ಮನೆಗಳಿಗೆ ಹಾನಿ: ಕಂದಾಯ ನಿರೀಕ್ಷಕರಿಂದ ಸಮೀಕ್ಷೆ
Team Udayavani, Apr 20, 2020, 3:41 PM IST
ಚಿಂಚೋಳಿ: ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ನಡೆಸಿದರು.
ಚಿಂಚೋಳಿ: ಪಟ್ಟಣದ ಹೊಸ ಭವಾನಿ ನಗರದಲ್ಲಿ ಗುಡುಗು ಮಿಂಚು ಮತ್ತು ಸಿಡಿಲಿನ ಆರ್ಭಟ ಹಾಗೂ ಬಿರುಗಾಳಿ ಸಮೇತ ಮಳೆ ಸುರಿದ ಪರಿಣಾಮ ಬಡವರ ಉಪಜೀವನಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಅಕಾಲಿಕ ಮಳೆ ಹಾಗೂ ಬಿರುಗಾಳಿ ಬೀಸಿದ ಪರಿಣಾಮ ಏಳು ಮನೆಗಳ ಮೇಲ್ಛಾವಣೆ ಸಂಪೂರ್ಣ ಗಾಳಿಗೆ ಹಾರಿ ಹೋಗಿವೆ. ಇದರಿಂದಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಧಾನ್ಯ, ದಿನ ನಿತ್ಯದ ಬದುಕಿಗೆ ಬೇಕಾಗುವ ಸಾಮಗ್ರಿಗಳು ಮಳೆ ನೀರಿನಿಂದ ಹಾನಿಯಾಗಿವೆ. ಜೋಳ,ಬ್ಯಾಳಿ, ಅಕ್ಕಿ, ಹಿಟ್ಟು ಇನ್ನಿತರ ಆಹಾರ ಸಾಮಗ್ರಿ ಮಳೆಯಲ್ಲಿ ನೆನೆದಿವೆ. ಅಡುಗೆ ಸಾಮಗ್ರಿಗಳ ಮೇಲೆ ಕಲ್ಲುಗಳು ಬಿದ್ದು ಒಡೆದಿವೆ. ಬಟ್ಟೆಗಳು ಹಾಳಾಗಿವೆ.
ಇನ್ನು ಕೆಲವರ ಬೆನ್ನು, ಕೈ-ಕಾಲುಗಳ ಮೇಲೆ ಕಲ್ಲುಗಳು ಬಿದ್ದಿದ್ದು ತೀವ್ರ ಗಾಯಗಳಾಗಿದ್ದು, ನಮಗೆ ಮತ್ತೆ ಮನೆ ಕಟ್ಟಿಕೊಳ್ಳಲು ಸರ್ಕಾರ ಸಹಾಯ ಒದಗಿಸಬೇಕು ಎಂದು ಇಸ್ಮಾಯಿಲ್ಶಾ, ಸಂತೋಷ ಮನವಿ ಮಾಡಿದ್ದಾರೆ. ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ, ಪುರಸಭೆ ಸಿಬ್ಬಂದಿ ಶರಣಪ್ಪ ಮಾಳಾಪುರ, ಮಶಾಖ ಮಳೆಯಿಂದಾದ ಹಾನಿ ಸಮೀಕ್ಷೆ ನಡೆಸಿದರು.
ಹೊಸ ಭವಾನಿ ನಗರದಲ್ಲಿ ಅನೇಕ ಜನರ ಮನೆಗಳಿಗೆ ಮಳೆ-ಗಾಳಿಯಿಂದ ಹಾನಿಯುಂಟಾಗಿದೆ. ಸರ್ಕಾರ ಇವರಿಗೆ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡರಾದ ಕೆ.ಎಂ. ಬಾರಿ, ಮಂಜಲೆ ಸಾಬ್ ತಹಶೀಲ್ದಾರ್ಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ