ಹಣ್ಣು ಬೆಳೆದು ಹಣ್ಣಾದ ಅನ್ನದಾತರು

ಮಾರುಕಟ್ಟೆಗೆ ಸಾಗಿಸಲಾಗದೇ ಹೊಲದಲ್ಲೇ ಹಾಳಾಗುತ್ತಿದೆ ಕಲ್ಲಂಗಡಿ-ಪೇರು

Team Udayavani, Apr 26, 2020, 12:07 PM IST

26-April-06

ಚಡಚಣ: ದೇವರ ನಿಂಬರಗಿ ಗ್ರಾಮದಲ್ಲಿ ಫಲವತ್ತಾಗಿ ಬೆಳೆದ ಕಲ್ಲಂಗಡಿ.

ಚಡಚಣ: ಕೋವಿಡ್ ಭೀತಿಗೆ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿದ್ದರಿಂದ ವ್ಯಾಪಾರ-ವಹಿವಾಟು ಸೇರಿದಂತೆ ಜನಜೀವನ ಆಸ್ತವ್ಯಸ್ತಗೊಂಡಿದೆ. ಇದರ ಪರಿಣಾಮ ಕೃಷಿ ಮೇಲೂ ಆಗುತ್ತಿದೆ. ಸೂಕ್ತ ಮಾರುಕಟ್ಟೆ ಸಿಗದೇ ಹಣ್ಣು, ತರಕಾರಿ ಇತರೆ ಬೆಳೆ ಬೆಳೆದ ರೈತರು ಮತ್ತಷ್ಟು ಸಾಲದ ಕೂಪಕ್ಕೆ ಸಿಲುಕುವಂತಾಗಿದೆ.

ಸಮೀಪದ ದೇವರ ನಿಂಬರಗಿ ಗ್ರಾಮದ ರೈತ ಶಬ್ಬೀರ್‌ ಗಜ್ಬರ್‌ ಮುಲ್ಲಾ ನಾಲ್ಕು ಎಕರೆ ಜಮೀನು ಹೊಂದಿದ್ದು, ಎರಡು ಎಕರೆ ಜಮೀನಿನಲ್ಲಿ ಇದೇ ಪ್ರಥಮ ಬಾರಿಗೆ ಕಲ್ಲಂಗಡಿ ಹಣ್ಣು ಬೆಳೆದಿದ್ದಾರೆ. ಇದಕ್ಕಾಗಿ 4 ಲಕ್ಷ ರೂ. ವೆಚ್ಚ ಮಾಡಿದ್ದಾರೆ. ಕಲ್ಲಂಗಡಿ ಬೆಳೆ ಉತ್ತಮವಾಗಿ ಬೆಳೆದಿದ್ದು, 5ರಿಂದ 6 ಲಕ್ಷ ರೂ. ಆದಾಯದ ನಿರೀಕ್ಷೆಯಲ್ಲಿದ್ದರು. ಆದರೆ ಲಾಕ್‌ಡೌನ್‌ ದಿಂದಾಗಿ ಸೂಕ್ತ ಮಾರುಕಟ್ಟೆ ಸಿಗದ್ದರಿಂದ ಮತ್ತು ಮಾರಾಟಗಾರರು ಹಣ್ಣುಗಳನ್ನು ಖರೀದಿಸಲು ಮುಂದೆ ಬಾರದ್ದರಿಂದ ಹಣ್ಣು ತೋಟದಲ್ಲೇ ಕೊಳೆಯುವಂತಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಕೋವಿಡ್ ಮಹಾಮಾರಿ ಬೆವರು ಹರಿಸಿ ದುಡಿವ ಅನ್ನದಾತನ ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಳ್ಳುವಂತೆ ಮಾಡಿದೆ. ರೈತರು ಬೆಳೆದ ಬೆಳೆ ಮಾರಾಟಕ್ಕೆ ಸರ್ಕಾರ ಮಾರಾಟಕ್ಕೆ ಅನುಕೂಲ ಕಲ್ಪಿಸಿಕೊಡಬೇಕಿದೆ. ಇದೇ ಗ್ರಾಮದ ಇನ್ನೋರ್ವ ರೈತ ಅಲ್ಲಿಸಾಬ್‌ ಭಂಡರಕವಟೆ ಎರಡು ಎಕರೆ ಹೊಲದಲ್ಲಿ 1400
ಪೇರು ಗಿಡಗಳನ್ನು ಬೆಳೆಸಿದ್ದಾನೆ. ಇದಕ್ಕಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ರೈತನ ಶ್ರಮಕ್ಕೆ ಪ್ರತಿಫಲವಾಗಿ ಉತ್ತಮ ಪೇರು ಬೆಳೆಯೂ ಸಹ ಬಂದಿದೆ. ಆದರೆ ಹಣ್ಣುಗಳನ್ನು ಮಾರುಕಟ್ಟೆಗೆ ಸಾಗಿಸಲಾಗುತ್ತಿಲ್ಲ. ನಿತ್ಯ ಹತ್ತಾರೂ ಟ್ರೇಗಳಷ್ಟು ಪೇರು ಹಣ್ಣು ಗಿಡದಿಂದ ಬಿದ್ದು ಹಾಳಾಗುತ್ತಿವೆ. ಇದರಿಂದ ಮನನೊಂದ ರೈತ ಪೇರು ಹಣ್ಣುಗಳನ್ನು ದನ-ಕರುಗಳಿಗೆ ತಿನ್ನಲು ಹಾಕುತ್ತಿದ್ದಾನೆ. ಹಿಂದಿನ ಬಾರಿ ಪೇರು ಹಣ್ಣುಗಳಿಂದ ಒಂದು ಲಕ್ಷ ಲಾಭ ಬಂದಿತ್ತು, ಹಿಂದಿನ ವರ್ಷಕ್ಕಿಂತ ಈ ವರ್ಷ ಫಲವತ್ತಾದ ಬೆಳೆ ಬಂದಿದ್ದು, ಹಣ್ಣುಗಳೂ ಉತ್ತಮವಾಗಿವೆ. ಹೀಗಾಗಿ ಸುಮಾರು 5 ಲಕ್ಷ ಆದಾಯದ ನಿರೀಕ್ಷೆ ಇತ್ತು. ಆದರೆ ಕೊರೊನಾ ಮಾರಿ ಇದಕ್ಕೆ ತಣ್ಣೀರೆರೆಚಿದೆ ಎನ್ನುತ್ತಾರೆ ರೈತರು.

ಈ ಭಾಗದ ರೈತರು ಬೆಳೆದ ಬೆಳೆ ಮಾರಾಟವಾಗದೇ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಇತ್ತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೆಳೆ ನಷ್ಟಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಕಾರ್ಯ ಮಾಡುವಂತಾಗಬೇಕು ಎಂಬುದು ರೈತರ ಒತ್ತಾಸೆಯಾಗಿದೆ.

ಶಿವಯ್ಯ ಐ. ಮಠಪತಿ

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.