಬಲೇಶ್ವರ ವಿಧಾನಸಭಾ ಕ್ಷೇತ್ರ 48 ಕೆರೆ, ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ 2 ಕೆರೆ ಸೇರಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 203 ಕೆರೆ ತುಂಬಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಮತ್ತೂಂದೆಡೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಮುಳವಾಡ, ಚಿಮ್ಮಲಗಿ, ಹೆರಕಲ್‌ ಏತ ನೀರಾವರಿ ಯೋಜನೆ ಹಾಗೂ ಹಂತ-1 ಮತ್ತು 2ರಲ್ಲಿನ ಆಲಮಟ್ಟಿ ಎಡದಂಡೆ ಕಾಲುವೆ ಅಡಿ ಜಿಪಂನ 38 ಕೆರೆ ತುಂಬಿಸಲು ವಿತರಣಾ ಹಾಗೂ ಲ್ಯಾಟರಲ್‌ ಕಾಮಗಾರಿಗಾಗಿ 54.10 ಕೋಟಿ ರೂ. ಟೆಂಡರ್‌ ಕರೆಯಲಾಗಿದೆ ಎಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ಪ್ಯಾಕೇಜ್‌ನಲ್ಲಿ 11 ಕೆರೆ, ಅಣಚಿ 9 ಕೆರೆ, ಸಂಖ 8 ಕೆರೆ, ಭೂಯ್ನಾರ 8 ಕೆರೆ ಹಾಗೂ ಐತಿಹಾಸಿಕ ಮಮದಾಪುರ, ಬೇಗಂ ತಲಾಬ, ಭೂತನಾಳ ಸೇರಿದಂತೆ ಸಪ್ತ ಕೆರೆಗಳ ತುಂಬಿಸುವ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.