ಎರಡು ತಿಂಗಳಲ್ಲಿ ಕೃಷ್ಣಾ ತಾಂತ್ರಿಕ ಸಮಸ್ಯೆ ನಿವಾರಣೆ, ಅಧಿಸೂಚನೆ ಸಾಧ್ಯತೆ: ಬೊಮ್ಮಾಯಿ


Team Udayavani, Apr 26, 2022, 4:13 PM IST

ಎರಡು ತಿಂಗಳಲ್ಲಿ ಕೃಷ್ಣಾ ತಾಂತ್ರಿಕ ಸಮಸ್ಯೆ ನಿವಾರಣೆ, ಅಧಿಸೂಚನೆ ಸಾಧ್ಯತೆ: ಬೊಮ್ಮಾಯಿ

ವಿಜಯಪುರ: ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಹೊರಬಿದ್ದು ದಶಕವೇ ಕಳೆದಿದೆ. ಕೇಂದ್ರ ಸರ್ಕಾರ ಬರುವ 2-3 ತಿಂಗಳಲ್ಲಿ ತಾಂತ್ರಿಕ‌ ಸಮಸ್ಯೆ ಬಗೆಹರಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಅಧಿಸೂಚನೆ ಹೊರಬೀಳುತ್ತಲೇ ಬಜೆಟ್ ನಲ್ಲಿನ  ಘೋಷಿತ ಅನುದಾನದ ಹೊರತಾಗಿ ಕೃಷ್ಣಾ ಯೋಜನೆಗೆ ಅಗತ್ಯದ ಅನುದಾನ ಬಿಡುಗಡೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮಂಗಳವಾರ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆಯ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಅಂತಿಮ ತೀರ್ಪು ಹೊರ ಬಿದ್ದ ಬಳಿಕದ ಕಾನೂನು ಹೋರಾಟದ ತಾಂತ್ರಿಕ ಸಮಸ್ಯೆ ಇದೀಗ ಹಂತ ಹಂತವಾಗಿ ನಿವಾರಣೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಎರಡು-ಮೂರು ತಿಂಗಳಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಸೂಚನೆ ಹೊರ ಬೀಳುತ್ತಲೇ ಬಜೆಟ್ ನಲ್ಲಿ ನೀರಾವರಿ ಕಾರ್ಯಕ್ಕೆ ಘೋಷಿತ ಅನುದಾನ ಹೊರತಾಗಿ ಕೃಷ್ಷಾ ಮೇಲ್ದಂಡೆ ಯೋಜನೆಗೆ ಅಗತ್ಯ ಇರುವ ಪೂರ್ಣ ಅ‌ನುದಾನ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಆಲಮಟ್ಟಿ ಬಳಿ ಕೃಷ್ಣಾ ನದಗೆ ನಿರ್ಮಿಸಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ 524 ಮೀಟರಗೆ ಗೇಟ್ ಅಳವಡಿಸುವ ಕಾರ್ಯ, ಭೂಸ್ವಾಧೀನವಾದ, ಪರಿಹಾರ ವಿತರಣೆ, ಮುಳುಗಡೆ ಆಗಲಿರುವ 20 ಹಳ್ಳಿಗಳ ಪುನರ್ವಸತಿ ಕಾರ್ಯ ಸೇರಿದಂತೆ ಇಡೀ ಯೋಹನೆಗೆ ಅಗತ್ಯ ಇರುವ ಅನುದಾನ ನೀಡುವುದಾಗಿ ಘೋಷಿಸಿದರು. ರಾಜ್ಯದ ಪಾಲಿನ 130 ಟಿಎಂಸಿ ಅಡಿ ನೀರು ಬಳಸಿಕೊಂಡು ರಾಜ್ಯದ ಅನ್ನದಾತರ ಜಮೀನಿಗೆ ನೀರು ಹರಿಸಿ ಭೂದೇವಿಗೆ ಹಸಿರು ಹೊದಿಸುವ ಕಾರ್ಯ ಮಾಡುವಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಲಿದೆ ಎಂದರು.

ಇದನ್ನೂ ಓದಿ:ಹಿಜಾಬ್ ತೀರ್ಪಿನ ವಿರುದ್ಧದ ಮೇಲ್ಮನವಿ ಶೀಘ್ರ ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿ

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಷಯದಲ್ಲಿ ಅಖಂಡ ವಿಜಯಪುರ ಜಿಲ್ಲೆಯ ಜನರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಈ ನೆಲದ ಹಿಂದಿನವರು ತಮ್ಮ ಭವಿಷ್ಯವನ್ನೇ ತ್ಯಾಗ ಮಾಡಿದ್ದರಿಂದ ರಾಜ್ಯ ನಂದನವನವಾಗಿದೆ. ಹೀಗಾಗಿ ಈ ನೆಲದ ಜನತೆಯ ತ್ಯಾಗ ಸದಾ ಸ್ಮರಣೀಯ ಎಂದರು.

ಆದರೆ ವಿಜಯಪುರ ಜಿಲ್ಲೆ ನೀರಾವರಿ ಸೌಲಭ್ಯದಿಂದ ವಂಚಿತವಾಗಿದ್ದು, ಬರದ ನಾಡು ಎಂಬ ಅಪಕೀರ್ತಿಯ ಹಣೆಪಟ್ಟಿ ಕಟ್ಟಿಕೊಂಡಿದೆ. ಈ ಅಪಕೀರ್ತಿ ತೊಡೆದು ಹಾಕಿ, ಬರದ ನಾಡಿಗೆ ಜಲದ ನಾಡು ಎಂಬ ಅಭಿದಾನ ತಂದುಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲು ಬದ್ಧತೆ ತೋರುತ್ತೇನೆ ಎಂದರು.

ರಾಜ್ಯದಲ್ಲೇ ಕೆರೆಗೆ ತುಂಬುವ ಯೋಜನೆ ಅನುಷ್ಠಾನವನ್ನು 110 ಕೋಟಿ ರೂ. ಅನುದಾನ ನೀಡಿ, ವಿಜಯಪುರ ಜಿಲ್ಲೆಯಿಂದ ಯೋಜನೆ ಆರಂಭಿಸಿದ್ದು ನಾನು. ಆದರೆ ನೀರಾವರಿ ವಿಷಯದಲ್ಲಿ ಕೆಲವರು ಭಗೀರಥ ಎಂದು ಕರೆದುಕೊಳ್ಳುತ್ತಾರೆ. ಯಾರು ಬೇಕಾದರೂ ತಮ್ಮನ್ನು ಭಗೀರಥ ಎಂದು ಕರೆದುಕೊಳ್ಳಲಿ, ನನಗೆ ಭಗೀರಥ ಎಂದು ಕರೆಯುವುದು ಬೇಡ. ನಾಡಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಸಂತೃಪ್ತಿ ನನಗಿದೆ ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.