ಬಿಜೆಪಿ ಟಿಕೆಟ್ ಘೋಷಣೆ ಬಳಿಕ ಅಭ್ಯರ್ಥಿ ವಿಜುಗೌಡ ಮಗನಿಂದ ಗಾಳಿಯಲ್ಲಿ ಗುಂಡು

ಬಸವನಾಡನ್ನು ಬಿಹಾರ ಮಾಡುವ ಹುನ್ನಾರ: ಕಾಂಗ್ರೆಸ್ ಆರೋಪ

Team Udayavani, May 4, 2023, 12:06 PM IST

ಬಿಜೆಪಿ ಟಿಕೆಟ್ ಘೋಷಣೆ ಬಳಿಕ ಅಭ್ಯರ್ಥಿ ವಿಜುಗೌಡ ಮಗನಿಂದ ಗಾಳಿಯಲ್ಲಿ ಗುಂಡು

ವಿಜಯಪುರ: ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ಅಭ್ಯರ್ಥಿ ವಿಜುಗೌಡ ಪಾಟೀಲ ಮಕ್ಕಳು ಪಿಸ್ತೂಲ್ ಮೂಲಕ ಗುಂಡು ಹಾರಿಸಿ ವಿಜಯೋತ್ಸವ ಮಾಡಿದ್ದಾರೆ. ಇದೀಗ ಮೊಸಳೆ ಕಣ್ಣೀರು ಹಾಕಿ ಅಭ್ಯರ್ಥಿ ಮತ ಯಾಚನೆಗೆ ಮುಂದಾಗಿದ್ದಾರೆ. ಇಂಥವರು ಕ್ಷೇತ್ರದಲ್ಲಿ ಶಾಸಕರಾದರೆ ವಿಜಯಪುರ ಜಿಲ್ಲೆಯನ್ನು ಬಿಹಾರ ಮಾದರಿ ರೂಪಿಸಲು ಹೊರಟಿರುವ ಅಂಥವರನ್ನು ಕ್ಷೇತ್ರದ ಜನರು ಅಯ್ಕೆ ಮಾಡಿಕೊಳ್ಳುವ ಅಗತ್ಯವಿದೆಯೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ವಕ್ತಾರ ಸಂಗಮೇಶ ಬಬಲೇಶ್ವರ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಪ್ರಶ್ನಿಸಿದರು.

ಗುರುವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ವಿಜುಗೌಡ ಪಾಟೀಲ ಅವರ ಪುತ್ರ ಸಮರ್ಥ ಅವರು ಗಾಳಿಯಲ್ಲಿ ಗುಂಡು ಹಾರಿಸಿದ ಹಾಗೂ ವಾಹನದಲ್ಲಿ ಕುಳಿತು ಗುಂಡು ಹಾರಿಸಿದ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ವಿಜು ಗೌಡ ಅವರ ಮಗ ತಮ್ಮ ತಂದೆಗೆ ಟಿಕೆಟ್ ಘೋಷಣೆ ಆಗುತ್ತಲೇ ಗಾಳಿಯಲ್ಲಿ ಗುಂಡು ಹಾರಿಸಿ ವಿಜಯೋತ್ಸವ ಆಚರಿಸಿದ್ದಾರೆ. ಇದರೊಂದಿಗೆ ಬಿಹಾರ ಮಾದರಿಯನ್ನು ರೂಪಿಸುವುದನ್ನು ಹೇಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದರ ಮೂಲಕ ತೆರೆಯ ಹಿಂದಿನ ಮುಖವಾಡ ಬಯಲಾಗಿದೆ. ದೌರ್ಜನ್ಯ ಮನಸ್ಥಿತಿಯ ಇಂಥ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಈ ಬಗ್ಗೆ ಸಮಜಾಯಿಶಿ ನೀಡಬೇಕು ಎಂದು‌ ಆಗ್ರಹಿಸಿದರು.

ಇದನ್ನೂ ಓದಿ:ಲಯೋನೆಲ್‌ ಮೆಸ್ಸಿಗೆ ಎರಡು ವಾರ ನಿಷೇಧ ಹೇರಿದ ಪಿಎಸ್ ಜಿ ಕ್ಲಬ್!

ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ವೇದಿಕೆ ಮೇಲೆ ಕಣ್ಣೀರು ಹಾಕಿ ಮತ ಕೇಳುತ್ತಿದ್ದಾರೆ. ದಶಕಗಳ ಹಿಂದೆ ವಿಜುಗೌಡ ಕೂಡ ಇದೇ ರೀತಿ ಗುಂಡು ಹಾರಿಸುವ ವರ್ತನೆ ತೋರಿದ್ದರು. ಇದೀಗ ವಿಜುಗೌಡ ಜೊತೆ ಅವರ ಮಕ್ಕಳೂ ಸೇರಿ ಬಬಲೇಶ್ವರ ಕ್ಷೇತ್ರವನ್ನು ಬಿಹಾರ ಮಾದರಿಯಲ್ಲಿ ರೂಪಿಸಲು ಮುಂದಾಗಿದ್ದಾರೆ ಎಂದು ದೂರಿದರು.

ಚುನಾವಣಾ ಈ ಹಂತದಲ್ಲಿ ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರ ಹೊಂದಲು ಅವಕಾಶ ಇಲ್ಲ. ಈ ಬಗ್ಗೆ ನಾವೇನೂ ದೂರು ನೀಡುವುದಿಲ್ಲ. ಪೊಲೀಸ್ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಸ್ವಯಂ ಪ್ರೇರಿತ ಕ್ರಮ  ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.