ಕೋವಿಡ್ ತಡೆಗೆ ಸಹಕರಿಸಿ: ಚವ್ಹಾಣ
ಗ್ರಾಮ ಪಂಚಾಯತಿ ಅಧಿಕಾರಿಗಳ ಸಭೆ
Team Udayavani, May 8, 2020, 1:41 PM IST
ಚಡಚಣ: ನಾಗಠಾಣ ಮತಕ್ಷೇತ್ರದ ಶಾಸಕ ಡಾ| ದೇವಾನಂದ ಚವ್ಹಾಣ ಇತ್ತೀಚೆಗೆ ನಂದರಗಿ, ಬರಡೋಲ, ಇಂಚಗೇರಿ, ದೇವರನಿಂಬರಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ತಡೆಗೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳು, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೋವಿಡ್ ತಡೆಗೆ ಶ್ರಮಿಸುತ್ತಿದ್ದಿರಿ. ಮೇಲಾಧಿಕಾರಿಗಳು ಹೇಳಿದ ವಿಚಾರ, ಸಲಹೆಗಳನ್ನು ಪರಿಪಾಲಿಸಬೇಕು. ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೊರ ಬಾರದಂತೆ ಜಾಗೃತಿ ಮೂಡಿಸಬೇಕು. ಬೇರೆ ಊರುಗಳಿಂದ ಯಾರಾದರೂ ಬಂದರೆ ಅವರನ್ನು ಪರೀಕ್ಷಿಸಿ ಅವರ ಮಾಹಿತಿ ಒದಗಿಸಬೇಕು. ವೈದ್ಯರು ಗ್ರಾಮದಲ್ಲೇ ವಾಸ್ತವ್ಯ ಹೂಡಿ ನಿಗಾ ವಹಿಸಬೇಕೆಂದು ಹೇಳಿದರು.
ಇದೇ ವೇಳೆಯಲ್ಲಿ ಶಾಸಕರು ಜಿಗಜೇವಣಿ ಹಾಗೂ ಇಂಚಗೇರಿ ಕೆರೆಗೆ ಭೇಟಿ ನೀಡಿ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಿಸಿದರು. ಎಪಿಎಂಸಿ ಉಪಾಧ್ಯಕ್ಷ ಬಾಬು ಚವ್ಹಾಣ ಮಾತನಾಡಿ, ಕೊರೊನಾ ತಡೆಗೆ ಸಾರ್ವಜನಿಕರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಹಾಕಿಕೊಂಡು ಸಹಕರಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಭಾರತಿ ಚವ್ಹಾಣ, ರವಿದಾಸ ಜಾಧವ, ಪಿಡಿಒ ದಾನಯ್ಯ ಕರಜಗಿಮಠ, ಎಂ.ಟಿ.ಬಿರಾದಾರ, ಭೀಮರಾಯಗೌಡ ಬಿರಾದಾರ, ಅಲ್ಲಿಸಾಬ್ ಚಡಚಣ, ಡಾ| ಶಮಶೇರಲಿ ಮುಲ್ಲಾ, ಜೈನುದ್ದೀನ್ ಪಠಾಣ, ಮಹಾದೇವ ನಾವಿ, ಜಿಲಾನಿ ವಾಲೀಕಾರ, ಅಂಬರೀಷ ಬೆಳ್ಳೇನವರ ಸೇರಿಗ್ರಾಪಂ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ