ಫೆಬ್ರವರಿಯಲ್ಲಿ ಮುದ್ದೇಬಿಹಾಳಕ್ಕೆ ಸಿಎಂ ಭೇಟಿ
Team Udayavani, Dec 22, 2022, 11:33 AM IST
ಮುದ್ದೇಬಿಹಾಳ: ತಾಲೂಕಿನ ಸುಕ್ಷೇತ್ರ, ಐತಿಹಾಸಿಕ ಮತ್ತು ಧಾರ್ಮಿಕ ಕೇಂದ್ರವಾಗಿರುವ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ತಂಗಡಗಿ ಗ್ರಾಮಕ್ಕೆ ಫೆಬ್ರವರಿ ತಿಂಗಳ ಮೊದಲ ವಾರ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಗುರುವಾರ ಬೆಳಿಗ್ಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುದ್ದೇಬಿಹಾಳ ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಉಸ್ತುವಾರಿಯಲ್ಲಿ ಮತ್ತು ತಂಗಡಗಿಯ ಹಡಪದ ಅಪ್ಪಣ್ಣ ಮಹಾ ಸಂಸ್ಥಾನದ ಪೀಠಾಧಿಪತಿ ಅನ್ನದಾನ ಭಾರತಿ ಸ್ವಾಮೀಜಿ ನೇತೃತ್ವದ ನಿಯೋಗಕ್ಕೆ ಈ ಭರವಸೆ ನೀಡಿದ್ದಾರೆ.
ತಂಗಡಗಿ ಗ್ರಾಮದ ಸಮಗ್ರ ಅಭಿವೃದ್ದಿಗಾಗಿ ಶಾಸಕ ನಡಹಳ್ಳಿಯವರಿಗೆ ಮುಖ್ಯಮಂತ್ರಿಯವರು ಸಂಪೂರ್ಣ ಸಹಕಾರ ನೀಡಿರುವುದನ್ನು ನೆನಪಿಸಿದ ಸ್ವಾಮೀಜಿ, ಈಗಾಗಲೇ ಸರ್ಕಾರದ ಕೋಟಿ ಅನುದಾನದ ಸಮುದಾಯ ಭವನ ಪೂರ್ಣಗೊಂಡಿದೆ. ಜೊತೆಗೆ 3 ಕೋಟಿ ಅನುದಾನದ ಕಟ್ಟಡ ನಿರ್ಮಾಣ ಕೆಲಸವೂ ಪ್ರಾರಂಭಗೊಳ್ಳಲಿದೆ. ಹೀಗಾಗಿ ಸಮುದಾಯ ಭವನ ಉದ್ಘಾಟನೆ ಮತ್ತು ಕಟ್ಟಡ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಬೇಕು ಎಂದು ನಿಯೋಗ ಮನವಿ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂಧಿಸಿದರು. ಮಾತ್ರವಲ್ಲದೆ ಶಾಸಕ ನಡಹಳ್ಳಿ ಅವರ ಅದ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಿ ಶೀಘ್ರ ದಿನಾಂಕ ಕೊಡುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿಸಿ, ನಿಯೋಗದ ಮನವಿ ಆಲಿಸಲು ಮುಖ್ಯಮಂತ್ರಿಯವರ ಸಮಯ ಕೊಡಿಸಿದ ಶಾಸಕ ನಡಹಳ್ಳಿಯವರನ್ನು ಸ್ವಾಮೀಜಿ ನೇತೃತ್ವದ ನಿಯೋಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ