ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಿ: ನಡಹಳ್ಳಿ


Team Udayavani, Sep 21, 2020, 6:28 PM IST

Udayavani Kannada Newspaper

ಮುದ್ದೇಬಿಹಾಳ: ಪಟ್ಟಣದ ಹೊರ ವಲಯದ ಬಿದರಕುಂದಿ ಗ್ರಾಮ ವ್ಯಾಪ್ತಿಯಲ್ಲಿರುವ ತಾಲೂಕು ಮಟ್ಟದ ಕ್ರೀಡಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲು ಯೋಜನೆ ರೂಪಿಸಬೇಕು ಮತ್ತು ಈಗಾಗಲೇ ಅರ್ಧಮರ್ಧ ಕಾಮಗಾರಿ ನಡೆದಿರುವ ಕ್ರೀಡಾಂಗಣದ ಸಮಗ್ರ ಮಾಹಿತಿ ತಮಗೆ ಒದಗಿಸಬೇಕು ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕ್ರೀಡಾಂಗಣಕ್ಕೆ ಮೀಸಲಿಟ್ಟಿರುವ ಸರ್ಕಾರಿ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಹಿಂದಿನ ಶಾಸಕರ ಅವ ಧಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಲಾಗಿತ್ತು. ಆದರೆ ಆ ಸ್ಥಳದ ಬಗ್ಗೆ ಯಾವುದೇ ಸ್ಪಷ್ಟತೆ ಇರಲಿಲ್ಲ. ಎಷ್ಟು ಜಾಗ ಬೇಕು ಎನ್ನುವ ಮಾಹಿತಿಯೂ ಇರಲಿಲ್ಲ. ಸದ್ಯ ಕ್ರೀಡಾಂಗಣಕ್ಕೆ ಆಯ್ಕೆ ಮಾಡಿಕೊಂಡಿರುವಜಾಗ ಚಿಕ್ಕದಾಗುತ್ತದೆ. ಹೀಗಾಗಿ ಪಕ್ಕದಲ್ಲೇ ಇರುವ ಇನ್ನೊಂದು ಸರ್ವೇ ನಂಬರ್‌ನಲ್ಲಿನ ಜಾಗೆಯನ್ನೂ ಬಳಸಿಕೊಂಡು ಕ್ರೀಡಾಂಗಣವನ್ನು ದೊಡ್ಡದಾಗಿಸಿಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ತಾವು ಬದ್ಧರಾಗಿದ್ದೇವೆ ಎಂದರು.

ಆರ್‌ಎಂಎಸ್‌ಎ ರಸ್ತೆ ಪರಿಶೀಲನೆ: ಕ್ರೀಡಾಂಗಣ ಪಕ್ಕದಲ್ಲೇ ಆರ್‌ಎಂಎಸ್‌ಎ ಆದರ್ಶ ವಿದ್ಯಾಲಯದಹೊಸ ಕಟ್ಟಡ ರಸ್ತೆ ಇಲ್ಲದೆ ಅನಾಥವಾಗಿ ನಿಂತಿದೆ. ಈ ಶಾಲೆಗೆ ರಸ್ತೆ ಒದಗಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ರೈತ ವೀರಣ್ಣ ತಡಸದ ಅವರ ಜಮೀನಿನಲ್ಲಿ ರಸ್ತೆ ಪಡೆದುಕೊಳ್ಳಲಾಗಿದೆ. ತಾರನಾಳ ಕೂಡು ರಸ್ತೆಯಿಂದ ಶಾಲೆವರೆಗಿನ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ. ಸದ್ಯ ಮುದ್ದೇಬಿಹಾಳದ ಮಾರುತಿ ನಗರದಿಂದ ತಾರನಾಳ ಕೂಡು ರಸ್ತೆವರೆಗಿನ ಕಾಮಗಾರಿ ಪ್ರಾರಂಭಗೊಂಡಿದೆ. ಆದಷ್ಟು ಬೇಗ ಈ ರಸ್ತೆಯನ್ನೂ ಗುಣಮಟ್ಟದಲ್ಲಿ ನಿರ್ಮಿಸಿ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದು ಶಾಸಕರು ತಿಳಿಸಿದರು.

ಸಾಧ್ಯವಾದಷ್ಟು ತ್ವರಿತವಾಗಿ ಕೆಲಸ ಮಾಡಿ ಅಕ್ಟೋಬರ್‌ 2ರೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಿದರೆ ಅಂದು ಉಪ ಮುಖ್ಯಮಂತ್ರಿಯವರಿಂದ ನಡೆಯಲಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ಈ ರಸ್ತೆಯನ್ನೂ ಲೋಕಾರ್ಪಣೆಗೊಳಿಸುವುದು ಸಾಧ್ಯವಾಗುತ್ತದೆ ಎಂದು ಗುತ್ತಿಗೆದಾರ ಕೆ.ಎಸ್‌. ಪಾಟೀಲಗೆ ಸೂಚಿಸಿದ ಶಾಸಕರು, ರಸ್ತೆಯಲ್ಲಿ ಕಪ್ಪು ಎರೆ ಮಣ್ಣು ಇದೆ. ಮಳೆ ಬಂದಾಗ ಇದು ಕೆಸರಾಗುತ್ತದೆ. ಹೀಗಾಗಿ ಎರೆ ಮಣ್ಣನ್ನು ತೆಗೆದು ಆ ಸ್ಥಳದಲ್ಲಿ ಬೇರೆ ಕಡೆಯಿಂದ ಗುಣಮಟ್ಟದ ಗಟ್ಟಿಮುಟ್ಟಾದ ಗರಸು ಮಣ್ಣನ್ನು ತುಂಬಬೇಕು ಎಂದರು.

ಬೈಕ್‌ ಏರಿದ ಶಾಸಕ: ಆರ್‌ಎಂಎಸ್‌ಎ ಶಾಲೆಯ ಎರೆ ಮಣ್ಣಿನ ರಸ್ತೆಯಲ್ಲಿ ಸಂಚರಿಸಲು ಶಾಸಕರ ಕಾರ್‌ಗೆ ಸಾಧ್ಯವಾಗಲಿಲ್ಲ. ಹೀಗಾಗಿ ಈ ರಸ್ತೆಯನ್ನು ಪರಿಶೀಲಿಸಲು ಪತ್ರಕರ್ತ ಸಾಗರ ಉಕ್ಕಲಿ ಅವರ ಬುಲೆಟ್‌ ಏರಿದ ಶಾಸಕರು ಸವಾರನ ಹಿಂದೆ ಕುಳಿತು ರಸ್ತೆಯನ್ನು ಸಂಪೂರ್ಣ ಪರಿಶೀಲಿಸಿದರು. ನಂತರ ಗುತ್ತಿಗೆದಾರರಿಗೆ ಕೆಲ ಸಲಹೆ ಸೂಚನೆ ನೀಡಿ ಗುಣಮಟ್ಟದ ರಸ್ತೆಗೆ ಹೆಚ್ಚು ಗಮನ ಹರಿಸಬೇಕು ಎಂದರು.

ಶಾಸಕರು ಬೈಕ್‌ ಏರಿದ್ದನ್ನು ಕಂಡು ಶಾಸಕರ ಜೊತೆಗಿದ್ದ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಗುತ್ತಿಗೆದಾರ ಕೆ.ಎಸ್‌. ಪಾಟೀಲ ಮತ್ತಿತರರು ತಮ್ಮ ಕಾರುಗಳನ್ನು ದೂರದಲ್ಲೇ ಬಿಟ್ಟು ಮಾಧ್ಯಮದವರ ಬೈಕ್‌ ಏರಿ ಶಾಸಕರ ಹಿಂದೆ ಸಾಗಿ ಬಂದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.