ವಿಜಯಪುರದಲ್ಲಿ “ಬಾಂಬ್‌’ ಘರ್ಷಣೆ


Team Udayavani, Jun 18, 2018, 6:00 AM IST

ban18.jpg

ವಿಜಯಪುರ: ಹರಿಣ ಶಿಕಾರಿ ಸಮುದಾಯಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಾನುವಾರ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಕಚ್ಚಾ ಬಾಂಬ್‌, ಪೆಟ್ರೋಲ್‌ ಬಾಂಬ್‌ ಸೇರಿ ಹಲವು ಮಾರಕಾಸ್ತ್ರ ಬಳಸಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಭಾಯಿಸಿರುವ ಪೊಲೀಸರು, 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಇರುವ ಕಾರಣ ಡಿಎಆರ್‌ ಪಡೆ ನಿಯೋಜನೆಗೊಂಡಿದೆ.

ರವಿವಾರ ನಗರದ ಹರಿಣ ಶಿಕಾರಿ ಕಾಲೋನಿಯಲ್ಲಿ ದ್ವಿಚಕ್ರ ವಾಹನ ವ್ಯಕ್ತಿಯೊಬ್ಬರಿಗೆ ತಗುಲಿಸಿದ್ದಲ್ಲದೇ ಹಲ್ಲೆ ನಡೆಸಿದ್ದೇ ಇಡೀ ಘಟನೆಗೆ ಕಾರಣ ಎನ್ನಲಾಗಿದೆ. ಆದರೆ ವಾಸ್ತವಿಕವಾಗಿ ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ-ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಹಾಕಿದ ರಾಜಕೀಯ ದ್ವೇಷಕ್ಕೆ ನಡೆದ ಘಟನೆ ಎಂದು ಸ್ಥಳೀಯರು ಹೇಳುತ್ತಾರೆ. ಹರಿಣ ಶಿಕಾರಿ ಕಾಲೋನಿಯ ಹರಿಣ ಶಿಕಾರಿ ಸಮುದಾಯದವರಾದ ನಾರಾಯಣ ರಾಠೊಡ, ದೀಪಕ ಕಾಳೆ, ಹೊಸಗೌಡ, ರವಿ ಬಲರಾಮ ಕಾಳೆ ಹಾಗೂ ನಗರಸಭೆ ಮಾಜಿ ಸದಸ್ಯೆ ಮಂಗಳಾದೇವಿ ಚವ್ಹಾಣ, ಅಪ್ಪು ಅವರೊಂದಿಗೆ ಗುಂಪು ಘರ್ಷಣೆ ನಡೆದಿದೆ.

ಗಲಾಟೆ ಮಾತಿನ ಚಕಮಕಿ, ಹಲ್ಲೆ ಹಂತ ದಾಟುತ್ತಲೇ ಕಲ್ಲು-ಇಟ್ಟಿಗೆ ತೂರಾಟ ನಡೆದಿದೆ. ಅಷ್ಟೇ ಅಲ್ಲ, ಬಡಿಗೆಗಳಿಂದ ಹೊಡೆದಾಡಿಕೊಂಡು, ಕೈ ಬಾಂಬ್‌ಗಳನ್ನೂ ಪರಸ್ಪರ ಎಸೆದುಕೊಂಡಿದ್ದಾರೆ. ಪೆಟ್ರೋಲ್‌ ಬಾಂಬ್‌ ಬಳಸಿ ಜೋಪಡಿಗಳನ್ನು ಸುಡುವ ಯತ್ನ ನಡೆದಿದೆ. ಅಷ್ಟರಲ್ಲಿ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಎಸ್ಪಿ ಅಶೋಕ್‌ ನೇತೃತ್ವದ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಘರ್ಷಣೆಯಲ್ಲಿ ಸುಮಾರು 25 ಜನರಿಗೆ ಗಾಯಗಳಾಗಿದ್ದು, ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಪೊಲೀಸರು ಹಲವು ಮನೆಗಳನ್ನು ಶೋಧಿ ಸಿದ್ದು, ಸಾಕಷ್ಟು ಮಾರಕಾಸ್ತ್ರಗಳು ಸಿಕ್ಕಿವೆ ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಡಿಎಆರ್‌ ಪೊಲೀಸರನ್ನು ಭದ್ರೆತೆಗೆ ನಿಯೋಜಿಸಲಾಗಿದೆ. ಘಟನೆ ಕುರಿತು ಗೋಲಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಕಾರಣ ಏನು?
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಗಳಾದೇವಿ ಗುಂಪು ಮನೆ ನಿರ್ಮಿಸುವುದಾಗಿ ಭರವಸೆ ನೀಡಿದ್ದರಿಂದ ಬಸನಗೌಡ ಯತ್ನಾಳ ಪರ ಕೆಲಸ ಮಾಡಿದ್ದು, ನಾರಾಯಣ ರಾಠೊಡ, ದೀಪಕ ಕಾಳೆ ಅವರ ಗುಂಪು ಕಾಲೋನಿಯಲ್ಲಿ ಗುಡಿ ನಿಮಾರ್ಣಕ್ಕೆ ಭರವಸೆ ನೀಡಿದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿ ಹಮೀದ್‌ ಮುಶ್ರೀಫ್‌ ಪರ ಕೆಲಸ ಮಾಡಿದೆ. ಹೀಗಾಗಿ ಎರಡೂ ಗುಂಪುಗಳ ಮಧ್ಯೆ ಇದ್ದ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬೈಕ್‌ ತಾಗಿದ ನೆಪ ಮಾಡಿಕೊಂಡು ಹೊಡೆದಾಟ ನಡೆದಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.