ಮಕ್ಕಳ ಗ್ರಾಮಸಭೆ ಅಗತ್ಯ: ಪಾಟೀಲ
Team Udayavani, Nov 29, 2020, 5:41 PM IST
ಹೂವಿನಹಿಪ್ಪರಗಿ: ಶಾಲಾ ಮಕ್ಕಳ ಕೊರತೆಗಳನ್ನು ನೀಗಿಸಲು ಮಕ್ಕಳ ಗ್ರಾಮಸಭೆ ಸಹಕಾರಿಯಾಗಿದೆ ಎಂದು ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸಂಗನಗೌಡ ಪಾಟೀಲ ಹೇಳಿದರು.
ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಆರೋಗ್ಯ, ಶಿಕ್ಷಣ ಅವಶ್ಯವಾಗಿದೆ. ಮಕ್ಕಳು ಸಾಹಿತ್ಯ ಓದಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪಾಲಕರು ಮಕ್ಕಳಿಗೆ ಮನೆಯಲ್ಲಿಯೇ ತಿದ್ದಿ ಸಂಸ್ಕಾರ ನೀಡಬೇಕು. ಮಕ್ಕಳ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಗ್ರಾಪಂನವರುಎಲ್ಲ ರೀತಿ ಸಹಕಾರ ನೀಡಬೇಕೆಂದು ಹೇಳಿದರು.ತಾಪಂ ಇಒ ಭಾರತಿ ಚಲುವಯ್ಯ ಮಾತನಾಡಿ, ಪ್ರತಿ ಗ್ರಾಪಂನಲ್ಲಿ ಮಕ್ಕಳ ಗ್ರಾಮ ಸಭೆಗಳನ್ನು ನಡೆಸಿ ಶೈಕ್ಷಣಿಕತೊಂದರೆಗಳನ್ನು ನಿಭಾಯಿಸಲು ಮುಂದಾಗುವುದಾಗಿ ಹೇಳಿದರು.
ಜೆಡಿಎಸ್ ಮುಖಂಡ ರಾಜುಗೌಡ ಪಾಟೀಲ (ಕುದುರಿ ಸಾಲವಾಡಗಿ), ಬಿ.ಎಂ. ದೇಸಾಯಿ, ರುದ್ರಗೌಡ ಹಚಡದ, ಭೀಮನಗೌಡ ಹಚಡದ, ಜಾಕೀರ್ಹುಸೇನ್ ಶಿವಣಗಿ, ಅನಿಲಗೌಡ ಪಾಟೀಲ, ಡಾಣ ಹಸನ್ಸಾಬ ಢವಳಗಿ, ಎಸ್.ಬಿ. ಲಿಂಗರೆಡ್ಡಿ, ಬಿ.ಎಸ್. ಬಡಿಗೇರ, ಎಸ್.ಟಿ. ಕರಿಗಾರ, ಬೆಳ್ಳಿಪ್ಪ ಜೆಕ್ಕೆನಾಳ ಇದ್ದರು.
ಗ್ರಂಥಾಲಯದಲ್ಲಿ ಶಾಲಾ ಮಕ್ಕಳ ಹೆಸರು ನೋಂದಣಿ ಮಾಡಿಕೊಂಡು ಪುಸ್ತಕ ಕೊಡಲಾಯಿತು. ಗ್ರಾಪಂ ಕಾರ್ಯದರ್ಶಿ ಶೈಲಜಾ ಕೆ. ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳಾದ ಸಾನಿಯಾ ಚಿತ್ತಾಪುರ, ಶಶಿಕಾಂತ ಬಡಿಗೇರ, ರೋಹಿಣಿ ಹಾವರಗಿ, ದಾನಮ್ಮ ಅನಿಸಿಕೆ ಹಂಚಿಕೊಂಡರು. ಎಸ್.ಬಿ. ಬಾಗೇವಾಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ