ಮಂತ್ರಿಗಿರಿಗಾಗಿ CD ಬ್ಲ್ಯಾಕ್ ಮೇಲ್, ಹಣಕೊಟ್ಟು ಸಚಿವಸ್ಥಾನ ಪಡೆದಿದ್ದಾರೆ: ಯತ್ನಾಳ್ ಆರೋಪ
ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಅವರನ್ನು ಹೆದರಿಸಿ ಸಚಿವರಾಗಿದ್ದಾರೆ.
Team Udayavani, Jan 13, 2021, 2:29 PM IST
ವಿಜಯಪುರ:ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನನ್ನ ಬೆಂಬಲ ಕೋರಿದ್ದ ಮೂವರು ಇದೀಗ ಸಿ.ಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ, ಹಣ ನೀಡಿ ಸಚಿವ ಸ್ಥಾನ ಪಡೆದುಕೊಂಡು ಸಂಪುಟ ಸೇರಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗಂಭೀರವಾಗಿ ಆರೋಪಿಸಿದ್ದಾರೆ.
ಬುಧವಾರ(ಜನವರಿ 13, 2021) ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಅಸಮಧಾನ ಹೊರ ಹಾಕಿದ ಯತ್ನಾಳ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕುತಂತ್ರ ನಡೆಸಿ ಬ್ಲ್ಯಾಕ್ ಮೇಲ್ ಮಾಡಿದ ಮೂವರು ಇದೀಗ ಸಚಿವ ಸ್ಥಾನ ಪಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ಮೂವರು ಈ ಹಿಂದೆ ನನ್ನ ಭೇಟಿಯಾಗಿದ್ದರು. ನಾವೆಲ್ಲರೂ ಒಗ್ಗೂಡಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸೋಣ, ನಮಗೆ ಬೆಂಬಲ ನೀಡಿ ಎಂದು ಕೋರಿದ್ದರು.ಅವರ ಮಾತು ಕೇಳಿ ನನಗೆ ಆಶ್ಚರ್ಯವಾಗಿತ್ತು. ಈಗಲೂ ಅಷ್ಟೇ ಅಚ್ಚರಿಯಾಗಿದೆ ಎಂದ ಯತ್ನಾಳ, ಆದರೆ ಬ್ಲ್ಯಾಕ್ ಮೇಲ್ ಮಾಡಿದ ಮೂವರಲ್ಲಿ ಯಾರೊಬ್ಬರ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.
ಹಣ ನೀಡಿದವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಅವರನ್ನು ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿ ಯಡಿಯೂರಪ್ಪ ವೀರಶೈವ-ಲಿಂಗಾಯತ ಸಮಾಜದ ಮರ್ಯಾದೆಯನ್ನ ಕಳೆದಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಸವಾಲು ಹಾಕಿದರು.
ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿರುವ ಯಡಿಯೂರಪ್ಪ, ಅಧಿಕಾರದಿಂದ ತಮ್ಮನ್ನು ಕೆಳಗೆ ಇಳಿಸಿದರೆ ತಮ್ಮಿಂದ ಹಣ ಪಡೆದ ಮಠಗಳು ಕೇಂದ್ರದ ವಿರುದ್ಧ ಬಂಡೇಳುವಂತೆ ಯೋಜನೆ ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಅಧಪತನ ಆರಂಭವಾಗಿದೆ, ಕಾದು ನೋಡಿ ಎಂದು ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ