ಬೆಳೆ ಪರಿಹಾರದಲ್ಲಿ ಕೇಂದ್ರ ತಾರತಮ್ಯ


Team Udayavani, Sep 21, 2020, 6:13 PM IST

ಬೆಳೆ ಪರಿಹಾರದಲ್ಲಿ  ಕೇಂದ್ರ ತಾರತಮ್ಯ

ವಿಜಯಪುರ: ಕಳೆದ ಬಾರಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಪರಿಹಾರ ರೂಪವಾಗಿ ನಷ್ಟ ಭರಿಸಲು ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್‌ ಅನುದಾನ ನೀಡದೇ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಎಸಗಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.

ತಮ್ಮ ಸ್ವಕ್ಷೇತ್ರ ಬಬಲೇಶ್ವರ ಗ್ರಾಮದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಬೋಳಚಿಕ್ಕಲಕಿ-ಗುಣದಾಳ 3.8 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪ್ರವಾಹದಿಂದ 34 ಸಾವಿರ ಕೋಟಿ ರೂ. ನಷ್ಟ ಉಂಟಾಗಿದ್ದು, ಕೇಂದ್ರ ಸರ್ಕಾರ 2000 ಕೋಟಿ ರೂ. ಮಾತ್ರ ಅನುದಾನ ನೀಡಿದೆ. 32 ಸಾವಿರ ಕೋಟಿ ರೂ. ನೀಡದ ಕೇಂದ್ರದ ವರ್ತನೆ ಕುರಿತು ಆಡಳಿತ ಪಕ್ಷದ ಯಾರೂ ಧ್ವನಿ ಎತ್ತುತ್ತಿಲ್ಲ. ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಬೀದಿಗೆ ಬಿದ್ದಿದ್ದ ಸಂತ್ರಸ್ತರು ಇನ್ನೂ ಬೀದಿಯಲ್ಲಿದ್ದಾರೆ. ಅವರ ಗೋಳಿಗೆ ಮುಕ್ತಿ ನೀಡಲು ರಾಜ್ಯ ಸರ್ಕಾರ, ಅದರ ಮಂತ್ರಿಗಳು ಚಕಾರ ಎತ್ತುತ್ತಿಲ್ಲ. ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಎಂ.ಬಿ. ಪಾಟೀಲ ಭರವಸೆ ನೀಡಿದರು.

ಈ ಭಾಗದಲ್ಲಿ ಸುಸಜ್ಜಿತ ರಸ್ತೆಯನ್ನು ನಿರ್ಮಿಸಲಾಗುತ್ತಿದ್ದು ಜನರು ತಕರಾರು ಸಹಕಾರ ನೀಡಬೇಕು ಎಂದರು. ಬೋಳಚಿಕ್ಕಲಕಿ ಗ್ರಾಮಕ್ಕೆ ಸುಸಜ್ಜಿತ ರಸ್ತೆ ನಿರ್ಮಿಸಲು ಮುಂದಾದ ಶಾಸಕ ಎಂ.ಬಿ. ಪಾಟೀಲ ಅವರನ್ನು ಗ್ರಾಮಸ್ತ ಗುರುಲಿಂಗಪ್ಪ ಅಂಗಡಿ ಸನ್ಮಾನಿದರು.

ಜಿಪಂ ಸದಸ್ಯೆ ದಾನಮ್ಮ ಅಂಗಡಿ, ಜಿಪಂ ಮಾಜಿ ಸದಸ್ಯ ಬಾಪುಗೌಡ ಪಾಟೀಲ ಶೇಗುಣಶಿ, ಬಬಲೇಶ್ವರ ತಾಪಂ ಅಧ್ಯಕ್ಷ ಸಂಗಪ್ಪ ತಿಮಶೆಟ್ಟಿ, ತಾಪಂ ಇಒ ಬಸವರಾಜ ಬಿರಾದಾರ, ಗುತ್ತಿಗೆದಾರ ಬಿ.ಆರ್‌. ನಂದಗೋಳ, ಅಭಿಯಂತರ ಎಂ.ಎ. ಪಾಟೀಲ, ಪಿಡಿಒ ರೇಖಾ ಪಾಟೀಲ, ಅಪ್ಪುಗೌಡ ಪಾಟೀಲ ಶೇಗುಣಶಿ, ಪ್ರಕಾಶ ಸೊನ್ನದ, ಸಂದೀಪ ಬಗಲಿ, ಅಶೋಕ ಕಾಖಂಡಕಿ, ಬಾಬುಗೌಡ ಪಾಟೀಲ, ಸಂಗಮೇಶ ಸಾಹುಕಾರ ಗುಣದಾಳ, ಸಂತೋಷ ಕುಲಕರ್ಣಿ, ಮುತ್ತಪ್ಪ ವಾಣಿ, ರಾಚಪ್ಪ ಅಂಗಡಿ, ಸಿದ್ದಪ್ಪ ಸಜ್ಜನ, ಡಾ| ಭರತ ಲೋನಾರಿ, ಮಲ್ಲಿಕಾರ್ಜುನ ಅಂಗಡಿ, ಸದಾಶಿವ ಸಜ್ಜನ, ಸೈಯದ್‌ ಅತ್ತಾರ, ಶೇಖು ಬಿರಾದಾರ ಇದ್ದರು.

ಕೋವಿಡ್ ಸಂಕಷ್ಟದಿಂದ ಜಗತ್ತೇ ತತ್ತರಿಸಿದ್ದು, ಎಷ್ಟೇ ನಿಯಮಗಳನ್ನು ಎಷ್ಟೇ ಕಟ್ಟುನಿಟ್ಟಾಗಿ ಪಾಲಿಸಿದರೂ ಕೋವಿಡ್‌ ನಿಯಂತ್ರ ಸಾಧ್ಯವಾಗಿಲ್ಲ. ರಾಜ್ಯಸಭಾ ನೂತನ ಸದಸ್ಯ ಅಶೋಕ ಗಸ್ತಿ,  ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ರವಿಗೌಡ ಪಾಟೀಲ ಧೂಳಖೇಡ ಹೀಗೆ ಹಲವು ಪ್ರಮುಖರು ಕೂಡ ಕೋವಿಡ್‌ ಸೋಂಕು ರೋಗಕ್ಕೆ ಬಲಿಯಾಗಿದ್ದಾರೆ. ಹೀಗಾಗಿ ಜನರು ಮಾರಕ ರೀತಿಯ ಪ್ರಭಾವ ಹೊಂದಿರುವ ಈ ರೋಗದ ಕುರಿತು ಜನರು ಜಾಗೃತೆ ವಹಿಸಬೇಕು. -ಎಂ.ಬಿ. ಪಾಟೀಲ, ಮಾಜಿ ಸಚಿವರು ಶಾಸಕರು, ಬಬಲೇಶ್ವರ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.