ಅಕ್ಷರ ಜಾತ್ರೆಗೆ ಸಂಪೂರ್ಣ ಸಿದ್ಧತೆ


Team Udayavani, Jan 28, 2019, 11:23 AM IST

vij-4.jpg

ತಾಳಿಕೋಟೆ: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ತಾಳಿಕೋಟೆ ಪಟ್ಟಣದಲ್ಲಿ ಜ. 28 ಹಾಗೂ 29ರಂದು ವಿಜಯಪುರ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಅಕ್ಷರ ಜಾತ್ರೆಗೆ ಪಟ್ಟಣ ನವ ವಧುವಿನಂತೆ ಅಲಂಕೃತಗೊಂಡು ಸಾಟಹಿತ್ಯಾಸಕ್ತರನ್ನು ಕೈ ಬೀಸಿ ಕರೆಯುತ್ತಿದೆ.

ಸಮ್ಮೇಳನ ಪ್ರಧಾನ ವೇದಿಕೆಗೆ ಖಾಸ್ಗತ ಶಿವಯೋಗಿಗಳ ಹೆಸರಿಡಲಾಗಿದೆ. ಮಹಾ ಮಂಟಪಕ್ಕೆ ದಿ| ವೀರಸಂಗಪ್ಪ ಹಗರಟಗಿ ಅವರ ಹೆಸರನ್ನು, ದ್ವಾರ 1ಕ್ಕೆ ಕೊಂಡಗೂಳಿ ಕೇಶಿರಾಜ, ದ್ವಾರ 2ಕ್ಕೆ ಬಂಥನಾಳ ಶಿವಯೋಗಿಗಳ, ಪುಸ್ತಕ ಮಳಿಗೆಗಳಿಗೆ ದಿ| ಎಂ.ಎಂ. ಕಲ್ಬುರ್ಗಿ, ಚಿತ್ರಕಲಾ ಪ್ರದರ್ಶನಕ್ಕೆ ದಿ| ಹಾಸಿಂಪೀರ್‌ ಚನ್ನೂರ ಹೆಸರು ಇಡಲಾಗಿದೆ.

ಪಟ್ಟಣದ ತುಂಬೆಲ್ಲ ಕನ್ನಡ ಕಲರವ ಪಸರಿಸಿದ್ದು ಪಟ್ಟಣದ ವಿಜಯಪುರ ವೃತ್ತದ ನಾಲ್ಕು ದ್ವಾರಗಳಿಗೆ ಸ್ವಾಗತ ಕೋರುವ ಕಮಾನಗಳು ವಿಜೃಂಭಿಸುತ್ತಿವೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪ್ರಾರಂಭಗೊಳ್ಳುವ ಮುಖ್ಯ ರಸ್ತೆಯಿಂದ ಹಿಡಿದು ಸಮ್ಮೇಳನ ಪ್ರಧಾನ ವೇದಿಕೆ ಎಚ್.ಎಸ್‌. ಪಾಟೀಲ ಕಾಲೇಜ್‌ ಮೈದಾನದವರೆಗೆ ಪರಪರಿಗಳಿಂದ ಅಲಂಕೃತಗೊಳಿಸಲಾಗಿದೆ.

ಪಟ್ಟಣದಲ್ಲಿ ನಡೆಯುತ್ತಿರುವ ಈ ಕನ್ನಡ ಜಾತ್ರೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸಾಕಷ್ಟು ಜನ ಆಗಮಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ಐತಿಹಾಸಿಕ ಪಟ್ಟಣ ತಾಳಿಕೋಟೆಯ ಮೆರಗು ಹೆಚ್ಚಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಸರ್ವ ರೀತಿಯಿಂದ ಮುನ್ನಡೆದಿದೆ.

ಸಮ್ಮೇಳನ ಪ್ರಧಾನ ವೇದಿಕೆ 20X70 ಅಳತೆಯಲ್ಲಿ ನಿರ್ಮಿಸಿದ್ದು 140X200 ಅಳತೆಯ ಪೆಂಡಾಲ್‌ ಹಾಕಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ, ಕನ್ನಢಾಭಿಮಾನಿಗಳಿಗಾಗಿ ಸುಮಾರು 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ರಸದೌತಣಕ್ಕೆ ಮೆರಗು ನೀಡುವ ಸಾಹಿತ್ಯದ ಜ್ಞಾನ ಭಂಡಾರ ಬಿತ್ತುವ ಮಳಿಗೆಗಳ ಸಂಖ್ಯೆ ರಾಜ್ಯ ಸಮ್ಮೇಳನ ರೀತಿಯಲ್ಲಿ ಸುಮಾರು 50 ಮಳಿಗೆಗಳ ಬೇಡಿಕೆಗಳು ಬಂದಿದ್ದು ಅವುಗಳ ನಿರ್ವಹಣೆಗಾಗಿ ಎಲ್ಲ ರೀತಿಯಿಂದಲೂ ಮಳಿಗೆಗಳನ್ನು ಸಿದ್ಧ ಪಡಿಸಲಾಗಿದೆ.

ಕನ್ನಢಾಭಿಮಾನಿಗಳ ಅತಿಥಿಗಳ ಊಟದ ವ್ಯವಸ್ಥೆಗೆ ಸಂಗಮಾರ್ಯ ವಿದ್ಯಾ ಸಂಸ್ಥೆಯ ಎರಡು ಬೃಹತ್‌ ಸಭಾಭವನಗಳನ್ನು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಅತಿಥಿ ಮಹೋದಯರಿಗೆ ವಿಶ್ರಾಂತಿಗೆ ಪಟ್ಟಣದ ವಿವಿಧ ಶಾಲೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಒಟ್ಟಾರೆ ಪಟ್ಟಣದಲ್ಲಿ ಎರಡು ದಿನ ನಡೆಯಲಿರುವ ಸಮ್ಮೇಳನವನ್ನು ರಾಜ್ಯ ಸಮ್ಮೇಳನ ಮಾದರಿಯಲ್ಲಿ ಜರುಗಿಸಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಪಟ್ಟಣ ಅಲಂಕೃತಗೊಂಡಿದ್ದ ಸಾಹಿತ್ಯಾಭಿಮಾನಿಗಳಿಗೆ, ಕನ್ನಢಾಭಿಮಾನಿಗಳಿಗೆ ಕೈ ಬೀಸಿ ಕರೆಯುತ್ತಿದೆ.

ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ
ತಾಳಿಕೋಟೆ:
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ವಿಜಯಪುರ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜ. 28 ಹಾಗೂ 29ರಂದು ತಾಳಿಕೋಟೆ ಪಟ್ಟಣದಲ್ಲಿ ನಡೆಯಲಿದೆ. ಎಸ್‌.ಎಸ್‌. ವಿದ್ಯಾ ಸಂಸ್ಥೆ ಆವರಣದಲ್ಲಿ 28ರಂದು ಬೆಳಗ್ಗೆ 8ಕ್ಕೆ ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಪರಿಷತ್‌, ಕಸಾಪ ತಾಲೂಕಾಧ್ಯಕ್ಷೆ ಸುಮಂಗಲಾ ಕೊಳೂರ ನಾಡ ಧ್ವಜಾರೋಹಣ ನೆರವೇರಿಸುವರು. 8:30ಕ್ಕೆ ಸಮ್ಮೇಳನಾಧ್ಯಕ್ಷ ಬಿ.ಆರ್‌. ಪೊಲೀಸ್‌ಪಾಟೀಲ ಅವರ ಮೆರವಣಿಗೆ ಪ್ರಾರಂಭಗೊಳ್ಳಲಿದ್ದು ಪ್ರಮುಖ ಬೀದಿಗಳ ಮೂಲಕ ಬಸ್‌ ನಿಲ್ದಾಣದ ಮುಂಭಾಗದ ರಸ್ತೆಯಿಂದ ಸಮ್ಮೇಳನದ ಮುಖ್ಯ ವೇದಿಕೆಗೆ ಕರೆ ತರಲಾಗುವುದು. ಬೆಳಗ್ಗೆ 11ಕ್ಕೆ ಸಮ್ಮೇಳನದ ಉದ್ಘಾಟನಾ ಸಮಾರಂಭ ಜರುಗಲಿದೆ. ಮಧ್ಯಾಹ್ನ 2ಕ್ಕೆ ”ನಾಡು ನುಡಿ” ಗೋಷ್ಠಿ 1 ನಡೆಯಲಿದ್ದು ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ| ಚನ್ನಪ್ಪ ಕಟ್ಟಿ ವಹಿಸುವರು. 3:30ಕ್ಕೆ ಕೃಷಿ ಸಂಪದ ಗೋಷ್ಠಿ ನಡೆಯಲಿದ್ದು ಅಧ್ಯಕ್ಷತೆಯನ್ನು ವಿಶ್ರಾಂತ ಕುಲಪತಿ ಡಾ| ಅಶೋಕರಾಜ ಪಾಟೀಲ ವಹಿಸುವರು. ಸಾಯಂಕಾಲ 5ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಜರುಗಲಿದ್ದು ಪ್ರಧಾನ ನಿರ್ವಹಣೆಯನ್ನು ಮಲ್ಲಿಕಾರ್ಜುನ ಮೇತ್ರಿ, ಡಾ| ಎಸ್‌.ಕೆ. ಕೊಪ್ಪ, ದ್ರಾಕ್ಷಾಯಿಣಿ ಬಿರಾದಾರ, ಗೀತಯೋಗಿ ಪಾಲ್ಗೊಳ್ಳುವರು. ಸಂಜೆ 6ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವವು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.