ವಿಜಯಪುರ ಬಿಎಸ್ಎನ್ಎಲ್ ಕಚೇರಿ ಮೇಲೆ ಸಿಬಿಐ ದಾಳಿ
ದೆಹಲಿ ಸಿಬಿಐ ಕಚೇರಿಯ ಐದು ಅಧಿಕಾರಿಗಳ ತಂಡ ವಿಜಯಪುರ ನಗರದಲ್ಲಿರುವ ಬಿ ಎಸ್ ಎನ್ ಎಲ್ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದೆ.
Team Udayavani, Mar 19, 2021, 10:30 PM IST
ವಿಜಯಪುರ : ನಗರದ ಬಸವೇಶ್ವರ ವೃತ್ತದಲ್ಲಿರುವ ಬಿ ಎಸ್ ಎನ್ ಎಲ್ ಕಚೇರಿ ಮೇಲೆ ಶುಕ್ರವಾರ ರಾತ್ರಿ ದೆಹಲಿಯಿಂದ ಬಂದಿರುವ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದೆಹಲಿ ಸಿಬಿಐ ಕಚೇರಿಯ ಐದು ಅಧಿಕಾರಿಗಳ ತಂಡ ವಿಜಯಪುರ ನಗರದಲ್ಲಿರುವ ಬಿ ಎಸ್ ಎನ್ ಎಲ್ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದೆ.
ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯ ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದೆ ಎಂದು ಪ್ರಾಥಮಿಕ ಹಂತದ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಗೂ ಫೈಬರ್ ಕೇಬಲ್ ಸಂಪರ್ಕ ನೀಡಬೇಕಿದ್ದ ವಿಜಯಪುರ ಬಿಎಸ್ಎನ್ಎಲ್ ಅಧಿಕಾರಿಗಳು, ಕೆಲವೇ ಕೆಲವು ಗ್ರಾ.ಪಂ.ಗಳಿಗೆ ಮಾತ್ರ ಸಂಪರ್ಕ ನೀಡಿ, ಬಹುತೇಕ ಗ್ರಾ.ಪಂ. ಗಳಿಗೆ ಪೈಬರ್ ಕೇಬಲ್ ಸಂಪರ್ಕ ಕಲ್ಪಿಸದೇ ಪೂರ್ಣ ಕೆಲಸ ಮುಗಿಸಿದ್ದಾಗಿ ಬಿಲ್ ಪಾವತಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಫೈಬರ್ ಕೇಬಲ್ ಅಳವಡಿಕೆಯ ಗುತ್ತಿಗೆದಾರರಿಂದ ಹಣ ಪಡೆದು ಅಧಿಕಾರಿಗಳು ಭಾರಿ ಪ್ರಮಾಣದ ಅಕ್ರಮ ಎಸಗಿದ ಆರೋಪ ಕೇಳಿ ಬಂದಿದೆ. ಈ ಆರೋಪದ ತನಿಖೆಗೆ ಇಳಿದಿರುವ ಸಿಬಿಐ ಅಧಿಕಾರಿಗಳ ತಂಡ ಶುಕ್ರವಾರ ರಾತ್ರಿ ಬಿಎಸ್ಎನ್ಎಲ್ ಕಛೇರಿ ಮೇಲೆ ದಾಳಿ ನಡೆಸಿದೆ.
ಬಿ ಎಸ್ ಎನ್ ಎಲ್ ಕೇಂದ್ರ ಕಚೇರಿಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿದ್ದು, ಕಛೇರಿಯ ಬಾಗಿಲಿಗೂ ಕೀಲಿ ಹಾಕಿರುವ ಸಿಬಿಐ ಅಧಿಕಾರಿಗಳು, ಎರಡನೇ ಮಹಡಿಯಲ್ಲಿ ಬಿಎಸ್ಎನ್ಎಲ್ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಮಹತ್ವದ ದಾಖಲೆಗಳ ಶೋಧದಲ್ಲೂ ತೊಡಗಿದ್ದಾರೆ.
ಆದರೆ ಈ ಕುರಿತು ಮಾಧ್ಯಮಗಳಿಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿದ ಸಿಬಿಐ ತಂಡ, ಬಿಎಸ್ಎನ್ಎಲ್ ಕಛೇರಿ ಪ್ರವೇಶಕ್ಕೆ ನಿರ್ಬಂಧ ಹೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್