ಡಾಕ್ಟರ್‌ಗೆ ಬ್ಲ್ಯಾಕ್‌ಮೇಲ್‌: ನಾಲ್ವರುಪತ್ರಕರ್ತರ ಬಂಧನ-ನ್ಯಾಯಾಂಗ ಕಸ್ಟಡಿಗೆ


Team Udayavani, Mar 28, 2019, 3:45 PM IST

vij-1
ವಿಜಯಪುರ: ಭ್ರೂಣಲಿಂಗ ಪತ್ತೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವೈದ್ಯರೊಬ್ಬರನ್ನು ಬೆದರಿಸಿ 10 ಲಕ್ಷ ರೂ. ಸುಲಿಗೆ ಮಾಡುತ್ತಿದ್ದ ವೇಳೆ ಬ್ಲ್ಯಾಕ್‌ ಮೇಲ್‌ ಪತ್ರಕರ್ತರ ತಂಡ ಪೊಲೀಸರ ಬಲೆಗೆ ಬಿದ್ದಿದ್ದು, ಬಂಧಿತರು ಜೈಲು ಸೇರಿದ ಘಟನೆ ನಗರದಲ್ಲಿ ನಡೆದಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಪ್ರಕಾಶ ನಿಕ್ಕಂ ಈ ಪ್ರಕರಣದ ಮಾಹಿತಿ ನೀಡಿದರು. ಸುವರ್ಣ ಸುದ್ದಿ ವಾಹಿನಿ ವಿಜಯಪುರ ಜಿಲ್ಲಾ ವರದಿಗಾರ ಪ್ರಸನ್ನ ದೇಶಪಾಂಡೆ, ಕ್ಯಾಮರಾಮನ್‌ ಸಂಗಮೇಶ ಕುಂಬಾರ, ಸಂಗ್ರಾಮ ಪಾಕ್ಷಿಕ ಪತ್ರಿಕೆ ಸಂಪಾದಕ ರವಿ ಬಿಸನಾಳ, ಹಲೋ ಬೆಂಗಳೂರು ಪಾಕ್ಷಿಕ ಪತ್ರಿಕೆ ಜಿಲ್ಲಾ ವರದಿಗಾರ ಬಸವರಾಜಲಗಳಿ ಅವರು ನಗರದ ಡಾ|ಕಿರಣ ವಸಂಲಾಲ್‌ ಓಸ್ವಾಲ್‌ ಎಂಬ ವೈದ್ಯರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಬೆದರಿಕೆ ಹಾಕಿ ಪೊಲೀಸರ ಬಲೆಗೆ ಬಿದ್ದವರು.
ಬಂಧಿತರನ್ನು ಏ.3ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೂರ್ವಯೋಜಿತ ಕೃತ್ಯದಲ್ಲಿ ಪಾಲ್ಗೊಂಡ ಮಹಿಳೆ ಅಥಣಿ ಮೂಲದ ಆಶಾ ಲಕ್ಷ್ಮಣ ಜಗಡೆ ಹಾಗೂ ನಿಂಗನಗೌಡ ಪಾಟೀಲ ತಲೆ ಮರೆಸಿಕೊಂಡಿದ್ದು ಇವರ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದರು.
ಏನಾಯ್ತು?: ಗರ್ಭಿಣಿ ಆಶಾ ಪಾಟೀಲ ಎಂಬುವವರನ್ನು ಪತ್ರಕರ್ತ ಪ್ರಸನ್ನ ದೇಶಪಾಂಡೆ ಹಾಗೂ ಈತನ ತಂಡ ಮಾ.24ರಂದು ನಗರದ ಡಾ| ಕಿರಣ ಓಸ್ವಾಲ್‌ ಅವರ ವಸಂತಲೀಲಾ ಸ್ಕ್ಯಾನಿಂಗ್‌ ಸೆಂಟರ್‌ಗೆ ಕಳುಹಿಸಿದೆ. ಅಲ್ಲಿ ಆಕೆ
ತನ್ನ ಹೆಸರು ಮಲ್ಲಮ್ಮ ಬಿರಾದಾರ ಎಂದು ಹೇಳಿ ಭ್ರೂಣ ಲಿಂಗಪತ್ತೆ ಮಾಡುವಂತೆ ಕೋರಿದ್ದಾರೆ. ಡಾ| ಕಿರಣ ಇದಕ್ಕೆ ಒಪ್ಪದೆ ಔಷಧಿ ಬರೆದು ಕಳಿಸಿದ್ದಾರೆ. ಔಷಧಿ ಪಡೆದು ಆಸ್ಪತ್ರೆಗೆ ಹೋಗುತ್ತಿದ್ದಂತೆ ಪೂರ್ವಯೋಜಿತ ಸಂಚು ರೂಪಿಸಿದ ಆರೋಪಿಗಳೆಲ್ಲ ಆಸ್ಪತ್ರೆ ಪ್ರವೇಶಿಸಿದ್ದಾರೆ. ಇದರಲ್ಲಿ ರವಿ ಬಿಸನಾಳ ಎಂಬಾತ ಡಾ| ಕಿರಣ ಜೇಬಿನಲ್ಲಿ 20 ಸಾವಿರ ಹಣವನ್ನು ಬಲವಂತವಾಗಿ ಇರಿಸಿದ್ದು, ಅದನ್ನು ಪ್ರಸನ್ನ ದೇಶಪಾಂಡೆ ಸೂಚನೆಯಂತೆ ಸಂಗಮೇಶ ಕುಂಬಾರ ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಆರಂಭಿಸಿದ್ದಾರೆ.
ಮಾ.24ರಂದು ಆರಂಭದಲ್ಲಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ಈ ತಂಡ, ನಂತರ 10 ಲಕ್ಷ ರೂ. ಗೆ ಚೌಕಾಶಿ ಮಾಡಿ ಡಾ|ಕಿರಣ ಬಳಿ ಇದ್ದ 1.05 ಲಕ್ಷ ರೂ. ಬಲವಂತಾಗಿ ಸುಲಿಗೆ ಮಾಡಿಕೊಂಡು ಹೋಗಿದೆ. ಅಲ್ಲದೇ ಉಳಿದ 9 ಲಕ್ಷ ರೂ. ಹಣವನ್ನು ನಾಳೆ ಬಂದು ಪಡೆಯುತ್ತೇವೆ, ಹೊಂದಿಸಿ ಇರಿಸಿಕೊಳ್ಳುವಂತೆ ತಾಕೀತು ಮಾಡಿದೆ.
ಇದರಿಂದ ಕಂಗಾಲಾದ ಡಾ| ಕಿರಣ ಓಸ್ವಾಲ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಮಾ.26ರಂದು ಮಧ್ಯಾಹ್ನ ನಗರದ ಹೋಟೆಲ್‌ ನಲ್ಲಿ 9 ಲಕ್ಷ ರೂ. ಹಣ ಪಡೆಯುತ್ತಿದ್ದಾಗ ಪ್ರಸನ್ನ, ರವಿ ಬಿಸನಾಳ, ಬಸವರಾಜ ಹಾಗೂ ಸಂಗಮೇಶ
ಅವರನ್ನು ಎಎಸ್ಪಿ ಬಿ.ಎಸ್‌. ನ್ಯಾಮಗೌಡ, ಡಿಎಸ್ಪಿ ಡಿ.ಆಶೋಕ ನೇತೃತ್ವದಲ್ಲಿದ್ದ ಗಾಂಧಿ ಚೌಕ್‌ ಠಾಣೆ, ಎಪಿಎಂಸಿ, ಗ್ರಾಮಿಣ ಠಾಣೆ ಪೊಲೀಸರ ತಂಡ ದಾಳಿ ನಡೆಸಿ ಬಂಧಿಸಿದೆ ಎಂದು ವಿವರಿಸಿದರು.
ಗರ್ಭಿಣಿ ತನ್ನ ಹೆಸರನ್ನು ಮಲ್ಲಮ್ಮ ಬಿರಾದಾರ ಸಾ| ಬಿಜಾಪುರ ಎಂದು ಸುಳ್ಳು ಹೇಳಿದ್ದು, ತನಿಖೆಯ ವೇಳೆ ಆಕೆ ಅಥಣಿ ಮೂಲದ ಆಶಾ ಲಕ್ಷ್ಮಣ ಜಗಡೆ ಹಾಗೂ ಆಕೆಯ ಸಂಬಂಧಿಯಂತೆ ನಟಿಸಿದ ವ್ಯಕ್ತಿ ನಿಂಗನಗೌಡ ಎಂದು ಗೊತ್ತಾಗಿದೆ. ಈ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಬ್ಲ್ಯಾಕ್‌ಮೇಲ್‌ ಪತ್ರಕರ್ತರಿಂದ 1.58 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಫೋನ್‌ ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ಎಪಿಎಂಸಿ ಠಾಣೆಯಲ್ಲಿ ಡಾ| ಓಸ್ವಾಲ್‌ ನೀಡಿದ ದೂರಿನಂತೆ ಅಪರಾಧಿಕ ಕೃತ್ಯಕ್ಕೆ ಪೂರ್ವಯೋಜಿತ ಸಂಚು, ಬಲವಂತದಿಂದ ಕೂಡಿ ಹಾಕಿದ್ದು, ಸುಲಿಗೆ, ಜೀವ ಬೆದರಿಕೆ, ಅಕ್ರಮ ಪ್ರವೇಶ ಸೇರಿದಂತೆ ವಿವಿಧ ಸೆಕ್ಷನ್‌ ಸಹಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಬಂಧಿತ ನಾಲ್ವರನ್ನು ನಗರದ ಒಂದನೇ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಏ.3ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಎಂದು ಎಸ್ಪಿ ಪ್ರಕಾಶ ನಿಕ್ಕಂ ವಿವರಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.