ನಿಯಮ ಪಾಲಿಸಿ ಅಪಘಾತ ತಪ್ಪಿಸಿ
ರಸ್ತೆ ಸುರಕ್ಷತಾ ಜಾಥಾದಿಂದ ಅಪಘಾತಗಳ ಸಂಖ್ಯೆ ಇಳಿಮುಖ: ರಾಮಚಂದ್ರ
Team Udayavani, Jan 17, 2020, 11:55 AM IST
ಚಿಕ್ಕಮಗಳೂರು: ಸರ್ಕಾರದಿಂದ ರಸ್ತೆ ಸುರಕ್ಷತಾ ಜಾಥಾ ಪ್ರಾರಂಭಗೊಂಡ ನಂತರ ಅಪಘಾತಗಳ ಸಂಖ್ಯೆಯಲ್ಲಿ ಗಣನೀಯ ಇಳಿಮುಖವಾಗಿದೆ ಎಂದು ಸಾರಿಗೆ ಇಲಾಖೆ ಅಧೀಕ್ಷಕ ಎಚ್.ಸಿ.ರಾಮಚಂದ್ರ ತಿಳಿಸಿದರು.
ಸಾರಿಗೆ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದ ಕತ್ರಿ ಮಾರಮ್ಮ ದೇವಸ್ಥಾನದಿಂದ ಆಜಾದ್ ಪಾರ್ಕ್, ಐ.ಜಿ.ರಸ್ತೆ ಮೂಲಕ ಟೌನ್ ಕ್ಯಾಂಟೀನ್ ವರೆಗೂ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಹನ ಸವಾರರು ವಾಹನ ಚಾಲನೆ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಸಂಚಾರ (ಟ್ರಾಫಿಕ್) ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಕೆ ಮಾಡಬಾರದೆಂದು ಸಲಹೆ ನೀಡಿದರು.
ಸಾರಿಗೆ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಮುರಗೇಂದ್ರ ಶಿರಾಳಕರ, ನಗರ ಪೊಲೀಸ್ ಠಾಣೆಯ ಪಿಎಸ್ಐ ತೇಜಸ್ವಿ, ಸಾರಿಗೆ ಇಲಾಖೆಯ ಸಿಬ್ಬಂದಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಂತಾದವರು ಭಾಗವಹಿಸಿದ್ದರು.