ಪ್ರತ್ಯೇಕ ಧರ್ಮ:ಲೋಕ ವಿರಾಮ
Team Udayavani, Dec 16, 2018, 6:00 AM IST
ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತಂತೆ ಲೋಕಸಭೆ ಚುನಾವಣೆ ಬಳಿಕ ನಿರ್ಣಾಯಕ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವ ಕ್ರಮ ಸರಿಯಲ್ಲ ಎಂದಿದ್ದಾರೆ.
ಪ್ರತ್ಯೇಕ ಧರ್ಮ ಮಾನ್ಯತೆ ಕುರಿತು ನಮ್ಮ ಹೋರಾಟ ಗುರಿ ಮುಟ್ಟುವವರೆಗೆ ನಿಲ್ಲುವುದಿಲ್ಲ. ಲೋಕಸಭೆ ಚುನಾವಣೆ ಬಳಿಕ ಈ ಹೋರಾಟಕ್ಕೆ ನಿರ್ಣಾಯಕ ಸ್ವರೂಪ ನೀಡಲಿದ್ದೇವೆ. ಈಗಲೇ ಹೋರಾಟಕ್ಕೆ ಚಾಲನೆ ನೀಡಿದರೆ ಲೋಕಸಭೆ ಚುನಾವಣೆ ಕಾರಣಕ್ಕೆ ಎಂದು ರಾಜಕೀಯ ಬಣ್ಣ ನೀಡಲಾಗುತ್ತದೆ. ಹೀಗಾಗಿ ಅಲ್ಲಿಯವರೆಗೆ ಶಾಂತವಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಹೋರಾಟ ನಡೆಸುತ್ತೇವೆ ಎಂದರು.
ಲಿಂಗಾಯತರು 12ನೇ ಶತಮಾನದಿಂದ ಇಂದಿನವರೆಗೂ ಎಂದೂ ವೀರಶೈವರಾಗಿಲ್ಲ. ಸ್ವಾತಂತ್ರÂ ಪೂರ್ವದಿಂದಲೇ 1871ರಿಂದಲೂ ಲಿಂಗಾಯತರು ಚಾತುರ್ವರ್ಣ ವ್ಯವಸ್ಥೆಯಿಂದ ದೂರ ಇದ್ದೇವೆ ಎಂಬುದಕ್ಕೆ ಐತಿಹಾಸಿಕ ದಾಖಲೆ ಸಹಿತ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಕನಿಷ್ಠ ಪರಿಶೀಲನೆಗೂ ಮುಂದಾಗಿಲ್ಲ ಎಂಬುದು ಅವರ ನಿರ್ಧಾರದಿಂದ ಸ್ಪಷ್ಟವಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ