ಅರಣ್ಯಾಧಿಕಾರಿ ಅಜೂರಗೆ ಮುಖ್ಯಮಂತ್ರಿ ಪದಕ ಪ್ರದಾನ

ನೆಡುತೋಪು ವಿಭಾಗದಲ್ಲಿನ ಅತ್ಯುತ್ತಮ ಸಾಧನೆಗೆ ಪುರಸ್ಕಾರ

Team Udayavani, Nov 24, 2020, 6:43 PM IST

ಅರಣ್ಯಾಧಿಕಾರಿ ಅಜೂರಗೆ ಮುಖ್ಯಮಂತ್ರಿ ಪದಕ ಪ್ರದಾನ

ಮುದ್ದೇಬಿಹಾಳ: ಅರಣ್ಯ ಇಲಾಖೆಯ ನೆಡುತೋಪು ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿ ತೋರಿಸಿದ ಹಿನ್ನೆಲೆ ಮುದ್ದೇಬಿಹಾಳ ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಂತೋಷಕುಮಾರ ಅಜೂರ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚಿನ್ನದ ಪದಕ ವಿತರಿಸಿ ಪುರಸ್ಕರಿಸಿದರು.

2017-2019 ಅವಧಿಯಲ್ಲಿನ ನೆಡುತೋಪು ಸಾಧನೆಗಾಗಿ ಈ ಪದಕ ವಿತರಿಸಲಾಗಿದೆ. ಸೋಮವಾರ ವಿಧಾನಸಭೆಯ ಬಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಆನಂದ ಸಿಂಗ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್‌ ಮೋಹನ್‌, ಅರಣ್ಯ ಇಲಾಖೆಯ ಅಪರ ಮುಖ್ಯ ಪ್ರಧಾನ ಕಾರ್ಯದರ್ಶಿ ಸಂದೀಪ ದವೆ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಬಿಎಸ್ಸಿ ಪದವೀಧರರಾಗಿರುವ ಸಂತೋಷ ಅವರು 2007ರಲ್ಲಿ ಅರಣ್ಯಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಸೇವೆಗೆ ಸೇರಿದರು. ಬೆಳಗಾವಿ ಜಿಲ್ಲೆ ಗೋಕಾಕ, ವಿಜಯಪುರ ಜಿಲ್ಲೆ ಇಂಡಿ ಭಾಗದಲ್ಲಿ ಸೇವೆ ಸಲ್ಲಿಸಿ 2017ರಿಂದ ಮುದ್ದೇಬಿಹಾಳ ತಾಲೂಕಿನ ವಲಯ ಅರಣ್ಯಾ ಧಿಕಾರಿಯಾಗಿ ಸೇವೆಯಲ್ಲಿದ್ದಾರೆ. ತಮ್ಮ ಅವ ಧಿಯಲ್ಲಿ ಒಂದು ಲಕ್ಷ ಸಸಿಗಳನ್ನು ನೆಟ್ಟು ಅವುಚಿಗುರಿ ಗಿಡವಾಗಿ, ಮರವಾಗಿಬೆಳೆಯುವಂತೆ ಮಾಡುವಲ್ಲಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ. ಮೀಸಲು ಅರಣ್ಯ ಪ್ರದೇಶದ ಜಮೀನು ಅತಿಕ್ರಮಣ, ಒತ್ತುವರಿ ತೆರವುಗೊಳಿಸಿಅದನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಂಡು ಅಲ್ಲಿ ನೆಡುತೋಪು ಬೆಳೆಸುವಲ್ಲಿಯೂ ಇವರ ಪಾತ್ರ ಮಹತ್ವದ್ದಾಗಿದೆ.

ಪದಕ ಸ್ವೀಕರಿಸಿದ ನಂತರ ಬೆಂಗಳೂರಿ ನಿಂದಲೇ ಉದಯವಾಣಿಯೊಂದಿಗೆಮಾತನಾಡಿದ ಅವರು, ನಾನು ನೇರವಾಗಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. 2017ರಿಂದ ಚಿನ್ನದ ಪದಕ ಕೊಟ್ಟು ಪ್ರೋತ್ಸಾಹಿಸುವಸಂಪ್ರದಾಯ ಜಾರಿಗೊಳಿಸಲಾಗಿತ್ತು.ಅರಣ್ಯ ಸಚಿವರಾದ ಆನಂದಸಿಂಗ್‌ ಅವರ ಪ್ರಯತ್ನದ ಫಲವಾಗಿ 2017, 2018, 2019ನೇ ಸಾಲಿನ ಸಾಧಕರಿಗೆ ಈಗ ಪುರಸ್ಕಾರ ನೀಡಲಾಗಿದೆ. ಪ್ರತಿ ವರ್ಷ ಮೂವರು ಆರ್‌ಎಫ್‌ಒಗಳನ್ನು ಆಯ್ಕೆ ಮಾಡಲಾಗುತ್ತದೆ. 2019ನೇ ಸಾಲಿನಲ್ಲಿ ರಾಜ್ಯದ ಮೂವರು ಆರ್‌ಎಫ್‌ ಒಗಳ ಪೈಕಿ ನಾನೂ ಒಬ್ಬನಾಗಿ ಪದಕಸ್ವೀಕರಿಸಿರುವುದು ಸಂತಸ ತಂದಿದೆ. ನನ್ನ ಜೊತೆಗೆ ವಿವಿಧ ವಿಭಾಗಗಳಲ್ಲಿ ಒಟ್ಟು 75ಸಾಧಕರು ಪದಕ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ ಚಿನ್ನದ ಪದಕ ನನಗೆ ಸಂದಿರುವುದು ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ಅಜೂರ ಅವರಿಗೆ ಪದಕ ದೊರೆತ ಹಿನ್ನೆಲೆ ಹರ್ಷ ವ್ಯಕ್ತಪಡಿಸಿರುವಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್‌.ಪಾಟೀಲ ನಡಹಳ್ಳಿ, ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಹಸಿರು ತೋರಣಬಳಗ, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಮುದ್ದೇಬಿಹಾಳ ತಾಲೂಕು ಸ್ಥಳೀಯಸಂಸ್ಥೆ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಜೂರ ಅವರನ್ನು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.