ಇಂಗ್ಲಿಷ್ನಲ್ಲಿ ಮಾತನಾಡಲು ಒಪ್ಪದ ಸಿಎಂ
Team Udayavani, Aug 19, 2017, 8:05 AM IST
ವಿಜಯಪುರ: ನಗರದಲ್ಲಿ ನಡೆದ ಮೂರು ದಿನಗಳ ಜಲ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ, ಇಂಗ್ಲಿಷ್ನಲ್ಲಿ ಮಾತನಾಡುವಂತೆ ಆಗ್ರಹ ಕೇಳಿ ಬಂದರೂ ಕನ್ನಡದಲ್ಲೇ ಮಾತನಾಡಿ ಮಾತೃಭಾಷಾ ಪ್ರೇಮ ಮೆರೆದರು.
ಕಾರ್ಯಕ್ರಮದಲ್ಲಿ ಕೈಗೊಂಡ ವಿಜಯಪುರ ನಿರ್ಣಯದ ಕುರಿತು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುತ್ತ ಕನ್ನಡದಲ್ಲೇ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ವಿವರಿಸುತ್ತಿದ್ದರು. ಈ ಹಂತದಲ್ಲಿ ರಾಷ್ಟ್ರೀಯ ಜಲ ಸಮಾವೇಶದಲ್ಲಿ ರಾಷ್ಟ್ರದ 101 ನದಿ ಪಾತ್ರದ ಎಲ್ಲ ರಾಜ್ಯಗಳ ಜನರು ಪಾಲ್ಗೊಂಡಿದ್ದಾರೆ. ಹೀಗಾಗಿ ಇಂಗ್ಲಿಷ್ನಲ್ಲಿ ಮಾತನಾಡಿ ಎಂಬ ಕೂಗು ಕೇಳಿಬಂತು. ಸಚಿವ ಎಂ.ಬಿ.ಪಾಟೀಲರೂ ಇದಕ್ಕೆ ಧ್ವನಿಗೂಡಿಸಿದರು. ಆಗ “ನೋ… ನೋ… ಐ ಡೋಂಟ್ ಟಾಕ್ ಇನ್ ಇಂಗ್ಲಿಷ್, ಸಚಿವ ಎಂ.ಬಿ. ಪಾಟೀಲ ಅವರು ಈಗಾಗಲೇ ಇದೇ ವಿಷಯಗಳನ್ನು ಇಂಗ್ಲಿಷ್ನಲ್ಲಿ ಓದಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದು ಭಾಷಣ ಮುಂದುವರಿಸಿದರು. ಆಗ ಸಭಿಕರಿಂದ ಸಿಎಂ ನಡೆ ಬೆಂಬಲಿಸಿ ಜೋರಾದ ಕೂಗು ಕೇಳಿಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ