ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕುಟುಂಬದ ಮಹಿಳೆಯರಿಂದ ಮತಗಟ್ಟೆಗೆ ಪೂಜೆ
Team Udayavani, Oct 30, 2021, 8:44 AM IST
ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಮತದಾನ ನಡೆಯುತಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಕುಟುಂಬದ ಮಹಿಳೆಯರು ಮತಗಟ್ಟೆಗೆ ಪೂಜೆ ಸಲ್ಲಿಸಿ, ಮತದಾನ ಮಾಡಿದ್ದಾರೆ.
ಬೆ.7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಮತದಾನ ಆರಂಭಕ್ಕೆ ಮುನ್ನವೇ ಆಲಮೇಲ ಪಟ್ಟಣದ ಮತಗಟ್ಟೆಗೆ ಆಗಮಿಸಿದ ಭೂಸನೂರ ಅವರ ಸಂಬಂಧಿ ಪದ್ಮಾವತಿ ಎಂಬವರು ಮತಗಟ್ಟೆ ಬಾಗಿಲು, ಹೊಸ್ತಿಲಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.
ಮತದಾನ ಶಾಂತಿಯುತವಾಗಿ ಆರಂಭಗೊಂಡಿದ್ದು, ಮಂದಗತಿಯಲ್ಲಿ ಮತದಾನ ನಡೆದಿದೆ.
ಇದನ್ನೂ ಓದಿ:ನಾನು ಆಡಿಸಿ ಬೆಳೆಸಿದ ಹುಡುಗ; ಮಾಮಾ….ಎಂದು ಅಕ್ಕರೆಯಿಂದ ಕರೆಯುತ್ತಿದ್ದ ಅಪ್ಪು
ಜೆಡಿಎಸ್ ಶಾಸಕರಾಗಿದ್ದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ನಿಧನದ ಹಿನ್ನೆಲೆಯಲ್ಲಿ ಸಿಂದಗಿ ವಿಧಾನಸಭೆ ಉಪ ಚುನಾವಣೆ ನಡೆಯುತ್ತಿದೆ.
ಜೆಡಿಎಸ್ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಪುತ್ರ ಅಶೋಕ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದು, ಇದೇ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ರಮೇಶ ಭೂಸನೂರ ಬಿಜೆಪಿ ಸ್ಪರ್ಧಿ. ಜೆಡಿಎಸ್ ನಾಜಿಯಾ ಅಂಗಡಿ ಅವರನ್ನು ಕಣಕ್ಕಿಳಿಸಿದೆ. ಈ ಪ್ರಮುಖರ ಹೊರತಾಗಿ ಇನ್ನೂ ಮೂವರು ಸ್ಪರ್ಧೆಯಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್