ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಿ: ನಡಹಳ್ಳಿ


Team Udayavani, Sep 21, 2020, 6:28 PM IST

Udayavani Kannada Newspaper

ಮುದ್ದೇಬಿಹಾಳ: ಪಟ್ಟಣದ ಹೊರ ವಲಯದ ಬಿದರಕುಂದಿ ಗ್ರಾಮ ವ್ಯಾಪ್ತಿಯಲ್ಲಿರುವ ತಾಲೂಕು ಮಟ್ಟದ ಕ್ರೀಡಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲು ಯೋಜನೆ ರೂಪಿಸಬೇಕು ಮತ್ತು ಈಗಾಗಲೇ ಅರ್ಧಮರ್ಧ ಕಾಮಗಾರಿ ನಡೆದಿರುವ ಕ್ರೀಡಾಂಗಣದ ಸಮಗ್ರ ಮಾಹಿತಿ ತಮಗೆ ಒದಗಿಸಬೇಕು ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕ್ರೀಡಾಂಗಣಕ್ಕೆ ಮೀಸಲಿಟ್ಟಿರುವ ಸರ್ಕಾರಿ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಹಿಂದಿನ ಶಾಸಕರ ಅವ ಧಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಲಾಗಿತ್ತು. ಆದರೆ ಆ ಸ್ಥಳದ ಬಗ್ಗೆ ಯಾವುದೇ ಸ್ಪಷ್ಟತೆ ಇರಲಿಲ್ಲ. ಎಷ್ಟು ಜಾಗ ಬೇಕು ಎನ್ನುವ ಮಾಹಿತಿಯೂ ಇರಲಿಲ್ಲ. ಸದ್ಯ ಕ್ರೀಡಾಂಗಣಕ್ಕೆ ಆಯ್ಕೆ ಮಾಡಿಕೊಂಡಿರುವಜಾಗ ಚಿಕ್ಕದಾಗುತ್ತದೆ. ಹೀಗಾಗಿ ಪಕ್ಕದಲ್ಲೇ ಇರುವ ಇನ್ನೊಂದು ಸರ್ವೇ ನಂಬರ್‌ನಲ್ಲಿನ ಜಾಗೆಯನ್ನೂ ಬಳಸಿಕೊಂಡು ಕ್ರೀಡಾಂಗಣವನ್ನು ದೊಡ್ಡದಾಗಿಸಿಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ತಾವು ಬದ್ಧರಾಗಿದ್ದೇವೆ ಎಂದರು.

ಆರ್‌ಎಂಎಸ್‌ಎ ರಸ್ತೆ ಪರಿಶೀಲನೆ: ಕ್ರೀಡಾಂಗಣ ಪಕ್ಕದಲ್ಲೇ ಆರ್‌ಎಂಎಸ್‌ಎ ಆದರ್ಶ ವಿದ್ಯಾಲಯದಹೊಸ ಕಟ್ಟಡ ರಸ್ತೆ ಇಲ್ಲದೆ ಅನಾಥವಾಗಿ ನಿಂತಿದೆ. ಈ ಶಾಲೆಗೆ ರಸ್ತೆ ಒದಗಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ರೈತ ವೀರಣ್ಣ ತಡಸದ ಅವರ ಜಮೀನಿನಲ್ಲಿ ರಸ್ತೆ ಪಡೆದುಕೊಳ್ಳಲಾಗಿದೆ. ತಾರನಾಳ ಕೂಡು ರಸ್ತೆಯಿಂದ ಶಾಲೆವರೆಗಿನ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ. ಸದ್ಯ ಮುದ್ದೇಬಿಹಾಳದ ಮಾರುತಿ ನಗರದಿಂದ ತಾರನಾಳ ಕೂಡು ರಸ್ತೆವರೆಗಿನ ಕಾಮಗಾರಿ ಪ್ರಾರಂಭಗೊಂಡಿದೆ. ಆದಷ್ಟು ಬೇಗ ಈ ರಸ್ತೆಯನ್ನೂ ಗುಣಮಟ್ಟದಲ್ಲಿ ನಿರ್ಮಿಸಿ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದು ಶಾಸಕರು ತಿಳಿಸಿದರು.

ಸಾಧ್ಯವಾದಷ್ಟು ತ್ವರಿತವಾಗಿ ಕೆಲಸ ಮಾಡಿ ಅಕ್ಟೋಬರ್‌ 2ರೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಿದರೆ ಅಂದು ಉಪ ಮುಖ್ಯಮಂತ್ರಿಯವರಿಂದ ನಡೆಯಲಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ಈ ರಸ್ತೆಯನ್ನೂ ಲೋಕಾರ್ಪಣೆಗೊಳಿಸುವುದು ಸಾಧ್ಯವಾಗುತ್ತದೆ ಎಂದು ಗುತ್ತಿಗೆದಾರ ಕೆ.ಎಸ್‌. ಪಾಟೀಲಗೆ ಸೂಚಿಸಿದ ಶಾಸಕರು, ರಸ್ತೆಯಲ್ಲಿ ಕಪ್ಪು ಎರೆ ಮಣ್ಣು ಇದೆ. ಮಳೆ ಬಂದಾಗ ಇದು ಕೆಸರಾಗುತ್ತದೆ. ಹೀಗಾಗಿ ಎರೆ ಮಣ್ಣನ್ನು ತೆಗೆದು ಆ ಸ್ಥಳದಲ್ಲಿ ಬೇರೆ ಕಡೆಯಿಂದ ಗುಣಮಟ್ಟದ ಗಟ್ಟಿಮುಟ್ಟಾದ ಗರಸು ಮಣ್ಣನ್ನು ತುಂಬಬೇಕು ಎಂದರು.

ಬೈಕ್‌ ಏರಿದ ಶಾಸಕ: ಆರ್‌ಎಂಎಸ್‌ಎ ಶಾಲೆಯ ಎರೆ ಮಣ್ಣಿನ ರಸ್ತೆಯಲ್ಲಿ ಸಂಚರಿಸಲು ಶಾಸಕರ ಕಾರ್‌ಗೆ ಸಾಧ್ಯವಾಗಲಿಲ್ಲ. ಹೀಗಾಗಿ ಈ ರಸ್ತೆಯನ್ನು ಪರಿಶೀಲಿಸಲು ಪತ್ರಕರ್ತ ಸಾಗರ ಉಕ್ಕಲಿ ಅವರ ಬುಲೆಟ್‌ ಏರಿದ ಶಾಸಕರು ಸವಾರನ ಹಿಂದೆ ಕುಳಿತು ರಸ್ತೆಯನ್ನು ಸಂಪೂರ್ಣ ಪರಿಶೀಲಿಸಿದರು. ನಂತರ ಗುತ್ತಿಗೆದಾರರಿಗೆ ಕೆಲ ಸಲಹೆ ಸೂಚನೆ ನೀಡಿ ಗುಣಮಟ್ಟದ ರಸ್ತೆಗೆ ಹೆಚ್ಚು ಗಮನ ಹರಿಸಬೇಕು ಎಂದರು.

ಶಾಸಕರು ಬೈಕ್‌ ಏರಿದ್ದನ್ನು ಕಂಡು ಶಾಸಕರ ಜೊತೆಗಿದ್ದ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಗುತ್ತಿಗೆದಾರ ಕೆ.ಎಸ್‌. ಪಾಟೀಲ ಮತ್ತಿತರರು ತಮ್ಮ ಕಾರುಗಳನ್ನು ದೂರದಲ್ಲೇ ಬಿಟ್ಟು ಮಾಧ್ಯಮದವರ ಬೈಕ್‌ ಏರಿ ಶಾಸಕರ ಹಿಂದೆ ಸಾಗಿ ಬಂದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.