ಜಾನುವಾರು ಮಾರುಕಟ್ಟೆಯಲ್ಲಿ ಗಲಾಟೆ-ದಿಕ್ಕೆಟ್ಡು ಓಡಿದ ರೈತರು
Team Udayavani, Nov 24, 2019, 1:45 PM IST
ವಿಜಯಪುರ: ನಗರದಲ್ಲಿರುವ ಎಪಿಎಂಸಿ ಜಾನುವಾರು ಮಾರುಕಟ್ಟೆ ಪ್ರದೇಶದತ್ತ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಜನ ಗಲಾಟೆ ಮಾಡಿಕೊಂಡು ಬಂದ ಕಾರಣ ಭಯಗೊಂಡ ರೈತರು ಜಾನುವಾರು ಬಿಟ್ಟು ಓಡಿ ಹೋದ ಘಟನೆ ಜರುಗಿದೆ.
ಪ್ರತಿ ಭಾನುವಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಕುರಿಗಳ, ಜಾನುವಾರು ಸಂತೆ ನಡೆಯುತ್ತದೆ. ಪ್ರತಿ ವಾರ ಸುಮಾರು 25-30 ಲಕ್ಷ ರೂ. ಮೇಕೆ-ಕುರಿ ವಹಿವಾಟು ನಡೆಯುತ್ತಿದ್ದು, ಇಂದಿನ ಗಲಾಟೆಯಿಂದ ವಹಿವಾಟು ನಡೆಯದೇ ರೈತರು ನಷ್ಟ ಅನುಭವಿಸುವಂತಾಗಿದೆ.
ಇಂದಿನ ಮಾರುಕಟ್ಟೆ ಸಂದರ್ಭದಲ್ಲಿ ಗುಂಪು ಘರ್ಷಣೆ ಹಾಗೂ ಕಲ್ಲು ತೂರಾಟ ನಡೆಯುತ್ತಿದೆ ಎಂಬ ಸುದ್ದಿ ಹರಡಿದ್ದೇ ತಡ ಮಾರುಕಟ್ಟೆಗೆ ಬಂದಿದ್ದ ರೈತರು ಜಾನುವಾರು ಸಮೇತ ಸ್ಥಳದಿಂದ ಓಡಿ ಹೋಗಿದ್ದಾರೆ. ಮತ್ತೆ ಕೆಲ ರೈತರು ಮೇಕೆಗಳನ್ನು ಬಿಟ್ಟು, ಪರಾರಿಯಾಗಿದ್ದಾರೆ. ವ್ಯಾಪಾರಿಗಳು ಕೂಡ ದಿಕ್ಕಾಪಾಲಾಗಿದ್ದಾರೆ.
ಘಟನೆ ಬಳಿಕ ಮೇಕೆ-ಕುರಿ ಮಾರುವವರು ಹಾಗೂ ಕೊಳ್ಳುವವರು ಇಲ್ಲದೇ ವಾರದ ಜಾನುವಾರು ಮಾರುಕಟ್ಟೆ ವಹಿವಾಟು ಸ್ಥಗಿತವಾಗಿದೆ.
ಮಾರುಕಟ್ಟೆ ಪ್ರದೇಶದ ಹೊರಗೆ ಗಲಾಟೆ ಮಾಡುತ್ತಿದ್ದ ಎರಡು ಗುಂಪುಗಳ ಜನರ ಕೈಯಲ್ಲಿ ಕಲ್ಲು, ಕಟ್ಡಿಗೆ ಇದೆ ಎಂಬ ಸುದ್ದಿ ತಿಳಿದು, ಭಯಗೊಂಡ ರೈತರು ಮಾರುಕಟ್ಟೆ ಸ್ಥಳದಿಂದ ಓಡಿ ಹೋಗಿದ್ದಾರೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಎಪಿಎಂಸಿ ಠಾಣೆ ಪೊಲೀಸರು, ಮಾರುಕಟ್ಟೆ ಪ್ರದೇಶದಲ್ಲಿ ಬೀಡುಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ