ಬೀಸುತ್ತಿದೆ ಒಣಗಾಳಿ: ಆತಂಕದಲ್ಲಿ ರೈತ


Team Udayavani, Jun 29, 2018, 11:59 AM IST

vij-2.jpg

ಇಂಡಿ: ಮುಂಗಾರು ತಿಂಗಳು ಕಳೆದರೂ ತಾಲೂಕಿನಲ್ಲಿ ಮಳೆಯಾಗಿಲ್ಲ. ಒಣಗಾಳಿ ಬೀಸುತ್ತಿದ್ದು, ರೈತರು ಆತಂಕಗೊಳ್ಳುವಂತೆ ಮಾಡಿದೆ. ರೈತರು ಭೂಮಿಯನ್ನು ಹದಗೊಳಿಸಿ ಬಿತ್ತನೆಗೆ ಸಿದ್ಧರಾಗಿದ್ದು, ಮಳೆರಾಯನ ದಾರಿ ಕಾಯುತ್ತ ಕುಳಿತಿದ್ದಾರೆ. ಕೃಷಿ ಇಲಾಖೆಯಿಂದ ದೊರೆಯುವ ಸಹಾಯಧನದ ಬೀಜ ಖರೀದಿಗಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಮುಬಿದ್ದಿದ್ದಾರೆ. ತೊಗರಿ, ಹೆಸರು, ಉದ್ದು, ಸಜ್ಜೆ, ಮೆಕ್ಕೆಜೋಳ ಸೇರಿದಂತೆ ಇತರೆ ಬೀಜ ಬಿತ್ತನೆ ಮಾಡಲು ಸರದಿಯಲ್ಲಿ ನಿಂತು ಬೀಜ ಖರಿಸಿದ್ದರು. ಅಲ್ಲದೆ ಕೆಲ ರೈತರು ಬಿತ್ತನೆ ಸಹ ಮಾಡಿದ್ದರು. ಈಗ ಮಳೆ ಬಾರದೆ ಇರುವುದರಿಂದ ರೈತರು ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯುತ್ತಲೆ ಕಮರುತ್ತಿವೆ. ಬರೀ ಮೋಡಕವಿದ ವಾತಾವರಣವಿದೆ. ಭೂಮಿ ಉಳುಮೆ ಮಾಡಿ ಹದಗೊಳಿಸಿದ್ದ ರೈತನ ಬಾಳಿಗೆ ತಣ್ಣಿರು ಎರಚಿದಂತಾಗಿದೆ. ಬಿತ್ತನೆ ಮಾಡಿದ ರೈತರು ಹಾಗೂ ಇನ್ನೂ ಬಿತ್ತನೆ ಮಾಡಬೇಕೆಂದು ಹೊಲ ಸಿದ್ಧ ಮಾಡಿಕೊಂಡ ತಾಲೂಕಿನ ರೈತ ಸಮುದಾಯ ಚಿಂತಾಕ್ರಾಂತದಲ್ಲಿ ಮುಳುಗಿದೆ.

ತಾಲೂಕಿನಲ್ಲಿ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ಸಮರ್ಪಕವಾಗಿ ಮಳೆಯಾದ ಬಗ್ಗೆ ಉದಾಹರಣೆಗಳಿಲ್ಲ. ಸರಕಾರ ಮುಂಜಾಗ್ರತ ಕ್ರಮ ಕೈಗೊಳ್ಳ ಬೇಕಾಗಿರುವುದರಿಂದ ಮೋಡ ಬಿತ್ತನೆಯಂತ ಕಾರ್ಯಕ್ರಮ ಅಳವಡಿಸಿಕೊಂಡಲ್ಲಿ ಈ ಭಾಗದ ರೈತರಿಗೆ ಅನುಕೂಲವಾಗಬಹುದು  ರೈತ ಈ ದೇಶದ ಬೆನ್ನೆಲುಬಾಗಿದ್ದು, ಯಾವುದೆ ಕಾರಣಕ್ಕೂ ಎದೆಗುಂದಬಾರದು. ಸರಕಾರ ನಿಮ್ಮ ಜೊತೆಗಿದೆ. ಆಲಮಟ್ಟಿ ಆಣೆಕಟ್ಟು ನಿಗದಿತ ಪ್ರಮಾಣದಲ್ಲಿ ನೀರು
ಭರ್ತಿಯಾಗಿಲ್ಲ. ಆದರೂ ಭರ್ತಿಯಾಗುವ ನಿರಿಕ್ಷೆಯಲ್ಲಿದ್ದೇವೆ. ಮುಂಬರುವ ಐಸಿಸಿ ಸಭೆಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸರಕಾರದ ಮೇಲೆ ಒತ್ತಡ ತರಲಾಗುವುದು. 
ಯಶವಂತರಾಯಗೌಡ ಪಾಟೀಲ. ಶಾಸಕರು.

ರೈತರಿಗೆ ಬೇಕಾಗುವ ಬೀಜ ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ರೈತರಿಗೆ ತೊಂದರೆಯಾಗದಂತೆ
ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ತೊಗರಿ ಬೀಜದ ಬೇಡಿಕೆ ಇದೆ. ಅದನ್ನು ಕೂಡಾ ತ್ವರಿತವಾಗಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಸಮರ್ಪಕ ಮಳೆಯಾಗದೆ ಇರುವುದರಿಂದ ರೈತರು ಬಿತ್ತನೆ ಸ್ಥಗಿತಗೊಳಿಸಿದ್ದಾರೆ.
ಮಹಾದೇವಪ್ಪ ಏವೂರ, ಸಹಾಯಕ ಕೃಷಿ ನಿರ್ದೇಶಕರು. 

ಮಳೆ ಪ್ರಮಾಣ ಪ್ರಸ್ತುತವಾಗಿ ಮುಂಗಾರು ಬಿತ್ತನೆ ಹಂಗಾಮಿಗೆ ವಾಡಿಕೆಯ ಮಳೆ ಸರಾಸರಿ 102.00 ಎಂ.ಎಂ ಮಳೆ ಆಗಬೇಕಾಗಿತ್ತು. ಆದರೆ 84.17 ಎಂ.ಎಂ ರಷ್ಟು ಮಾತ್ರ ಮಳೆ ಬಂದಿದೆ. ಹೀಗಾಗಿ ಬಿತ್ತನೆಗೆ ಬೇಕಾದ ಪ್ರಮಾಣದಲ್ಲಿ ಮಳೆಯಾಗದೆ ಇರುವುದರಿಂದ ಕೇವಲ ಶೇಕಡಾ 8.8ರಷ್ಟು ಮಾತ್ರ ಬಿತ್ತನೆಯನ್ನು ರೈತರು ಅಲ್ಲಲ್ಲಿ ಕೆಲವು ಭಾಗಗಳಲ್ಲಿ ಮಾಡಿದ್ದಾರೆ.

ಕಡಿಮೆ ಪ್ರಮಾಣದಲ್ಲಿ ಮಾರಾಟ ಇಂಡಿ, ಬಳ್ಳೊಳ್ಳಿ ಹಾಗೂ ಚಡಚಣ ರೈತ ಸಂಪರ್ಕ ಕೇಂದ್ರದದಿಂದ ತೊಗರಿ 585 ಕ್ವಿಂಟಲ್‌ ಬೀಜ ದಾಸ್ತಾನು ಮಾಡಲಾಗಿದೆ. ಹೆಸರು 24ಕ್ವಿಂಟಲ ದಾಸ್ತಾನಾಗಿದ್ದು, ಇದರಲ್ಲಿ ಒಟ್ಟು 12 ಕ್ವಿಂಟಲ್‌ ಮಾತ್ರ ಮಾರಾಟವಾಗಿದೆ. ಉದ್ದು 6 ಕ್ವಿಂಟಲ್‌ನಲ್ಲಿ 3.50 ಕ್ವಿಂಟಲ್‌ ಮಾತ್ರ ಮಾರಾಟವಾಗಿದೆ. ಮೆಕ್ಕೆಜೋಳ 244 ಕ್ವಿಂಟಲ್‌ ದಾಸ್ತಾನನಲ್ಲಿ ಕೇವಲ 76 ಕ್ವಿಂಟಲ್‌ ಮಾತ್ರ ಮಾರಾಟವಾಗಿದೆ. ಸೂರ್ಯಕಾಂತಿ 25 ಕ್ವಿಂಟಲ್‌ ದಾಸ್ತಾನಿನಲ್ಲಿ 8 ಕ್ವಿಂಟಲ್‌ ಮಾತ್ರ ಮಾರಾಟವಾಗಿದೆ. ಸಜ್ಜೆ 48 ಕ್ವಿಂಟಲ್‌ ದಾಸ್ತಾನನಲ್ಲಿ ಕೇವಲ 15.5 ಕ್ವಿಂಟಲ್‌ ಮಾತ್ರ ಮಾರಾಟವಾಗಿದೆ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.