ಸಂಭ್ರಮದ ಚಂದ್ರಮ್ಮದೇವಿ ಜಾತ್ರೋತ್ಸವ


Team Udayavani, Feb 25, 2018, 3:31 PM IST

vij-4.jpg

ಆಲಮಟ್ಟಿ: ಈ ಭಾಗದ ಆರಾಧ್ಯ ದೈವ ಸಾಕ್ಷಾತ್‌ ಚಾಮುಂಡೇಶ್ವರಿ ಅವತಾರವೆಂದೇ ಖ್ಯಾತಿವೆತ್ತ ಚಂದ್ರಮ್ಮದೇವಿ ಜಾತ್ರಾ ಮಹೋತ್ಸವ ಮೂರು ದಿನ ವಿಜೃಂಭಣೆಯಿಂದ ನಡೆಯಿತು.

ಗುರುವಾರದಿಂದ ಆರಂಭಗೊಂಡಿದ್ದ ಜಾತ್ರಾ ಮಹೋತ್ಸವದಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಜಾತಿ, ಮತ, ಪಂಥ ಭೇದವಿಲ್ಲದೇ ಸರ್ವಧರ್ಮೀಯರೂ ಭಾಗವಹಿಸಿದ್ದರು. ಸಹಸ್ರಾರು ಭಕ್ತರು ಕೃಷ್ಣೆಯಲ್ಲಿ ಮಿಂದೆದ್ದು ಸಾಲಾಗಿ ನಿಂತು ದೇವಿ ದರ್ಶನ ಪಡೆದು ಪುನೀತರಾದರು.

ಚಂದ್ರಮ್ಮ ದೇವಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾಳೆಂಬ ನಂಬಿಕೆಯಿಂದ ಪ್ರತಿ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತರು ತಮಗೆ ಸಂತಾನಭಾಗ್ಯ, ಆರೋಗ್ಯ, ಕೌಟುಂಬಿಕ ಸಮಸ್ಯೆಗಳನ್ನು ತಮ್ಮ ಮನದಲ್ಲಿಯೇ ಬಗೆಹರಿಸುವಂತೆ ದೇವಿಯ ಕುರಿತು ಪ್ರಾರ್ಥಿಸಿದರೆ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆಯಿದೆ. ಆದ್ದರಿಂದ ನಮ್ಮ ಕುಟುಂಬದ ಸದಸ್ಯರೊಂದಿಗೆ ಆಗಮಿಸುತ್ತಿದ್ದೇನೆ ಎನ್ನುತ್ತಾರೆ ಮಹಾರಾಷ್ಟ್ರದ ಸಂಭಾಜಿ.

ಮನಸೋತ ಮಕ್ಕಳು: ಜಾತ್ರೆಯಲ್ಲಿ ವಿಶೇಷವಾಗಿ ಅಲಂಕರಿಸಿ ಎತ್ತರವಾಗಿ ಅಳವಡಿಸಿದ್ದ ಜಂಪಿಂಗ್‌ ಸ್ಟ್ಯಾಂಡ್‌, ಚಕ್ರ, ತೊಟ್ಟಿಲು, ಪುಟಾಣಿ ರೈಲು, ಜಾರುಬಂಡಿ ಸೇರಿದಂತೆ ಮನೋರಂಜನೆಗಾಗಿಯೇ ಆಗಮಿಸಿದ್ದ ವಿವಿಧ ಪರಿಕರಗಳಲ್ಲಿ ಮಕ್ಕಳು ಕುಳಿತು ಸಂಭ್ರಮಿಸುತ್ತಿದ್ದರೆ ಅವರ ಪಾಲಕರು ಮಕ್ಕಳ ಸಂಭ್ರಮವನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.

ಭರ್ಜರಿ ವ್ಯಾಪಾರ: ಬುಧವಾರ ಸಂಜೆಯಿಂದಲೇ ಆಗಮಿಸಿದ್ದ ಮಿಠಾಯಿ ಅಂಗಡಿಕಾರರು, ಬಳೆ ವ್ಯಾಪಾರಿಗಳು, ವಿವಿಧ ಖಾದ್ಯಗಳ ಹೋಟೆಲ್‌, ಕಬ್ಬಿನ ರಸ ತೆಗೆಯುವ ಯಂತ್ರಗಳ ವಾಹನಗಳು, ಹಲವಾರು ಬಗೆಯ ಐಸ್ಕ್ರೀಂ, ಕಲ್ಲಂಗಡಿ, ಕರಬೂಜ, ರೈತರಿಗೆ ಅವಶ್ಯವಾಗಿರುವ ಕೃಷಿ ಸಲಕರಣೆಗಳು, ಹಣ್ಣು ಕಾಯಿ, ಹೂವು, ಕಡು ಬಡವರಿಗೂ ಕೈಗೆಟಕುವ ದರದಲ್ಲಿ ಚೀನಿ ಮಣ್ಣಿನ ಕಪ್ಪು (ಪಿಂಗಾಣಿ), ಗಡಿಗೆ, ಮಡಿಕೆ, ಉಪ್ಪಿನಕಾಯಿ ಹಾಕುವ ಭರಣಿ, ಗೋಡೆ ಗಡಿಯಾರ, ಕೈಗಡಿಯಾರ ಸೇರಿದಂತೆ ನೂರಾರು ಬಗೆಯ ಅಂಗಡಿಗಳಲ್ಲಿ ಮೂರು ದಿನಗಳ ಕಾಲ ವ್ಯಾಪಾರ ಜೋರಾಗಿತ್ತು.

ದೇವಿ ದರ್ಶನಕ್ಕೆ ಆಗಮಿಸಿದ್ದ ಭಕ್ತರು ಕೇವಲ ಫಳಹಾರ ಖರೀದಿಸದೇ ಬಿದಿರಿನಿಂದ ತಯಾರಿಸಿದ ವಸ್ತುಗಳನ್ನು ಹಾಗೂ ಕುಂಕುಮ ಭಂಡಾರ ಖರೀದಿಯಲ್ಲಿ ತೊಡಗಿದ್ದರು.

ಲಂಬಾಣಿ ಉಡುಪಿಗೆ ಫಿದಾ: ಕಳೆದ ಮೂರು ದಿನಗಳಿಂದ ಚಂದ್ರಮ್ಮದೇವಿ ದರ್ಶನಕ್ಕೆ ಆಗಮಿಸುತ್ತಿರುವ ಲಂಬಾಣಿ ಮಹಿಳೆಯರು ದೇವಿ ದರ್ಶನ ಪಡೆದು ಬಾಗಲಕೋಟೆ ಹಾಗೂ ಇಳಕಲ್ಲಿನಿಂದ ಆಗಮಿಸಿದ್ದ ಲಂಬಾಣಿ ಉಡುಪುಗಳ ವ್ಯಾಪಾರಿಗಳಿಟ್ಟಿದ್ದ ಉಡುಪು ಪ್ರದರ್ಶನದಲ್ಲಿ ತಾ ಮುಂದು ನಾ ಮುಂದು ಖರೀದಿಯಲ್ಲಿ ತೊಡಗಿದ್ದರು.

ಭಕ್ತಿಗೆ ಬರವಿಲ್ಲ: ಇತ್ತೀಚೆಗೆ ರಾಜ್ಯದಲ್ಲಿ ಬರದ ಕರಾಳ ಛಾಯೆ ಆವರಿಸುತ್ತಿದ್ದರೂ ಕೂಡ ಭಕ್ತರು ಮಾತ್ರ ಪ್ರತಿ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಜ್ಯದಲ್ಲಿ ಸಮರ್ಪಕ ಮಳೆಗಾಲವಿಲ್ಲದೇ ಬೆಳೆಯಿಲ್ಲದೇ ಬರಗಾಲಕ್ಕೆ ತುತ್ತಾಗಿದ್ದರೂ ಕೂಡ ಭಕ್ತಿಗೆ ಬರವಿಲ್ಲ ಎನ್ನುವುದನ್ನು ತೋರಿದ್ದಾರೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.