ತಳ ಮಟ್ಟದಿಂದ ಜೆಡಿಎಸ್‌ ಸಂಘಟಿಸಲು ಕಾರ್ಯಕರ್ತರಿಗೆ ಕರೆ


Team Udayavani, Jan 26, 2022, 3:40 PM IST

23JDS

ಹೂವಿನಹಿಪ್ಪರಗಿ: ರಾಷ್ಟ್ರೀಯ ಪಕ್ಷಗಳ ಅಪ ಪ್ರಚಾರಕ್ಕೆ ಕಿವಿಗೊಡದೆ ಜಾತ್ಯತೀತ ಜನತಾ ದಳ ಪಕ್ಷವನ್ನು ಕ್ಷೇತ್ರದಲ್ಲಿ ಬೇರು ಮಟ್ಟದಿಂದ ಬಲಪಡಿಸಿ ಎಂದು ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್‌ ಧುರೀಣ ರಾಜು ಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.

ಬಸವನಬಾಗೇವಾಡಿ ತಾಲೂಕಿನ ರಬಿನಾಳ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಜೆಡಿಎಸ್‌ ಪಕ್ಷದ ಹೂವಿನಹಿಪ್ಪರಗಿ ವಲಯ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹಾಗೂ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷ ಸಿದ್ದಾಂತದ ಮೇಲೆ ನಂಬಿಕೆಯಿಟ್ಟು ಕೆಲಸ ಮಾಡಿ ಎಂದರು.

ಜೆಡಿಎಸ್‌ ಅಧಿಕಾರವಧಿಯಲ್ಲಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಭಿವೃದ್ಧಿ ಹಾಗೂ ಜನಪರ ಕಲ್ಯಾಣ ಯೋಜನೆಗಳನ್ನು ಕ್ಷೇತ್ರದ ಜನರಿಗೆ ತಿಳಿಸಿ. ಮುಂದಿನ ದಿನಮಾನಗಳಲ್ಲಿ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರೋಣ ಎಂದು ಹೇಳಿದರು.

ಕುಮಾರಣ್ಣನ ಕನಸಿನ ಕೂಸಾದ ಪಂಚರತ್ನ ಕಾರ್ಯಕ್ರಮವನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯದ ಸಾಮಾಜಿಕ ನ್ಯಾಯ ಅನುಸರಿಸುವ ಏಕೈಕ ಪಕ್ಷ ಜೆಡಿಎಸ್‌. ದೇವೇಗೌಡರು ಪ್ರಧಾನಿಗಳಾಗಿದ್ದ ಸಮಯದಲ್ಲಿ ಆಲಮಟ್ಟಿ ಡ್ಯಾಂ ನಿರ್ಮಾಣ ಕಾಮಗಾರಿಗೆ ಹೆಚ್ಚಿನ ಅನುದಾನ ನೀಡಿ ಆಣೆಕಟ್ಟು ಪೂರ್ಣಗೊಳಿಸಿದರು. ಇಂದಿನ ದಿನಮಾನಗಳಲ್ಲಿ ಅಖಂಡ ಜಿಲ್ಲೆ ನೀರಾವರಿ ನಾಡಾಗಿ ಸದಾ ಹಸಿರಿನಿಂದ ಕಂಗೊಳಿಸುವುದಕ್ಕೆ ದೇವೇಗೌಡರ ಕಾರಣರಾಗಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜಿ. ಪಾಟೀಲ (ಹಲಸಂಗಿ) ಮಾತನಾಡಿ, ಬಿಜೆಪಿ ಸರಕಾರ ಪಕ್ಷದ ಸಿದ್ಧಾಂತವನ್ನು ಕಡೆಗಣಿಸಿ ಬೆಲೆ ಏರಿಕೆ ಮಾಡಿದೆ. ಜೆಡಿಎಸ್‌ ಅಧಿಕಾರಕ್ಕೆ ಬಂದಲ್ಲಿ ಕುಮಾರಸ್ವಾಮಿಯವರು ಜನಪರ ಹಾಗೂ ರೈತ ಪರವಾದ ಪಂಚರತ್ನ ಯೋಜನೆಯನ್ನು ಜಾರಿಗೆ ತರುವ ಉದ್ದೇಶ ಹೊಂದಿದ್ದು ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ. ಕ್ಷೇತ್ರದಲ್ಲಿ ರಾಜುಗೌಡ ಪಾಟೀಲರ ಕೈ ಬಲಪಡಿಸಲು ಕಾರ್ಯಕರ್ತರು ಸಿದ್ಧರಿರಬೇಕು. ಯಾವುದೇ ಕಾರಣಕ್ಕೂ ಇಂತಹ ವ್ಯಕ್ತಿ ನಿಮಗೆ ಸಿಗುವುದಿಲ್ಲ. ಕಳೆದುಕೊಂಡು ಹುಡುಕುವುದರಲ್ಲಿ ಅರ್ಥವಿಲ್ಲ, ಆ ನಿಟ್ಟಿನಲ್ಲಿ ಜಾತಿಯನ್ನು ಮೀರಿ ಅವರ ಕೈ ಬಲ ಪಡಿಸಿಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಸಾಯಬಣ್ಣ ಬಾಗೇವಾಡಿ, ಬಸವರಾಜ ಬಾಗೇವಾಡಿ, ಹೂವಿನಹಿಪ್ಪರಗಿ ವಲಯ ಅಧ್ಯಕ್ಷ ಬಸನಗೌಡ ಬಿರಾದಾರ ಮಾತನಾಡಿದರು. ಅನಿಲಗೌಡ ಪಾಟೀಲ, ಗುರನಗೌಡ ಪಾಟೀಲ, ಸಚಿನಗೌಡ ಪಾಟೀಲ, ಮಾಂತಗೌಡ ಪಾಟೀಲ, ಅಣ್ಣಪ್ಪ ಆಲೂರ, ರಿಯಾಜ್‌ ಯಲಗಾರ, ಶಿವಣ್ಣ ಬಾಗೇವಾಡಿ, ಶ್ರೀಮಂತ ಜೋಗಿ, ಮಡುಸಾಹುಕಾರ ಬಿರಾದಾರ, ನಿಂಗನಗೌಡ ಬಿರಾದಾರ, ಬಸಣ್ಣ ಬಾಗೇವಾಡಿ, ಭೀಮನಗೌಡ ಪಾಟೀಲ, ಜ್ಞಾನೇಶ್ವರ ಭೋಸಲೆ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು. ರಾಜುಗೌಡ ಬಿರಾದಾರ ನಿರೂಪಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಕಾಲ ಸಮೀಪಿಸುತ್ತಿದೆ. ಮುಂದಿನ ದಿನಗಳನ್ನು ಗಮನದಲ್ಲಿಟ್ಟು ಜಿಪಂ ಹಾಗೂ ತಾಪಂ ಚುನಾವಣೆಯನ್ನು ಗಮನಿಸಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ನಾವು ವಿಧಾನಸಭೆ ಚುನಾವಣೆಯಲ್ಲಿ ಸುಲಭವಾಗಿ ಅಧಿಕಾರಕ್ಕೆರಲು ಸಾಧ್ಯ. -ಬಸನಗೌಡ ಮಾಡಗಿ, ಜೆಡಿಎಸ್‌ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.