ಪಾವರ್ಲೂಮ್ ಮಗ್ಗಗಳ ಮೇಲಿನ ನಿಗದಿತ ವಿದ್ಯುತ್ ಶುಲ್ಕ ರದ್ದುಗೊಳಿಸಿ
Team Udayavani, Feb 24, 2022, 5:14 PM IST
ರಬಕವಿ-ಬನಹಟ್ಟಿ: ಪಾವರಲೂಮ್ ಮಗ್ಗಗಳ ಮೇಲೆ ಇಲಾಖೆ ವಿತರಿಸುತ್ತಿರುವ ನಿಗದಿತ ಶುಲ್ಕನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಸ್ಥಳೀಯ ಜೋಡಣಿ ದಾರ ನೇಕಾರರ ಮುಖಂಡ ಕುಬೇರ ಸಾರವಾಡ ಹೇಳಿದರು.
ಸ್ಥಳೀಯ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಜಿ.ಕಲಕಂಬ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಈಗಾಗಲೇ ಕೋವಿಡ್ನಿಂದಾಗಿ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಾಗೂ ಜಿಎಸ್ಟಿಯಿಂದಗಿ ಜವಳಿ ಉದ್ಯಮಕ್ಕೆ ಹಾಗೂ ನೇಕಾರರಿಗೆ ಬಹಳಷ್ಟು ತೊಂದರೆಯಾಗಿದೆ. ಈಗ ಇಲಾಖೆಯು ಪಾವರಲೂಮ್ ಮಗ್ಗಗಳ ಮೇಲೆ ನಿಗದಿತ ಶುಲ್ಕ ಹಾಕುವುದರಿಂದ ನೇಕಾರರಿಗೆ ಮತ್ತಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಇಲಾಖೆ ಕೂಡಲೇ ನಿಗದಿತ ಶುಲ್ಕ ರದ್ದುಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕುಬೇರ ಸಾರವಾಡಿ ಸರ್ಕಾರ ಮತ್ತು ಇಲಾಖೆಗೆ ಎಚ್ಚರಿಕೆ ನೀಡಿದರು.
ಇದಕ್ಕೂ ಪೂರ್ವದಲ್ಲಿ ನೇಕಾರರು ಸ್ಥಳೀಯ ಕಾಡಸಿದ್ಧೇಶ್ವರ ದೇವಸ್ಥಾನದಿಂದ ಇಲಾಖೆಯ ಕಾರ್ಯಾಲಯದವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ನಂತರ ಸ್ಥಳೀಯ ಹೆಸ್ಕಾಂ ಅಧಿಕಾರಿ ಎಸ್.ಜಿ.ಕಲಕಂಬ ಅವರಿಗೆ ಮನವಿ ಸಲ್ಲಿಸಿದರು. ಪರಮಾನಂದ ಭಾವಿಕಟ್ಟಿ, ಬಸವರಾಜ ಮುರಗೋಡ, ಮಹಾದೇವ ನುಚ್ಚಿ, ನಾಮದೇವ ಮಾನೆ, ಬಸವರಾಜ ಕೊಪ್ಪದ, ಸುರೇಶ ಮಠದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ