ವಿಜಯಪುರ: ಬಸ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸವಾರರ ಸಾವು
Team Udayavani, Sep 12, 2020, 9:43 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಜಿಲ್ಲೆಯ ಸಿಂದಗಿ ಬಳಿ ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಕಾರಣ ಬೈಕ್ ಮೇಲೆ ಹೊರಟಿದ್ದ ಮೂವರಲ್ಲು ಇಬ್ಬರು ಸವಾರರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಸಂಜೆ ಜರುಗಿದೆ.
ಸಿಂದಗಿ ಬಸ್ ನಿಲ್ದಾಣದಿಂದ ಯಾದಗಿರಿ ಜಿಲ್ಲೆಯ ಶಹಾಪೂರ ಕಡೆಗೆ ಹೋರಟ ಸಾರಿಗೆ ಸಂಸ್ಥೆಯ ಬಸ್ ಗೆ ಯಂಕಂಚಿ ಗ್ರಾಮದಿಂದ ಸಿಂದಗಿ ಕಡೆಗೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಬೈಕ್ ನ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ ಸವಾರರಲ್ಲಿ ಮತ್ತೋರ್ವ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾನೆ.
ತಾಲೂಕಿನ ಕೊಕಟನೂರ ಗ್ರಾಮದ ತಿಪ್ಪಣ್ಣ ಮಲ್ಲಪ್ಪ ಬ್ಯಾಕೋಡ (28), ಯಂಕಂಚಿ ಗ್ರಾಮದ ರಮೇಶ ಗೌಡಪ್ಪ ಮುಳಸಾವಳಗಿ (35) ಸ್ಥಳದಲ್ಲೇ ಮೃತಪಟ್ಟಿದ್ದು. ಯಂಕಂಚಿ ನಿವಾದಿ ಶಿವಾನಂದ ನಿಂಗಪ್ಪ ಕುರನಳ್ಳಿ (30) ಗಂಭೀರ ಗಾಯಗೊಂಡು ವಿಜಯಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಸಿಂದಗಿ ಪೋಲಿಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ