ರಾಜ್ಯ ಬಜೆಟ್ ಬಳಿಕ ಸಚಿವ ಸಂಪುಟ ವಿಸ್ತರಣೆ: ಬಸನಗೌಡ ಪಾಟೀಲ ಯತ್ನಾಳ


Team Udayavani, Feb 7, 2022, 4:05 PM IST

ರಾಜ್ಯ ಬಜೆಟ್ ಬಳಿಕ ಸಚಿವ ಸಂಪುಟ ವಿಸ್ತರಣೆ: ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ರಾಜ್ಯದ ಬಜೆಟ್ ಮಂಡನೆ ಬಳಿಕ ಸಂಪುಟ ವಿಸ್ತರಣೆ ಆಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ-ನಾನು ಇಬ್ಬರೇ ಕುಳಿತು ಅರ್ಧ ಗಂಟೆಗೂ ಹೆಚ್ಚು ಸಮಯ ಮಾತನಾಡಿದ್ದರೂ ಸಚಿವ ಸ್ಥಾನ ನೀಡಿ ಎಂದು ಬೇಡಿಕೆ ಇರಿಸಿಲ್ಲ. ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡುವುದಿಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಪರಮಾಧಿಕಾರ ಹಾಗೂ ಹೈಕಮಾಂಡ್ ನಿರ್ಧಾರವಾಗಿರುತ್ತದೆ. ರಾಜ್ಯದ ಸಂಪುಟ ವಿಸ್ತರಣೆ ಯಾವಾಗಲಾದರೂ ಮಾಡಲಿ ನಮ್ಮ ಗಡಿಬಿಡಿ ಮಾಡುವಂಥದೇನೂ ಇಲ್ಲ. ತುರ್ತಾಗಿ ಸಂಪುಟ ವಿಸ್ತರಿಸಿ ಎಂದು ನಾನೇನು ದೆಹಲಿಗೆ ಓಡಾಡಿಲ್ಲ ಎಂದರು.

ವಿಜಯಪುರ ನಗರದ ಅಭಿವೃದ್ಧಿ ವಿಷಯವಾಗಿ ಅರ್ಧ ಗಂಟೆಗೂ ಹೆಚ್ಚು ಸಮಯ ಇಬ್ಬರೇ ಕುಳಿತು ಚರ್ಚಿಸಿದರೂ ಸಚಿವ ಸ್ಥಾನಕ್ಕೆ ಬೇಡಿಕೆ ಇರಿಸಿಲ್ಲ. ನನ್ನನ್ನು ಸಚಿವನನ್ನಾಗಿ ಮಾಡಿ ಎಂದು ಅಂಗಲಾಚಿಲ್ಲಾ. ಮುಂದೆಯೂ ಇದಕ್ಕಾಗಿ ಯಾರ ಕೈಕಾಲು ಬೀಳುವುದಿಲ್ಲ ಎಂದರು.

ಸ್ವಾಮೀಜಿಗಳಿಗೆ ಹಣಕೊಟ್ಟು ಕೆಲಸ: ರಾಜ್ಯದಲ್ಲಿ ಪಂಚಮಸಾಲಿ ಸಮಾಜವನ್ನು ಒಡೆಯಲು ಸಚಿವ ಮುರುಗೇಶ ನಿರಾಣಿ ಮೂರನೇ ಪೀಠ ಸ್ಥಾಪಿಸಲು ಸ್ವಾಮಿಗಳಿಗೆ ಹಣಕೊಟ್ಟು ಹೇಳಿಕೆ ಕೊಡಿಸುವ ಕೆಲಸ ನಡೆಸಿದ್ದಾರೆ. ಪೀಠ ಸ್ಥಾಪನೆಗೆ ಅಯೋಗ್ಯರೊಂದಿಗೆ ಹೋಗುವುದಿಲ್ಲ ಸಚಿವ ಮುರುಗೇಶ ನಿರಾಣಿ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ:ಇಬ್ರಾಹಿಂ ಮನವೊಲಿಕೆಗೆ ಸಿದ್ದರಾಮಯ್ಯ ಯತ್ನ: ಎಚ್.ಸಿ.ಮಹದೇವಪ್ಪ ಸಂಧಾನ ಮಾತುಕತೆ

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ಹಿಂದೆ ಸಚಿವ ನಿರಾಣಿ ಇಲ್ಲ ಎಂದು ಕೆಲ ಸ್ವಾಮೀಜಿಗಳು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವ ಸ್ವಾಮಿ ಏನು ಮಾತನಾಡಿದ್ದಾರೆ ಎಂದು ಗೊತ್ತಿದೆ. ಸಚಿವ ನಿರಾಣಿ ಯಾರ್ಯಾರಿಗೆ ಎಷ್ಟೆಷ್ಟು ಹಣ ಕಳುಹಿಸಿದ್ದಾನೆ ಎಂಬುದು ಗೊತ್ತಿದೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಕೆಲ ಮುಖಂಡರು ಟಿಕೆಟ್ ಕೇಳುತ್ತಿರುವುದರ ಹಿಂದೆಯೂ ನಿರಾಣಿ ಹಣ ಕೆಲಸ ಮಾಡುತ್ತಿದೆ. ನಗರ ಕ್ಷೇತ್ರದ ಟಿಕೆಟ್ ಎಲ್ಲಾರೂ ಬೇಡುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಬೇಡಲು ಅರ್ಜಿ ಕೊಡುವ ಪದ್ದತಿ ಇಲ್ಲ ಎಂದು ಕುಟುಕಿದರು.

ಫ್ಯಾಕ್ಟರಿಯ ಸಕ್ಕರೆ ತಂದು ಮಾಧ್ಯಮದವರಿಗೆ ಚಹಾ ಮಾಡಿ ಕೊಡುತ್ತಿದ್ದಾರೆ. ನೀವು ಕೂಡಾ ಸಚಿವ ನಿರಾಣಿ ಅವರನ್ನು ಗೌರವದಿಂದಲೇ ಕಾಣಬೇಕು ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.