ಪಂಚಭೂತಗಳಲ್ಲಿ ಬಿ.ಎಸ್‌.ಪಾಟೀಲ ಸಾಸನೂರ ಲೀನ


Team Udayavani, Jun 12, 2018, 11:02 AM IST

vij-1.jpg

ತಾಳಿಕೋಟೆ: ಹಿರಿಯ ಮುತ್ಸದ್ದಿ, ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಂತ್ಯಕ್ರಿಯೆ ಹಿರೂರ ಗ್ರಾಮದ ಭೋಗೇಶ್ವರ ಪ್ರೌಢಶಾಲಾ ಆವರಣದಲ್ಲಿ ರಡ್ಡಿ ಸಮಾಜದ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನೆರವೇರಿತು.

ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಮಾತನಾಡಿ, ಜನ ಸೇವೆಯೇ ಜನಾರ್ಧನ ಸೇವೆ
ಎಂದು ಜನರ ಮಧ್ಯೆಯೇ ಜೀವನ ನಡೆಸುವುದರೊಂದಿಗೆ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದ ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಗಲಿಕೆ ಕೇವಲ ಅವರ ಕುಟುಂಬದವರಿಗೆ ನಷ್ಟವಲ್ಲ, ಇಡಿ ರಾಜ್ಯಕ್ಕೆ
ತುಂಬಲಾರದಂತಹ ನಷ್ಟ ಉಂಟಾಗಿದೆ ಎಂದರು.

ಮಾಜಿ ಸಚಿವ ಹಾಲಿ ಶಾಸಕ ಎಂ.ಬಿ. ಪಾಟೀಲ ಮಾತನಾಡಿ, ಬಿ.ಎಸ್‌. ಪಾಟೀಲ (ಸಾಸನೂರ) ಮತ್ತು ನಮ್ಮ ತಂದೆ ಬಿ.ಎಂ. ಪಾಟೀಲ ಅವರ ಸ್ನೇಹ ಸಂಬಂಧದೊಂದಿಗೆ ನಡೆದ ರಾಜಕಾರಣದ ಗರಡಿಯಲ್ಲಿ ಬೆಳೆದ ನಾನು ಸಾಸನೂರ ಅವರ ಕುಟುಂಬದ ಸದಸ್ಯರಲ್ಲೊಬ್ಬ. ಅವರ ಕುಟುಂಬದಲ್ಲಿ ಆಗು ಹೋಗುವ ಪ್ರತಿಯೊಂದರಲ್ಲಿಯೂ ಭಾಗಿಯಾಗಿ ಕಷ್ಟ ಸುಖಗಳೊಂದಿಗೆ ರಾಜಕಾರಣವೆಂಬುದನ್ನು ಹೇಗೆ ಮಾಡ ಬೇಕೆಂಬುದನ್ನು ಕಲಿತಿದ್ದೇನೆ. ನನ್ನ ರಾಜಕೀಯ ಜೀವನದ ಗುರುಗಳ ಸಾಲಿನಲ್ಲಿ ಬಿ.ಎಸ್‌. ಪಾಟೀಲ (ಸಾಸನೂರ) ಅವರು ಒಬ್ಬರಾಗಿದ್ದಾರೆಂದರು. 

ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಮಾತನಾಡಿ, ಹೂವಿನ ಹಿಪ್ಪರಗಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಎರಡು ಬಾರಿ 4 ಖಾತೆಗಳೊಂದಿಗೆ ಸಚಿವ ಸ್ಥಾನ ನಿಭಾಯಿಸಿದ ಧೀಮಂತ ರಾಜಕಾರಣಿ. ನೇರ ನಿಷ್ಟೂರ ರಾಜಕಾರಣಿ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದರು.

ಹಿರೂರ ಹಿರೇಮಠದ ಜಯಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ರಾಜ್ಯದ ರಾಜಕಾರಣದ ಇತಿಹಾಸದಲ್ಲಿಯೇ ಪರಿಭಾಷೆಯನ್ನು ಬರೆದಂತಹ ಸಾಸನೂರಿನ ನಂದಾದೀಪ ನಂದಿಹೋಗಿದ್ದು ಇದರಿಂದ ಜಿಲ್ಲೆಯಲ್ಲಿಯೇ ನಿಶಬ್ದ ವಾತಾವರಣ ನಿರ್ಮಾಣವಾಗಿದೆ. ಅವರು ಹಾಕಿಕೊಟ್ಟ ಪ್ರತಿಯೊಂದು ಮಾರ್ಗಗಳು ಎಲ್ಲರ ಜೀವನಕ್ಕೆ ದಾರಿ ದೀಪವಾಗಲಿವೆ. ಅವರ ದಾರಿಯಲ್ಲಿ ಎಲ್ಲರೂ ನಡೆಯಬೇಕೆಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ, ಅರುಣ ಶಹಾಪುರ, ಮಾಜಿ ಶಾಸಕ ಸಿ.ಎಸ್‌. ನಾಡಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಳಗಿ ಮಾಜಿ ಶಾಸಕ ಜಿ.ಟಿ. ಪಾಟೀಲ, ವಿಜುಗೌಡ ಪಾಟೀಲ, ಗುಂಡಕನಾಳಶ್ರೀ, ಮನಗೂಳಿಶ್ರೀ,
ಬ.ಬಾಗೇವಾಡಿಶ್ರೀ, ವಡವಡಗಿಶ್ರೀ, ಕುಂಟೋಜಿಶ್ರೀ, ಖಾಸತ ಮಠದಶ್ರೀ, ಅಂಕಲಗಿ ಶ್ರೀಗಳು ಒಳಗೊಂಡು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.