ಕಾರು ಅಪಘಾತ- ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಅಪಾಯದಿಂದ ಪಾರು
Team Udayavani, Dec 18, 2019, 11:16 AM IST
ವಿಜಯಪುರ: ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಸಂಚರಿಸುತ್ತಿದ್ದ ಕಾರು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಬಳಿ ಅಪಘಾತಕ್ಕೆ ಈಡಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಬುಧವಾರ ಜಿಲ್ಲೆಯ ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮದ ಕಛೇರಿಯಲ್ಲಿ ವಿಧಾನಸಭಾ ಸಚಿವಾಲಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡ ಕಲ್ಯಾಣ ಸಮಿತಿ ಭೇಟಿ ನಡೆಯಲಿದ್ದವು. ಈ ಹಿನ್ನೆಲೆಯಲ್ಲಿ, ಸಮಿತಿ ಸದಸ್ಯರಾಗಿರುವ ಬಸವರಾಜ ಸಭೆಯಲ್ಲಿ ಪಾಲ್ಗೊಳ್ಳಲು ಆಲಮಟ್ಡಿಗೆ ತೆರಳುತ್ತಿದ್ದರು.
ಈ ವೇಳೆ ಗೊಳಸಂಗಿ ಬಳಿ ಏಕಮುಖ ದ್ವಿಪಥ ರಾಷ್ಟ್ರೀಯ ಹೆದ್ದಾರಿ ಬಳಿ ಮುಂದೆ ಹೋಗುತ್ತಿದ್ದ ವಾಹನ ಹಿಂದಿಕ್ಕಲು ಶಾಸಕರ ಕಾರು ಚಾಲಕ ಮುಂದಾದಾಗ, ಮುಂದಿನಿಂದ ಮತ್ತೊಂದು ವಾಹನ ಅಡ್ಡಬಂದಿದೆ. ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮವಾಗಿ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರು ಜಖಂಗೊಂಡರೂ ಶಾಸಕ ಬಸವರಾಜ ಹಾಗೂ ಶಾಸಕರ ಕಾರು ಚಾಲಕನಿಗೆ ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ.
ಘಟನೆಯ ಬಳಿಕ ಶಾಸಕರು ಮತ್ತೊಂದು ಕಾರಿನಲ್ಲಿ ಆಲಮಟ್ಟಿ ಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ