ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೆ ಹೋರಾಟ: ಯತ್ನಾಳ
Team Udayavani, Sep 27, 2021, 4:13 PM IST
ವಿಜಯಪುರ: ಪಂಚಮಸಾಲಿಗೆ ಸಮುದಾಯಕ್ಕೆ ಪ್ರವರ್ಗ 2-ಎ ಮೀಸಲಾತಿ ಸೌಲಭ್ಯ ಸಿಗುವ ವರೆಗೂ ನಮ್ಮ ಸಮಾಜದ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲು ಸೌಲಭ್ಯ ನೀಡುವ ಕುರಿತು ಕ್ರಮ ಕೈಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರು ತಿಂಗಳ ಕಾಲಾವಕಾಶ ಕೋರಿದ್ದಾರೆ. ಅಲ್ಲದೇ ಮೀಸಲು ಸೌಲಭ್ಯಕ್ಕೆ ಬೇಡಿಕೆ ಇರಿಸಿರುವ ಎಲ್ಲ ಸಮುದಾಯಗಳಿಗೆ ನ್ಯಾಯ ಸಲ್ಲಿಸುವುದಾಗಿ ಹೇಳಿದ್ದಾರೆ. ಆದರೆ ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ಇನ್ನು ನಾನು ಪಂಚಮಸಾಲಿ ಸಮುದಾಯದ ಮೀಸಲು ಹೋರಾಟದ ಮುಂಚೂಣಿಯಲ್ಲಿದ್ದರೂ ಕೇವಲ ನಮ್ಮ ಸಮಾಜಕ್ಕೆ ಮಾತ್ರ ಮೀಸಲಾತಿ ಬೇಕೆಂದು ಪಟ್ಟು ಹಿಡಿದಿಲ್ಲ. ಬದಲಾಗಿ ಹಿಂದುಳಿದ ಇತರೆ ಸಮುದಾಯಗಳಿಗೂ ಮೀಸಲು ಸೌಲಭ್ಯ ಕೊಡುವಂತೆ ಸದನದ ಹೊರಗೆ ಹಾಗೂ ಒಳಗೆ ಹೋರಾಟ ಮಾಡಿದ್ದೇನೆ. ಹೀಗಾಗಿ ಸಾಮಾಜಿಕ ನ್ಯಾಯಕಾಗಿ ಅರ್ಹ ಎಲ್ಲ ಸಮುದಾಯಗಳಿಗೆ ಮೀಸಲು ಸೌಲಭ್ಯ ಸಿಗುವ ವರೆಗೆ ಹೋರಾಟ ಮುಂದುವರೆಸುವುದಾಗಿ ಹೇಳಿದರು.
ಇದನ್ನೂ ಓದಿ:ಕೈಗಾರಿಕಾ ಪ್ರದೇಶದಲ್ಲಿಯೇ ಟೌನ್ ಶಿಪ್ ನಿರ್ಮಾಣಕ್ಕೆ ಚಿಂತನೆ: ಸಚಿವ ನಿರಾಣಿ
ರಾಜ್ಯದಲ್ಲಿ ಶಾಸ್ವತ ಹಿಂದುಳಿದ ಆಯೋಗವಿದ್ದು, ಕಾಲಕಾಲಕ್ಕೆ ಈ ಆಯೋಗ ಮೀಸಲಾತಿ ಪರಿಶೀಲಿಸಿ, ಬದಲಾವಣೆ ಮಾಡುತ್ತದೆ. ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಿಂದುಳಿದಿರುವಿಕೆ ಅವಲೋಕಿಸುತ್ತದೆ. ಅಭಿವೃದ್ಧಿ ಹೊಂದದ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡುವ ಅಗತ್ಯದ ಕುರಿತು ಹಾಗೂ ಅಭಿವೃದ್ಧಿ ಕಂಡಿರುವ ಸಮುದಾಯಗಳನ್ನು ಮೀಸಲಾತಿ ಸೌಲಭ್ಯದಿಂದ ಕೈ ಬಿಡಲು ಸರ್ಕಾರಕ್ಕೆ ಶಿಫಾರಸು ಮಾಡುವ ಅಧಿಕಾರ ಹೊಂದಿದೆ. ನಮ್ಮ ಸಮುದಾಯದ ಮೀಸಲು ಸೌಲಭ್ಯದ ವಿಷಯದಲ್ಲಿ ಆಯೋಗ ನ್ಯಾಯ ಸಮ್ಮತ ನಿರ್ಧಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
MUST WATCH
ಹೊಸ ಸೇರ್ಪಡೆ
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ