ಸೌಹಾರ್ದಕ್ಕೆ ಧಕ್ಕೆ ಬರದಂತೆ ಹಬ್ಬ ಆಚರಿಸಿ:ಗಣಪತಿ ಗುಡಾಜೆ


Team Udayavani, Aug 21, 2017, 12:45 PM IST

vij 3.jpg

ತಾಳಿಕೋಟೆ: ಹಬ್ಬ ಆಚರಣೆಗಳು ಸಾಮರಸ್ಯ ಬಿತ್ತುವಂತವುಗಳಾಗಿವೆ. ಈ ಹಬ್ಬಗಳ ಆಚರಣೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬಾರದಂತೆ ಎಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಾಗಬೇಕೆಂದು ಡಿಎಸ್‌ಪಿ ಗಣಪತಿ ಗುಡಾಜೆ ಹೇಳಿದರು. ಗಣೇಶೋತ್ಸವ ಹಾಗೂ ಬಕ್ರೀದ್‌ ಹಬ್ಬದ ನಿಮಿತ್ತ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಕರೆಯಲಾದ
ಶಾಂತಿಪಾಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಳಿಕೋಟೆ ಶಾಂತತೆಗೆ ಹೆಸರುವಾಸಿಯಾದ ಪಟ್ಟಣವಾಗಿದೆ. ಹಿಂದೂ-ಮುಸ್ಲಿಂ ಬಾಂಧವರು ಯಾವಾಗಲೂ ಹಬ್ಬ ಆಚರಣೆಗಳಲ್ಲಿ ಪರಸ್ಪರ ಬಾಂಧವ್ಯ ಬೆಸೆಯುವಂತೆ ಆಚರಿಸಿಕೊಂಡು ಬಂದಿದ್ದಾರೆ. ಈ ಬಾರಿ ಗಣೇಶ ಉತ್ಸವ ಮತ್ತು ಬಕ್ರೀದ್‌ ಹಬ್ಬವು ಒಮ್ಮೆಗೆ ಆಚರಣೆಗೆ ಬರುತ್ತಿದ್ದರಿಂದ ಸೌಹಾರ್ದತೆ ಹೆಚ್ಚಿಸುವಂತಹದ್ದಾಗಿದೆ. ಗಣೇಶ ಉತ್ಸವ ಪ್ರತಿಷ್ಠಾಪನೆ ಆ. 25ರಂದು ಪ್ರಾರಂಭಗೊಂಡು ಸೆ. 2ರವೆಗೆ ಜರುಗುತ್ತದೆ. 2ರಂದೇ ಬಕ್ರೀದ್‌ ಹಬ್ಬ ಆಚರಿಸಲಾಗುತ್ತದೆ. ಈ ಗಣೇಶ ಉತ್ಸವ ಮತ್ತು ಬಕ್ರೀದ್‌ ಹಬ್ಬದ ಆಚರಣೆ ಸಮಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರದ ರೀತಿಯಲ್ಲಿ ಭಾಂದವ್ಯ ಬೆಸೆಯುಂತೆ ಎಲ್ಲರೂ ನಡೆದುಕೊಳ್ಳಬೇಕು. ಗಣೇಶ ಉತ್ಸವದ ಸಮಯದಲ್ಲಿ ಉತ್ಸವದ ಯುವಕ ಮಂಡಳಿಯವರು ನಿರ್ದಿಷ್ಟ ಪಡಿಸಿದ ಜಾಗೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ರಸ್ತೆಯಲ್ಲಿ ಜನರಿಗೆ ತಿರುಗಾಡಲು ಮತ್ತು ವಾಹನಗಳಿಗೆ ಸಂಚರಿಸಲು ಅನುಕೂಲ ಕಲ್ಪಿಸಿಕೊಂಡುವಂತಹ ಕಾರ್ಯಗಳನ್ನು ಮಾಡಬೇಕು. ಬಾಲಗಂಗಾಧರ ತಿಲಕ ಅವರು ಬ್ರಿಟಿಷರ ವಿರುದ್ಧ ಹೋರಾಡುವ ಸಲುವಾಗಿ ಜನರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವ ಸಲುವಾಗಿ ಬೀದಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಎಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸಿದ್ದರು ಎಂದರು. ಸಿಪಿಐ ರವಿಕುಮಾರ ಕಪ್ಪತ್ತೆನವರ ಮಾತನಾಡಿ, ಗಣೇಶ ಉತ್ಸವದ ಯುವಕ ಮಂಡಳಿಯವರಿಗೆ ಕೆಲವೊಂದಿಷ್ಟು ನಿಬಂಧನೆಗಳನ್ನು ಪೊಲೀಸ್‌ ಇಲಾಖೆ ಸಿದ್ಧಪಡಿಸಿದೆ. ಆಯಾ ನಿಬಂಧನೆಗಳಿಗೆ ತಕ್ಕಂತೆ ಉತ್ಸವ ಮಂಡಳಿಯವರು ನಡೆದುಕೊಂಡು ಹೋಗಬೇಕು. ಗಣೇಶ ಉತ್ಸವ ವಿಸರ್ಜನೆ ಸಮಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮತ್ತೂಂದು ಕೋಮಿನವರಿಗೆ ನೋವು ತರುವಂತಹ ಹಾಡುಗಳನ್ನು ಬಳಸಬಾರದು ಎಂದರು. ಪಿಒಪಿ ಗಣೇಶ ಮೂರ್ತಿಗಳು ನೀರನ್ನು ಕಲುಷಿತಗೊಳಿಸುವುದಷ್ಟೇ ಅಲ್ಲದೇ ಗಣೇಶ ಮೂರ್ತಿ ನೀರಿನಲ್ಲಿ ಮುಳುಗುವುದಿಲ್ಲ ಮತ್ತು ಕರುಗುವುದಿಲ್ಲ. ಆ ಸಮಯದಲ್ಲಿ ಕೆಲವು ಕುಚೇಷ್ಠಿಗಳು ಗಣೇಶ ಮೂರ್ತಿಗಳನ್ನು ಹೊರಗಡೆ ತೆಗೆದು ವಿಕೃತಿಗೊಳಿಸಿ ಅವಮಾನಿಸುವಂತಹ ಕಾರ್ಯ ನಡೆಯುತ್ತವೆ. ಇದನ್ನು ಉತ್ಸವ ಸಮಿತಿಯವರು ಅರ್ಥೈಸಿಕೊಂಡು ಶಾಂತತೆಯಿಂದ ಗಣೇಶ ಉತ್ಸವ ಆಚರಿಸಿ ಪಟ್ಟಣದಲ್ಲಿ ಶಾಂತಿ ಸಾಮರಸ್ಯ ಬಿತ್ತಲು  ದಾಗಬೇಕೆಂದರು. ಪುರಸಭೆ ಮುಖ್ಯಾಧಿಕಾರಿ ಎ.ಬಿ. ಕಲಾಲ್‌ ಮಾತನಾಡಿ, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಈ ಹಿಂದಿನಿಂದಲೂ ಡೋಣಿ ನದಿ ತೀರದಲ್ಲಿ ಹೊಂಡ ನಿರ್ಮಿಸಿಕೊಡಲಾಗುತ್ತದೆ. ಈ ಬಾರಿ ಎರಡು ಹೊಂಡಗಳನ್ನು ನಿರ್ಮಿಸಿಕೊಡುವ ವ್ಯವಸ್ಥೆ ಮಾಡಲಾಗುವದು. ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಗಳನ್ನು ಬಾವಿಯಲ್ಲಿ ವಿಸರ್ಜಿಸಬಾರದು ಎಂದರು. ಪಿಎಸ್‌ಐ ಎಂ.ಬಿ. ಬಿರಾದಾರ, ವಿಠ್ಠಲಸಿಂಗ್‌ ಹಜೇರಿ, ಗೈಬೂಸಾ ಮಕಾಂದಾರ, ಘನಶಾಮ ಚವ್ಹಾಣ, ಮೆಹಬೂಬ ಚೋರಗಸ್ತಿ, ಪರಶುರಾಮ ತಂಗಡಗಿ, ಅಣ್ಣಾಜಿ ಜಗತಾಪ, ಶಮಶುದ್ದೀನ ನಾಲಬಂದ, ಸಿದ್ದನಗೌಡ ಪಾಟೀಲ, ಪ್ರಭುಗೌಡ
ಮದರಕಲ್ಲ, ಖಾಜಾಹುಸೇನ ಡೋಣಿ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.