ವಿವೇಕಾನಂದರ ಪಡೆದ ನಾವೇ ಧನ್ಯರು; ಹರ್ಷನಾರಾಯಣ

ಇಡಿ ಜಗತ್ತು ತನ್ನತ್ತ ನೋಡುವಂಥ ಆದರ್ಶ ವ್ಯಕ್ತಿತ್ವ ಹೊಂದಿದ್ದ ವಿವೇಕಾನಂದರ ಚಿಂತನೆಗಳು

Team Udayavani, Jan 13, 2021, 5:51 PM IST

ವಿವೇಕಾನಂದರ ಪಡೆದ ನಾವೇ ಧನ್ಯರು; ಹರ್ಷನಾರಾಯಣ

ವಿಜಯಪುರ: ಇಡಿ ಜಗತ್ತೇ ಕಂಡ ಒಬ್ಬ ಮಹಾನ್‌ ವ್ಯಕ್ತಿ ಸ್ವಾಮಿ ವಿವೇಕಾನಂದ ಅವರನ್ನು ಪಡೆದ ಭಾರತೀಯರಾದ ನಾವೇ ಧನ್ಯರು ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷನಾರಾಯಣ ಹೇಳಿದರು. ಮಂಗಳವಾರ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಾಗೂ ವಿವಿಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 158ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ವಿವೇಕಾನಂದರು ಜನರ ಸೇವೆಯನ್ನು ಮಾಡುವುದಕ್ಕೆ ಧರೆಗಿಳಿದು ಬಂದ ದೇವ. ಇಡಿ ವಿಶ್ವ ವ್ಯಾಪಕವಾಗಿ ಪ್ರೀತಿಸುವಂತ ವ್ಯಕ್ತಿ ಎಂದರೆ ಅದು ಕೇವಲ
ವಿವೇಕಾನಂದರು. ಅವರು ದೈಹಿಕವಾಗಿ ಗತಿಸಿ ಒಂದೂವರೆ ಶತಮಾನವಾದರೂ ವೈಚಾರಿಕವಾಗಿ ಅವರ ಚಿಂತನೆಗಳು ಇಂದಿಗೂ ಜೀವಂತ ಎಂಬುದನ್ನು ಅರಿಯಲೆಂದೇ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು.

ಇಂದು ನಾವೆಲ್ಲರೂ ಮಹಿಳೆಯರ ಸಮಾನತೆ, ಹಕ್ಕುಗಳ ಬಗ್ಗೆ ಮಾತನಾಡುತ್ತೇವೆ. ಶತಮಾನಗಳ ಹಿಂದೆಯೇ ವಿವೇಕಾನಂದರು ಮಹಿಳೆಯರ ಸಮಾನತೆ
ಪ್ರತಿಪಾದಿಸಿದ್ದರು. ಅಮೆರಿಕದ ಚಿಕಾಗೋದಿಂದ ಹಿಡಿದು ವಿಶ್ವದ ಬಹುತೇಕ ರಾಷ್ಟ್ರಗಳು ವಿವೇಕಾನಂದರ ಜಯಂತಿ ಆಚರಿಸುತ್ತವೆ. ಹೀಗಾಗಿ 39 ವರ್ಷ ಮಾತ್ರ ಬದುಕಿದರೂ, ಇಡಿ ಜಗತ್ತು ತನ್ನತ್ತ ನೋಡುವಂಥ ಆದರ್ಶ ವ್ಯಕ್ತಿತ್ವ ಹೊಂದಿದ್ದ ವಿವೇಕಾನಂದರ ಚಿಂತನೆಗಳು ಇಂದಿಗೂ ಯುವ ಜನರಿಗೆ ಸ್ಫೂರ್ತಿದಾಯಕ ಎಂದರು.

ಪ್ರಸ್ತಾವಿಕ ಮಾತನಾಡಿದ ಎಬಿವಿಪಿ ಜಿಲ್ಲಾ ಸಹಾಯಕ ಕಾರ್ಯದರ್ಶಿ ಸಚಿನ ಕುಳಗೇರಿ, ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯಗಳ ವಿರುದ್ಧ ಎಬಿವಿಪಿ ಮಿಷನ್‌ ಸಾಹಸ್‌ ಅಭಿಯಾನದ  ಮೂಲಕ ಮಹಿಳೆಯರಿಗೆ ಕರಾಟೆ ತರಬೇತಿ ನೀಡಿ ಆತ್ಮಸ್ಥೈರ್ಯ ತುಂಬುವ ಹಾಗೂ ಸ್ವಯಂ ಆತ್ಮರಕ್ಷಣೆಗೆ ಸಿದ್ಧಗೊಳಿಸುವ ಕೆಲಸ ಮಾಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಮಹಿಳಾ ವಿವಿ ಪ್ರಭಾರ ಕುಲಪತಿ ನಾಮದೇವಗೌಡ ಮಾತನಾಡಿ, ವ್ಯಕ್ತಿಗೆ ನೈತಿಕ ಸಾಮರ್ಥ್ಯ ಎನ್ನುವುದು ಬಹಳ
ಮುಖ್ಯ. ಎಲ್ಲರು ಬದುಕಿದಂತೆ ಬದುಕದೇ ಸಾರ್ಥಕತೆ ಪಡೆಯುವ ಜೀವನ ನಡೆಸಬೇಕು. ಸಮಾಜ ನಮಗೆ ಏನು ಕೊಡುತ್ತದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವೇನು ಕೊಡುತ್ತೇವೆ ಎಂಬುದನ್ನು ಅರಿತು ಸಮಾಜಮುಖೀ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ತಮ್ಮ ಗುರು ಹಾಕಿದ ಮಾರ್ಗದಲ್ಲಿ ನಡೆದ ನರೇಂದ್ರ ಸ್ವಾಮಿ ವಿವೇಕಾನಂದ ಆಗಿ ರೂಪುಗೊಂಡರು. ಗುರು ಹಾಕಿದ ಪಥ ಮರೆತ ದಿನವೇ ನಮ್ಮ ಪತನ ಎಂಬುದನ್ನು ಯುವ ಪೀಳಿಗೆ ಅರಿಯಬೇಕು
ಎಂದರು.

ವಿವಿ ಮೌಲ್ಯಮಾಪನ ಕುಲಸಚಿವ ಪಿ.ಜಿ. ತಡಸದ, ಸಿಂಡಿಕೇಟ್‌ ಸದಸ್ಯ ಎಚ್‌.ವೆಂಕಟೇಶ, ಎಬಿವಿಪಿ ನಗರ ಕಾರ್ಯದರ್ಶಿ ಸಿದ್ದು ಪತ್ತಾರ ಇದ್ದರು. ಎಬಿವಿಪಿ ನಗರ ಉಪಾಧ್ಯಕ್ಷೆ ಡಾ| ಸೀಮಾ ಸಾರವಾಡ ಸ್ವಾಗತಿಸಿದರು. ನಿಂಗಣ್ಣ ಮನಗೂಳಿ ಪರಿಚಯಿಸಿದರು. ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಡಾ| ದೀಪಕ ಶಿಂಧೆ ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.