ಅಕ್ರಮ ಮಕ್ಕಳ ಸಾಗಾಣಿಕೆ: ವಿಜಯಪುರದ ಸ್ಟಾಫ್ ನರ್ಸ್ ಪೊಲೀಸರ ವಶಕ್ಕೆ


Team Udayavani, May 24, 2022, 4:47 PM IST

ಮಕ್ಕಳ ಸಹಾಯವಾಣಿ ಕೇಂದ್ರದ ಅಧಿಕಾರಿಗಳು

ಪೊಲೀಸರ ಸಹಾಯದಿಂದ ಮಕ್ಕಳ ಸಹಾಯವಾಣಿ ಕೇಂದ್ರದವರು ಅಕ್ರಮವಾಗಿ ಮಕ್ಕಳ ಸಾಕಾಣಿಕೆ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳನ್ನು ಸಂರಕ್ಷಣೆ ಮಾಡಿರುವುದು.

ವಿಜಯಪುರ: ‘ಉದಯವಾಣಿ’ ಪತ್ರಿಕೆ ಬೆಳಕಿಗೆ ತಂದಿದ್ದ ನವಜಾತ ಶಿಶುವಿನ ಮಾರಾಟ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಅಕ್ರಮ ಸಾಗಾಣಿಕೆಯ ಮತ್ತೊಂದು ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು, ನಾಲ್ಕು ಮಕ್ಕಳನ್ನು ರಕ್ಷಿಸಿದ್ದು, ಒಂದು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ.

ಕಾನೂನು ಬಾಹಿರವಾಗಿ ಹೆತ್ತವರಿಲ್ಲದ ನವಜಾತ ಶಿಶುಗಳನ್ನು ಪಡೆಯುತ್ತಿದ್ದ ಸ್ಟಾಪ್ ನರ್ಸ್ ಜಯಮಾಲಾ ಪಾಟೀಲ (ಬಿಜಾಪುರ) ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಬೇರೆಯವರಿಗೆ ಹಣ ನೀಡಿ ಮಕ್ಕಳನ್ನು ಪಾಲನೆ ಮಾಡಲಾಗುತ್ತಿದೆ ಎಂಬುದನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ.

ಸದರಿ ಸ್ಟಾಪ್ ನರ್ಸ್ ಚಡಚಣ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆಯಲ್ಲಿದ್ದು, ಮಕ್ಕಳ ಅಕ್ರಮ ಸಾಗಾಣಿಕೆ ಆರೋಪ ಎದುರಿಸುತ್ತಿದ್ದಾಳೆ. ಹೆತ್ತವರು ಇಲ್ಲದ 5 ವರ್ಷದ ಗಂಡು ಹಾಗೂ 3 ವರ್ಷದ ಹೆಣ್ಣು ಮಗುವನ್ನು ಕಾನೂನು ಬಾಹಿರವಾಗಿ ತನ್ನ ಮನೆಯಲ್ಲಿ ಇರಿಸಿಕೊಂಡು ಅಕ್ರಮವಾಗಿ ಈಕೆ ಸಾಕುತ್ತಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಬೆ ಬಂದಿದೆ.

ಇದಲ್ಲದೆ ನರ್ಸ್ ಜಯಮಾಲಾ ಪ್ರತಿ ತಿಂಗಳ 3 ಸಾವಿರ ರೂ. ಕೂಲಿ ನೀಡಿ ಇನ್ನಿಬ್ಬರು ಮಕ್ಕಳನ್ನು ಬೇರೆಯವರ ಬಳಿ ಇರಿಸಿ ಪಾಲನೆ ಮಾಡಿಸುತ್ತಿದ್ದಾಳೆ. ನಗರದ ಚಂದ್ರಮ್ಮ ಎಂಬರ ಬಳಿ 5 ವರ್ಷದ ಹೆಣ್ಣು ಮಗು ಹಾಗೂ ಶಾಂತಮ್ಮ ಎಂಬವರ ಬಳಿ 11 ತಿಂಗಳ ಶಿಶುವನ್ನು ಪಾಲನೆ ನೀಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ನರ್ಸ್ ಜಯಮಾಲಾ ಪಾಟೀಲ ಅಕ್ರಮವಾಗಿ ಮಕ್ಕಳನ್ನು ಸಾಕಾಣಿಕೆ ಮಾಡುವ ವಿಷಯ ತಿಳಿಯುತ್ತಲೇ ಮಕ್ಕಳ ಸಹಾಯವಾಣಿ ಕೇಂದ್ರದ ನಿರ್ದೇಶಕಿ ವಿಜಯಪುರ ಮಹಿಳಾ ಪೊಲೀಸ್ ಠಾಣೆಗೆ ಮೇ 20 ರಂದು ದೂರು ನೀಡಿದ್ದು, ಇಬ್ಬರು ಮಕ್ಕಳನ್ನು ಅಕ್ರಮವಾಗಿ ಮಕ್ಕಳನ್ನು ಪಡೆದು, ಪಾಲನೆ ಮಾಡಲು ಬೇರೆಯವರಿಗೆ ನೀಡಿದ್ದಾಗಿ ದೂರಿನಲ್ಲಿ ವಿವರಿಸಲಾಗಿತ್ತು.

ಮೇ 21 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿರುವ ಆರೋಪಿ ನರ್ಸ್ ಜಯಮಾಲಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಬೇರೆಯವರ ಬಳಿ ಪಾಲನೆಗೆ ಬಿಟ್ಟಿರುವ ಇಬ್ಬರು ಮಕ್ಕಳು ಮಾತ್ರವಲ್ಲದೇ ತನ್ನದೇ ಮನೆಯಲ್ಲಿ ಹೆತ್ತವರಿಲ್ಲದ 5 ವರ್ಷದ ಒಂದು ಗಂಡು ಮಗು ಹಾಗೂ 3 ವರ್ಷದ ಒಂದು ಹೆಣ್ಣು ಮಗುವನ್ನು ಪಾಲನೆ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಕೂಡಲೇ ಜಾಗೃತರಾದ ಪೊಲೀಸರು ಮಕ್ಕಳ ಸಹಾಯವಾಣಿ ಕೇಂದ್ರದ ದೂರು ಆಧರಿಸಿ ನಾಲ್ಕು ಮಕ್ಕಳನ್ನು ರಕ್ಷಿಸಿ, ಮಕ್ಕಳ ಸಂರಕ್ಷಣಾ ಘಟಕದ ಮೂಲಕ ನಗರದಲ್ಲಿರುವ ಶ್ರೀಸಿದ್ದೇಶ್ವರ ಮಕ್ಕಳ ದತ್ತು ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ನಾಲ್ಕು ಮಕ್ಕಳು ಮಾತ್ರವಲ್ಲದೇ 5 ವರ್ಷದ ಇನ್ನೊಂದು ಹೆಣ್ಣು ಮಗುವನ್ನು ಮಹಾರಾಷ್ಟ್ರದ ಸೋಲಾಪುರ ಪರಿಸರದಲ್ಲಿ ಬೇರೆಯವರಿಗೆ ಪಾಲನೆ ಮಾಡಲು ಅಕ್ರಮವಾಗಿ ತಾನು ನೀಡಿದ್ದಾಗಿ ತಿಳಿದು ಬಂದಿದೆ. ಸದರಿ ಮಗುವಿನ ರಕ್ಷಣೆಗಾಗಿ ಪೊಲೀಸರು ಸೋಲಾಪುರಕ್ಕೆ ತೆರಳಿದ್ದಾರೆ.

ಇದನ್ನೂ ಓದಿ:ಜಾತಿ ಸಮಾವೇಶ ಮಾಡುವ ಸಿದ್ಧರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ: ಎಚ್.ಡಿ.ಕುಮಾರಸ್ವಾಮಿ

ಈ ಮಧ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಸದರಿ ಪ್ರಕರಣದ ಹಿಂದೆ ಸ್ಟಾಪ್ ನರ್ಸ್ ಮಾತ್ರ ಇರುವಳೋ, ಬೇರೆಯವರ ಪಾತ್ರದ ದೊಡ್ಡ ಜಾಲವಿದಯೇ ಎಂಬುದನ್ನು ಪತ್ತೆ ಹೆಚ್ಚಲು ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಆನಂದಕುಮಾರ, ದೂರು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾನೂನು ಬಾಹಿರವಾಗಿ ಯಾರೂ ಮಕ್ಕಳನ್ನು ಪಾಲನೆ ಮಾಡುವ, ಮಾರಾಟ ಮಾಡುವ ಕೆಲಸಕ್ಕೆ ಮುಂದಾಗಬಾರದು. ಒಂದೊಮ್ಮೆ ಮಕ್ಕಳು ಇಲ್ಲದವರು ನಿಯಮಾನುಸಾರ ಷರತ್ತಿಗೆ ಒಳಪಟ್ಟು ದತ್ತು ಸ್ವೀಕಾರ ಕೇಂದ್ರದಿಂದ ಮಕ್ಕಳನ್ನು ಕಾನೂನು ಬದ್ಧವಾಗಿ ದತ್ತು ಪಡೆಯಬೇಕು ಎಂದು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.