ಮೋದಿ ವಿರುದ್ದ ಕಾಂಗ್ರೆಸ್‌ ಸಂಚು: ಬಿಜೆಪಿ ಪ್ರತಿಭಟನೆ


Team Udayavani, Jan 11, 2022, 5:32 PM IST

ಮೋದಿ ವಿರುದ್ದ ಕಾಂಗ್ರೆಸ್‌ ಸಂಚು: ಬಿಜೆಪಿ ಪ್ರತಿಭಟನೆ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್‌ ಸಂಚು ರೂಪಿಸುತ್ತಿದೆ ಎಂದು ಆರೊಪಿಸಿ ಬಿಜೆಪಿ ಎಸ್ಸಿ ಮೋರ್ಚಾದಿಂದ ನಗರದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿ, ಮೌನ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ನರಗದ ಜಿಪಂ ಎದುರು ಇರುವ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಬಳಿ ಕಪ್ಪು ಬಟ್ಟೆ ಪ್ರದರ್ಶಿಸಿ, ಮೌನವಾಗಿ ಪ್ರತಿಭಟನೆ ನಡೆಸಿದ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು, ಕಾಂಗ್ರೆಸ್‌ ಹಾಗೂ ಪಂಜಾಬ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ವೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಮಾತನಾಡಿ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪಂಜಾಬ ರಾಜ್ಯದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಆಡಳಿತದ ಸರ್ಕಾರ ಪ್ರಧಾನಿಯನ್ನು 20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ಕಾಯುವಂತೆ ಮಾಡಿತ್ತು. ಇದು ಪ್ರಧಾನಿ ಭದ್ರತೆ ವಿಷಯದಲ್ಲಿ ನಡೆಸಿದ ಸಂಚು ಹಾಗೂ ಇಡಿ ದೇಶಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿದರು.

ಪಂಜಾಬ್‌ ಸರ್ಕಾರವನ್ನು ತಕ್ಷಣ ವಜಾ ಮಾಡಬೇಕು. ಸಂಖ್ಯಾಬಲವನ್ನು ಕಳೆದುಕೊಂಡ ಕಾಂಗ್ರೆಸ್‌ ದಿಕ್ಕಿಲ್ಲದಂತಾಗಿದ್ದು, ಇಂಥ ಹೀನ ಕೃತ್ಯ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದೇ ಕೀಳು ಮಟ್ಟದ ಕೃತ್ಯದಲ್ಲಿ ತೊಡಗಿರುವ ಕಾಂಗ್ರೆಸ್‌ ರಾಜಕಾರಣ ಮಾಡುವಲ್ಲಿ ನೈತಿಕತೆ ಕಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಘಟಕಾಂಬಳೆ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ವಿಶೇಷ ಗೌರವ ತಂದುಕೊಟ್ಟೊರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್‌ ಸಂಚು ರೂಪಿಸಿದ್ದು ಖಂಡನೀಯ. ಪ್ರಧಾನಿ ಭದ್ರತೆ ವಿಷಯದಲ್ಲಿ ನಿರ್ಲಕ್ಷé ತೋರಿದ ಅಲ್ಲಿನ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ ಜೋಶಿ, ಕಾಂತು ಶಿಂಧೆ, ಮಳುಗೌಡ ಪಾಟೀಲ, ರಾಜಕುಮಾರ ಸಗಾಯಿ, ರಾಜೇಶ ತವಸೆ, ರಾಜಶೇಖರ, ಬಸವರಾಜ ಹೂಗಾರ, ಉದಯ ಕನ್ನೊಳ್ಳಿ, ರಮೇಶ ದೇವಕರ, ಸದಾಶಿವ ಚಲವಾದಿ, ರಮೇಶ ದೇವಕರ, ಉದಕ ಕನ್ನೊಳ್ಳಿ, ಪ್ರಕಾಶ ಇರಕಲ, ಕಾಂತು ಶಿಂದೆ, ಉದಯ ಘಟಕಾಂಬಳೆ, ಪ್ರದೀಪ ಬಿಸನಾಳ, ಮುಕೇಶ, ಬಾಜಿರಾವ ಡೇರೆ, ಪವನ ನಾಯಕ, ರಾಜೇಶ, ಪಿಂಟು, ವಿನಯ, ಕಾಶಿನಾಥ್‌, ಪ್ರವೀಣ ಘಟಕಾಂಭಲೆ, ವಿನಯ ಬಬಲೇಶ್ವರ, ಬಾಬು, ಮಾನೆ, ಮಾಂತು, ಮಾಧು, ಸಚಿವನ, ಯುವರಾಜ, ರಾಜು, ವಿಜಯ, ಸಲೀಂ, ಸುರೇಶ, ಶಬ್ಬೀರ್‌, ಸಾಗರ, ಹನಮಂತ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.