ದೇಶದ ಸುರಕ್ಷತೆಗಾಗಿ ಬಿಜೆಪಿ ಬೆಂಬಲಿಸಿ
Team Udayavani, May 11, 2018, 12:43 PM IST
ಚಡಚಣ: ದೇಶದಲ್ಲಿ ಭಯೋತ್ಪಾದಕರು ಹಾಗೂ ಜಿಹಾದಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಭಯೋತ್ಪಾದಕರು ಹಾಗೂ ಜಿಹಾದಿಗಳು ದೇಶ ಬಿಟ್ಟು ಪರಾರಿಯಾಗುತ್ತಿದ್ದಾರೆ. ಜಿಹಾದಿ ಮುಕ್ತವಾಗಿಸಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಜಿಹಾದಿಗಳಿಗೆ ರಕ್ಷಣೆ ಸಿಗುತ್ತಿದೆ. ದೇಶದ ಸುರಕ್ಷತೆಗಾಗಿ ನಾವೆಲ್ಲರೂ ಬಿಜೆಪಿ ಬೆಂಬಲಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
ನಾಗಠಾಣ ಮತಕ್ಷೇತ್ರದ ಅಭ್ಯರ್ಥಿ ಡಾ| ಗೋಪಾಲ ಕಾರಜೋಳ ಅವರ ಪರ ಮತಯಾಚಿಸಲು ಪಟ್ಟಣದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದೇಶದ ಇತಿಹಾಸದಲ್ಲಿಯೇ ಅತಿ ಭ್ರಷ್ಟವಾಗಿದ್ದು, ಜಾತಿ-ಜಾತಿಯ ನಡುವೆ ವಿಷಬೀಜ ಬಿತ್ತಿ ಧರ್ಮ ಒಡೆಯಲು ಮುಂದಾಗಿದೆ. ಹಿಂದುಗಳ ಪವಿತ್ರ ಹಬ್ಬಗಳಾದ ಗಣೇಶ ಚತುರ್ಥಿ, ಶಿವಾಜಿ ಜಯಂತಿ ಸೇರಿದಂತೆ ಮತ್ತಿತರ ಆಚರಣೆಗಳಿಗೆ ತಡೆಯೊಡ್ಡುವ ಸಿದ್ದರಾಮಯ್ಯ ಸರಕಾರ ಟಿಪ್ಪು ಜಯಂತಿ ಆಚರಣೆ ಮಾಡುತ್ತದೆ. ಪಾಕಿಸ್ತಾನದಲ್ಲಿಯೂ ಕೂಡ ಟಿಪ್ಪು ಜಯಂತಿ ಆಚರಿಸುತ್ತಾರೆ. ಹಾಗಾದರೆ ಪಾಕಿಸ್ತಾನ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ವ್ಯತ್ಯಾಸವೇನು ಎಂದು ಪ್ರಶ್ನಿಸಿದರು.
ಆಧುನಿಕ ಶಿಕ್ಷಣ, ಕೌಶಲ್ಯ ತರಬೇತಿ, ಉದ್ಯೋಗ ಸೃಷ್ಟಿ, ಉದ್ಯಮಸ್ನೇಹಿ ವಾತಾವರಣ, ವಿಭಜನಕಾರಿ ರಾಜಕಾರಣದಿಂದ ಮುಕ್ತಿ, ಮಹಿಳೆಯರಿಗೆ ಸುರಕ್ಷೆ ಬಗ್ಗೆ ಕಾಳಜಿವಹಿಸುವ ಬಿಜೆಪಿ ಅಭ್ಯರ್ಥಿ ಗೋಪಾಲ ಕಾರಜೋಳ
ಅವರ ಪರವಾಗಿ ಮತಚಲಾಯಿಸಿ ಎಂದು ಮನವಿ ಮಾಡಿದರು. ಅಭ್ಯರ್ಥಿ ಡಾ| ಗೋಪಾಲ ಕಾರಜೋಳ ತಮ್ಮ ಪರ ಮತ ಚಲಾಯಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಪಪಂ ಅಧ್ಯಕ್ಷ ಬಾಬುಗೌಡ ಪಾಟೀಲ, ಜಿಪಂ ಸದಸ್ಯ ಭೀಮಾಶಂಕರ ಬಿರಾದಾರ, ತಾಪಂ ಸದಸ್ಯ ರಾಜು ಝಳಕಿ, ಮುಖಂಡರಾದ ಚಂದ್ರಶೇಖರ ಕವಟಗಿ, ಚಿದಾನಂದ ಚಲವಾದಿ, ಪ್ರಕಾಶ ಅಕ್ಕಲಕೋಟ, ಕಲ್ಲು ಉಟಗಿ, ಚಂದ್ರಶೇಖರ ನಿರಾಳೆ, ಡಾ| ಎಸ್. ಆರ್. ಡೊಣಗಾಂವ, ರಾಜೇಂದ್ರ ಮುತ್ತಿನ, ಎಸ್.ಆರ್. ಅವಜಿ, ಪ್ರಭಾಕರ ನಿರಾಳೆ, ರಾಮ ಅವಟಿ, ಅಶೋಕ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ