ಲಾಕ್ ಡೌನ್ ಮುಗಿಸಿ ಸಂಚಾರ ಆರಂಭಿಸಿದ ಸಾರಿಗೆ: ಉತ್ಸಾಹ ತೋರದ ಜನರು
Team Udayavani, May 19, 2020, 9:05 AM IST
ವಿಜಯಪುರ : ಲಾಕ್ ಡೌನ್ ನಿರ್ಬಂಧದ ಸುದೀರ್ಘ ಎರಡು ತಿಂಗಳ ಬಳಿಕ ನಗರದಲ್ಲಿ ಕೇಂದ್ರ ಬಸ್ ನಿಲ್ದಾಣದಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಗೊಂಡಿದೆ. ಆದರೆ ಜನರು ಅಷ್ಟೇನು ಉತ್ಸಾಹ ತೋರಿದಂತೆ ಕಂಡುಬರಲಿಲ್ಲ.
ಬೆಳಿಗ್ಗೆ 7-20 ಗೆ ಕೇಂದ್ರ ಬಸ್ ನಿಲ್ದಾಣದಿಂದ ಹುಬ್ಬಳ್ಳಿ ನಗರಕ್ಕೆ 30 ಪ್ರಯಾಣಿಕರೊಂದಿಗೆ ಕೆಎ 33 ಎಫ್ 0437 ಸಂಖ್ಯೆಯ ಬಸ್ ನಿಲ್ದಾಣದಿಂದ ಸಂಚಾರ ಆರಂಭಿಸಿತು.
ಇದರೊಂದಿಗೆ ವಿಜಯಪುರ ಜಿಲ್ಲಾ ಕೇಂದ್ರದಿಂದ ಅಂತರ ಜಿಲ್ಲೆ ಹಾಗೂ ಜಿಲ್ಲೆಯ ಆಂತರಿಕ ಸಾರಿಗೆಗೆ ಚಾಲನೆ ಪಡೆದಿದೆ.
ಬಸ್ ಸಂಚಾರ ಆರಂಭಗೊಂಡರೂ ನಿಲ್ದಾಣದಲ್ಲಿ ಬೆಳಿಗ್ಗೆ ಪ್ರಯಾಣಿಕರ ಸಂದಣಿ ಹೆಚ್ಚಾಗಿ ಕಂಡುಬರಲಿಲ್ಲ.
ಪ್ರಯಾಣಕ್ಕೂ ಮುನ್ನ ಎಲ್ಲಾ ಚಾಲಕರಿಗೆ, ಬಸ್ ನಿರ್ವಾಹಕರಿಗೆ ಥರ್ಮಲ್ ಟೆಸ್ಟ್ ನಡೆಸಲಾಯಿತು. ಬಸ್ ಹತ್ತುವ ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸುವುದು ಅನಿವಾರ್ಯವಾಗಿದೆ. ಬಸ್ ನಲ್ಲಿ 30ಕ್ಕಿಂತ ಹೆಚ್ಚು ಜನರನ್ನು ಹಾಕುವಂತಿಲ್ಲ. ಅಂತರ ಕಾಯ್ದುಕೊಂಡು ಪ್ರಯಾಣಿಸಬೇಕು ಎಂಬ ಷರತ್ತುಗಳನ್ನು ರಾಜ್ಯಸರಕಾರ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್